ಸಾಲಗಾರರ ಟಾರ್ಚರ್…ಡೆತ್ ನೋಟ್ ಬರೆದು ವ್ಯಕ್ತಿ ನಾಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಸಾಲಗಾರರ ಟಾರ್ಚರ್…ಡೆತ್ ನೋಟ್ ಬರೆದು ವ್ಯಕ್ತಿ ನಾಪತ್ತೆ…ಕುಟುಂಬಸ್ಥರಲ್ಲಿ ಆತಂಕ…

  • Crime
  • July 23, 2024
  • No Comment
  • 627

ಹುಣಸೂರು,ಜು23,Tv10 ಕನ್ನಡಸಾಲಗಾರರ ಕಿರುಕುಳಕ್ಕೆ ಹೆದರಿ ಆಟೋ ಡ್ರೈವರ್ ಡೆತ್ ನೋಟ್ ಬರೆದು ನಾಪತ್ತೆಯಾದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟುವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ನಾಲ್ಕು ದಿನಗಳ ಹಿಂದೆ ಡೆತ್ ನೋಟ್ ಬರೆದು ನಾಪತ್ತೆಯಾದ ಆಟೋ ಡ್ರೈವರ್ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ದೊರೆತಿಲ್ಲ.ಪ್ರಕರಣದಿಂದ ಕುಟುಂಬಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದು ಬಿಳಿಕೆರೆ ಪೊಲೀಸರ ಮೊರೆ ಹೋಗಿದ್ದಾರೆ.ಆಟೋ ಡ್ರೈವರ್ ಆಗಿರುವ ಪ್ರಸಾದ್(37) ಡೆತ್ ನೋಟ್ ಬರೆದು ನಾಪತ್ತೆಯಾದವರು.ನನ್ನ ಸಾವಿಗೆ ಫೈನಾನ್ಸ್ ಮಧು,ಟೆಂಪೋ ಕಿರಣ್ ಕಾರಣ ಎಂದು ಅವರ ಮೊಬೈಲ್ ನಂಬರ್ ನಮೂದಿಸಿ ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದಾರೆ.ಜುಲೈ 20 ರಂದು ಪತ್ನಿ ಲಕ್ಷ್ಮಿಗೆ ಗದ್ದುಗೆಗೆ ಹೋಗಿ ಬರುವುದಾಗಿ ತಿಳಿಸಿ ಪ್ರಸಾದ್ ಮನೆ ಬಿಟ್ಟಿದ್ದಾರೆ.ಎರಡು ದಿನವಾದರೂ ಪ್ರಸಾದ್ ಮನೆಗೆ ಬಂದಿಲ್ಲ.ಅವರ ನಂಬರ್ ಗೆ ಸಂಪರ್ಕಿಸಿದಾಗ ಸ್ವಿಚ್ ಆಫ್ ಬಂದಿದೆ.ಮನೆ ಮುಂದೆ ನಿಂತಿದ್ದ ಆಟೋ ಪರಿಶೀಲಿಸಿದಾಗ ಡೆತ್ ನೋಟ್ ಹಾಗೂ ಮೊಬೈಲ್ ದೊರೆತಿದೆ.ಕೂಡಲೇ ಪತ್ನಿ ಲಕ್ಷ್ಮಿ ಬಿಳಿಕೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ಪತ್ನಿ ಲಕ್ಷ್ಮಿ ಪ್ರಕಾರ ಪ್ರಸಾದ್ 4 ರಿಂದ 5 ಲಕ್ಷ ಸಾಲ ಇದೆ.ಆದ್ರೆ ಟೆಂಪೋ ಕಿರಣ್ ಎಂಬಾತ ಆಗಾಗ ಮನೆಗೆ ಬಂದು ಹಣಕ್ಕಾಗಿ ಪೀಡಿಸುತ್ತಿದ್ದ ಎಂದು ಲಕ್ಷ್ಮಿ ಆರೋಪಿಸಿದ್ದಾರೆ.ಫೈನಾನ್ಸ್ ನಡೆಸುತ್ತಿರುವ ಮಧು ಬಳಿ ಪ್ರಸಾದ್ ಗೆ ಕಿರಣ್ ಜಾಮೀನಾಗಿ ಸಾಲ ಕೊಡಿಸಿದ್ದ ಎಂದು ಹೇಳಲಾಗಿದೆ.ಹೀಗಾಗಿ ಕಿರಣ್ ಆಗಾಗ ಮನೆಗೆ ಬಂದು ಸಾಲ ಹಿಂದಿರುಗಿಸುವಂತೆ ಕಿರುಕುಳ ನೀಡುತ್ತಿದ್ದ ಎಂದು ಪತ್ನಿ ಲಕ್ಷ್ಮಿ ಆರೋಪಿಸಿದ್ದಾರೆ.ನಾಲ್ಕು ದಿನಗಳಾದ್ರೂ ಪ್ರಸಾದ್ ಮನೆಗೆ ವಾಪಸ್ ಬಾರದ ಕಾರಣ ಕುಟುಂಬಸ್ಥರು ಆತಂಕ್ಕೆ ಸಿಲುಕಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *