ಕೊನೆಗೂ ಎಚ್ಚೆತ್ತ ಜನಪ್ರತಿನಿಧಿಗಳು…ಜನರ ಸಂಕಷ್ಟ ಆಲಿಸಿದ ಶಾಸಕ ದರ್ಶನ್ ಧೃವನಾರಾಯಣ್…ಸಭೆಗೆ ಮಾತ್ರ ಸೀಮಿತವಾದ ಸಂಸದ ಸುನಿಲ್ ಬೋಸ್…

ಕೊನೆಗೂ ಎಚ್ಚೆತ್ತ ಜನಪ್ರತಿನಿಧಿಗಳು…ಜನರ ಸಂಕಷ್ಟ ಆಲಿಸಿದ ಶಾಸಕ ದರ್ಶನ್ ಧೃವನಾರಾಯಣ್…ಸಭೆಗೆ ಮಾತ್ರ ಸೀಮಿತವಾದ ಸಂಸದ ಸುನಿಲ್ ಬೋಸ್…

ನಂಜನಗೂಡು,ಜು21,Tv10 ಕನ್ನಡಕಪಿಲೆಯ ಪ್ರವಾಹಕ್ಕೆ ತತ್ತರಿಸಿರುವ ನಂಜನಗೂಡು ಜನರ ಸಂಕಷ್ಟಕ್ಕೆ ಶಾಸಕ ದರ್ಶನ್ ಧೃವನಾರಾಯಣ್ ಸ್ಪಂದಿಸಿದ್ದಾರೆ.ಆದ್ರೆ ಸಂಸದ ಸುನಿಲ್ ಬೋಸ್ ರವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದು ಕಾಲ್ಕಿತ್ತಿದ್ದಾರೆ.ಸುನಿಲ್ ಬೋಸ್ ರವರ ನಡೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಕಬಿನಿ ಜಲಾಶಯದಿಂದ ಹೊರಹರಿವು ಹೆಚ್ಚಾದ ಹಿನ್ನಲೆ ಕಪಿಲೆಯ ನದಿ ಪಾತ್ರದಲ್ಲಿರು ಜನ ತತ್ತರಿಸಿದ್ದಾರೆ.ತಗ್ಗು ಪ್ರದೇಶಗಳಿಗೆ ನುಗ್ಗಿ ನೀರು ಆಸ್ತಿಪಾಸ್ತಿಗಳನ್ನ ಅಪೋಷನ ತೆಗೆದುಕೊಂಡಿದೆ.ಮನೆ ಮಠಗಳಿಂದ ಹೊರಗುಳಿದ ಜನನಿರಾಶ್ರಿತರಾಗಿ ಗಂಜಿ ಕೇಂದ್ರ ಆಶ್ರಯ ಪಡೆದಿದ್ದಾರೆ.ಜನರ ಸಂಕಷ್ಟಗಳಿಗೆ ತಾಲೂಕು ಅಧಿಕಾರಿಗಳು ಸ್ಪಂದಿಸಿ ಪರಿಹಾರ ವಿತರಿಸುವ ಪ್ರಕ್ರಿಯೆಗೆ ಮುಂದಾಗಿದ್ದಾರೆ.ಇಷ್ಟೆಲ್ಲಾ ಬೆಳವಣಿಗೆಗಳಾಗಿ ಜನ ಬವಣೆ ಅನುಭವಿಸುತ್ತಿದ್ದರೂ ಜನಪ್ರತಿನಿಧಿಗಳು ಇತ್ತ ಸುಳಿದಿರಲಿಲ್ಲ.ಈ ವಿಚಾರವಾಗಿ Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಮಾಡಿ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿತ್ತು.ಎಚ್ಚೆತ್ತ ಶಾಸಕ ದರ್ಶನ್ ಧೃವನಾರಾಯಣ್ ಫೀಲ್ಡ್ ಗೆಇಳಿದಿದ್ದಾರೆ.ನಾಲ್ಕೈದು ದಿನಗಳ ನಂತರ ಅನಾಹುತ ನಡೆದ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.Tv10 ಕನ್ನಡ ವಾಹಿನಿಯ ಸುದ್ದಿಗೆ ಎಚ್ಚೆತ್ತು ಸ್ಪಂದಿಸಿದ್ದಾರೆ.ಮತ್ತೊಂದೆಡೆ ಸಂಸದ ಸುನಿಲ್ ಭೋಸ್ ತಮ್ಮ ಜವಾಬ್ದಾರಿಯನ್ನ ನಿರ್ವಹಿಸುವಲ್ಲಿ ಎಡವಿದ್ದಾರೆ.ಜನರ ಬಳಿಗೆ ಬಾರದೆ ಕೇವಲ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದು ಕಾಲ್ಕಿತ್ತಿದ್ದಾರೆ.ಚುನಾವಣೆ ವೇಳೆ ಮತಬೇಟೆಗಾಗಿ ಅನಾಹುತಗಳು ನಡೆದ ಪ್ರದೇಶಗಳಿಗೆ ಆಗಾಗ ಭೇಟಿ ನೀಡಿದ್ದ ಸುನಿಲ್ ಬೋಸ್ ಇದೀಗ ಜನರು ಸಂಕಷ್ಟದಲ್ಲಿರುವಾಗ ಸೂಕ್ತವಾಗಿ ಸ್ಪಂದಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.ಸುನಿಲ್ ಬೋಸ್ ರವರ ಈ ನಡೆ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.ಇನ್ನಾದ್ರೂ ಎಚ್ಚೆತ್ತುಕೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸಲಿ…

Spread the love

Related post

ಗಣಪತಿ ಶ್ರೀ ಗಳ ಹುಟ್ಟುಹಬ್ಬ ಅಂಗವಾಗಿ ಶೋಭಾಯಾತ್ರೆ…ಪ್ರಚಾರ ಪೋಸ್ಟರ್ ಬಿಡುಗಡೆ…ದತ್ತಸೇನೆಯಿಂದ ಕಾರ್ಯಕ್ರಮ…

ಗಣಪತಿ ಶ್ರೀ ಗಳ ಹುಟ್ಟುಹಬ್ಬ ಅಂಗವಾಗಿ ಶೋಭಾಯಾತ್ರೆ…ಪ್ರಚಾರ ಪೋಸ್ಟರ್ ಬಿಡುಗಡೆ…ದತ್ತಸೇನೆಯಿಂದ ಕಾರ್ಯಕ್ರಮ…

ಮೈಸೂರು,ಮೇ31,Tv10 ಕನ್ನಡ ಗಣಪತಿ ಸಚ್ಚಿದಾನಂದ ಶ್ರೀಗಳ 83ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ.ಶಾಸಕ ಟಿಎಸ್. ಶ್ರೀವತ್ಸ ರವರು ಶೋಭಾಯಾತ್ರೆಯ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಿದರು.ದತ್ತಸೇನೆ ವತಿಯಿಂದ…
ಮಿನಿಲಾರಿ ಬೈಕ್ ಢಿಕ್ಕಿ…ಇಬ್ಬರು ಬೈಕ್ ಸವಾರರ ಸಾವು…ಅಪಘಾತ ರಭಸಕ್ಕೆ ರುಂಡ ಬೇರ್ಪಡೆ…

ಮಿನಿಲಾರಿ ಬೈಕ್ ಢಿಕ್ಕಿ…ಇಬ್ಬರು ಬೈಕ್ ಸವಾರರ ಸಾವು…ಅಪಘಾತ ರಭಸಕ್ಕೆ ರುಂಡ ಬೇರ್ಪಡೆ…

ಪಿರಿಯಾಪಟ್ಟಣ,ಮೇ29,Tv10 ಕನ್ನಡ ಮಿನಿ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕು ಗೊರೆಹಳ್ಳಿ ಕೆರೆ ಸಮೀಪ ನಡೆದಿದೆ.ಅಪಘಾತದ…
ಮೈಸೂರು ಮಹಾಸಂಸ್ಥಾನದ 27 ನೇ ಮಹಾರಾಜರಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷಕ್ತರಾಗಿ ಇಂದಿಗೆ 10 ವರ್ಷ…ಶುಭಾಶಯಗಳ ಸುರಿಮಳೆ…

ಮೈಸೂರು ಮಹಾಸಂಸ್ಥಾನದ 27 ನೇ ಮಹಾರಾಜರಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್…

ಮೈಸೂರು,ಮೇ29,Tv10 ಕನ್ನಡ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಯದುಕುಲದ ಅರಸರಾಗಿ ಹಾಗೂ 27 ನೇ ಮಹಾರಾಜರಾಗಿ ಪಟ್ಟಾಭಿಷಿಕ್ತರಾಗಿ ಇಂದಿಗೆ 10 ವರ್ಷ ಪೂರ್ಣಗೊಂಡಿದೆ.28 ಮೇ 2015 ರಂದು…

Leave a Reply

Your email address will not be published. Required fields are marked *