ಸಾಲ ವಸೂಲಿಗೆ ಯುವಕನ ಕಿಡ್ನಾಪ್…30 ಜನರ ತಂಡದಿಂದ ಕೃತ್ಯ ಆರೋಪ..7 ಮಂದಿ ಅರೆಸ್ಟ್…

ಸಾಲ ವಸೂಲಿಗೆ ಯುವಕನ ಕಿಡ್ನಾಪ್…30 ಜನರ ತಂಡದಿಂದ ಕೃತ್ಯ ಆರೋಪ..7 ಮಂದಿ ಅರೆಸ್ಟ್…

ಮೈಸೂರು,ಜು17,Tv10 ಕನ್ನಡಕೊಟ್ಟ ಸಾಲ ವಸೂಲಿ ಮಾಡಲು ಯುವಕನನ್ನ ಮಾರಕಾಸ್ತ್ರಗಳನ್ನ ತೋರಿಸಿ ಬಲವಂತವಾಗಿ ಎಳೆದೊಯ್ದು ಅಕ್ರಮವಾಗಿ ಬಂಧನದಲ್ಲಿರಿಸಿದ ಘಟನೆ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನಡೆದಿದೆ.ಸುಮಾರು 30 ಮಂದಿ ತಂಡದಿಂದ ಕೃತ್ಯ ನಡೆದಿದೆ.ಪ್ರಕರಣ ದಾಖಲಿಸಿಕೊಂಡ ಕುವೆಂಪುನಗರ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ 7 ಮಂದಿಯನ್ನ ಬಂಧಿಸಿದ್ದಾರೆ.ವಾಜಮಂಗಲ ನಿವಾಸಿ ಹಾಗೂ ಆದಿಚುಂಚನಗಿರಿ ಕಾಲೇಜಿನ ವಿಧ್ಯಾರ್ಥಿಯಾಗಿದ್ದ ದರ್ಶನ್(20) ಅಪಹರಣಕ್ಕೆ ಒಳಗಾದ ಯುವಕ.ಪವನ್ ಹಾಗೂ ಈತನ ಸ್ನೇಹಿತರು ಅಪಹರಿಸಿದ ಆರೋಪಿಗಳು.ಜುಲೈ 13 ರಂದು ದರ್ಶನ್ ದಟ್ಟಗಳ್ಳಿಯ ಲೆಮೆನ್ ಟ್ರೀ ಹೋಟೆಲ್ ಬಳಿ ಇದ್ದಾಗ ಏಕಾಏಕಿ ಬಂದ ಪವನ್ ಹಾಗೂ 30 ಮಂದಿ ತಂಡ ಮಾರಕಾಸ್ತ್ರಗಳನ್ನ ತೋರಿಸಿ ಬೆದರಿಸಿ ವಾಹನವೊಂದರಲ್ಲಿ ಬಲವಂತವಾಗಿ ಕರೆದೊಯ್ದಿದ್ದಾರೆ.ಪವನ್ ನಿಂದ ದರ್ಶನ್ ಸಾಲ ಪಡೆದಿದ್ದ ಎನ್ನಲಾಗಿದೆ.ಸಮಯಕ್ಕೆ ಸರಿಯಾಗಿ ದರ್ಶನ್ ಹಣ ಹಿಂದಿರುಗಿಸಿಲ್ಲ.ಇದೇ ವಿಚಾರದಲ್ಲಿ ಪವನ್ ತನ್ನ ಸ್ನೇಹಿತರ ಜೊತೆ ಸೇರಿ ದರ್ಶನ್ ನ ಬಲವಂತವಾಗಿ ಕರೆದೊಯ್ದಿದ್ದಾನೆ.ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಣ ಪೀಕಲು ಯತ್ನಿಸಿದ್ದಾನೆ.ಸುಮಾರು 3 ಗಂಟೆಗಳ ಕಾಲ ಬಂಧನದಲ್ಲಿರಿಸಿ ಹಿಂಸೆ ನೀಡಿದ್ದಾನೆ ಎನ್ನಲಾಗಿದೆ.ಪವನ್ ಕಪಿಮುಷ್ಠಿಯಿಂದ ದರ್ಶನ್ ತಪ್ಪಿಸಿಕೊಂಡು ಬಂದಿದ್ದಾನೆ.ಈ ವಿಚಾರ ಮನೆಯಲ್ಲಿ ಹೇಳಿದ್ರೆ ಕೊಲೆ ಮಾಡುವುದಾಗಿ ಪವನ್ ಎಚ್ಚರಿಕೆ ನೀಡಿದ್ದಾನೆ.ಈ ಸಂಭಂಧ ದರ್ಶನ್ ತಂದೆ ಉಮೇಶ್ ರವರು ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಘಟನೆ ನಡೆದ 24 ಗಂಟೆಯಲ್ಲಿ ಪವನ್ ಸೇರಿದಂತೆ 7 ಮಂದಿಯನ್ನ ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *