ಕೊನೆಗೂ ಎಚ್ಚೆತ್ತ ಜನಪ್ರತಿನಿಧಿಗಳು…ಜನರ ಸಂಕಷ್ಟ ಆಲಿಸಿದ ಶಾಸಕ ದರ್ಶನ್ ಧೃವನಾರಾಯಣ್…ಸಭೆಗೆ ಮಾತ್ರ ಸೀಮಿತವಾದ ಸಂಸದ ಸುನಿಲ್ ಬೋಸ್…

ಕೊನೆಗೂ ಎಚ್ಚೆತ್ತ ಜನಪ್ರತಿನಿಧಿಗಳು…ಜನರ ಸಂಕಷ್ಟ ಆಲಿಸಿದ ಶಾಸಕ ದರ್ಶನ್ ಧೃವನಾರಾಯಣ್…ಸಭೆಗೆ ಮಾತ್ರ ಸೀಮಿತವಾದ ಸಂಸದ ಸುನಿಲ್ ಬೋಸ್…

ನಂಜನಗೂಡು,ಜು21,Tv10 ಕನ್ನಡಕಪಿಲೆಯ ಪ್ರವಾಹಕ್ಕೆ ತತ್ತರಿಸಿರುವ ನಂಜನಗೂಡು ಜನರ ಸಂಕಷ್ಟಕ್ಕೆ ಶಾಸಕ ದರ್ಶನ್ ಧೃವನಾರಾಯಣ್ ಸ್ಪಂದಿಸಿದ್ದಾರೆ.ಆದ್ರೆ ಸಂಸದ ಸುನಿಲ್ ಬೋಸ್ ರವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದು ಕಾಲ್ಕಿತ್ತಿದ್ದಾರೆ.ಸುನಿಲ್ ಬೋಸ್ ರವರ ನಡೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಕಬಿನಿ ಜಲಾಶಯದಿಂದ ಹೊರಹರಿವು ಹೆಚ್ಚಾದ ಹಿನ್ನಲೆ ಕಪಿಲೆಯ ನದಿ ಪಾತ್ರದಲ್ಲಿರು ಜನ ತತ್ತರಿಸಿದ್ದಾರೆ.ತಗ್ಗು ಪ್ರದೇಶಗಳಿಗೆ ನುಗ್ಗಿ ನೀರು ಆಸ್ತಿಪಾಸ್ತಿಗಳನ್ನ ಅಪೋಷನ ತೆಗೆದುಕೊಂಡಿದೆ.ಮನೆ ಮಠಗಳಿಂದ ಹೊರಗುಳಿದ ಜನನಿರಾಶ್ರಿತರಾಗಿ ಗಂಜಿ ಕೇಂದ್ರ ಆಶ್ರಯ ಪಡೆದಿದ್ದಾರೆ.ಜನರ ಸಂಕಷ್ಟಗಳಿಗೆ ತಾಲೂಕು ಅಧಿಕಾರಿಗಳು ಸ್ಪಂದಿಸಿ ಪರಿಹಾರ ವಿತರಿಸುವ ಪ್ರಕ್ರಿಯೆಗೆ ಮುಂದಾಗಿದ್ದಾರೆ.ಇಷ್ಟೆಲ್ಲಾ ಬೆಳವಣಿಗೆಗಳಾಗಿ ಜನ ಬವಣೆ ಅನುಭವಿಸುತ್ತಿದ್ದರೂ ಜನಪ್ರತಿನಿಧಿಗಳು ಇತ್ತ ಸುಳಿದಿರಲಿಲ್ಲ.ಈ ವಿಚಾರವಾಗಿ Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಮಾಡಿ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿತ್ತು.ಎಚ್ಚೆತ್ತ ಶಾಸಕ ದರ್ಶನ್ ಧೃವನಾರಾಯಣ್ ಫೀಲ್ಡ್ ಗೆಇಳಿದಿದ್ದಾರೆ.ನಾಲ್ಕೈದು ದಿನಗಳ ನಂತರ ಅನಾಹುತ ನಡೆದ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.Tv10 ಕನ್ನಡ ವಾಹಿನಿಯ ಸುದ್ದಿಗೆ ಎಚ್ಚೆತ್ತು ಸ್ಪಂದಿಸಿದ್ದಾರೆ.ಮತ್ತೊಂದೆಡೆ ಸಂಸದ ಸುನಿಲ್ ಭೋಸ್ ತಮ್ಮ ಜವಾಬ್ದಾರಿಯನ್ನ ನಿರ್ವಹಿಸುವಲ್ಲಿ ಎಡವಿದ್ದಾರೆ.ಜನರ ಬಳಿಗೆ ಬಾರದೆ ಕೇವಲ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದು ಕಾಲ್ಕಿತ್ತಿದ್ದಾರೆ.ಚುನಾವಣೆ ವೇಳೆ ಮತಬೇಟೆಗಾಗಿ ಅನಾಹುತಗಳು ನಡೆದ ಪ್ರದೇಶಗಳಿಗೆ ಆಗಾಗ ಭೇಟಿ ನೀಡಿದ್ದ ಸುನಿಲ್ ಬೋಸ್ ಇದೀಗ ಜನರು ಸಂಕಷ್ಟದಲ್ಲಿರುವಾಗ ಸೂಕ್ತವಾಗಿ ಸ್ಪಂದಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.ಸುನಿಲ್ ಬೋಸ್ ರವರ ಈ ನಡೆ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.ಇನ್ನಾದ್ರೂ ಎಚ್ಚೆತ್ತುಕೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸಲಿ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *