ಚಾಮುಂಡಿ ಬೆಟ್ಟ ಅನ್ನದಾಸೋಹ  ಭವನಕ್ಕೆ ಶುದ್ಧ ನೀರಿನ RO plant ಸಮರ್ಪಣೆ…

ಚಾಮುಂಡಿ ಬೆಟ್ಟ ಅನ್ನದಾಸೋಹ ಭವನಕ್ಕೆ ಶುದ್ಧ ನೀರಿನ RO plant ಸಮರ್ಪಣೆ…

ಮೈಸೂರು,ಜು25,Tv10 ಕನ್ನಡಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮತ್ತು ಪ್ರವಾಸಿಗರ ಅನೂಕಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನ ವಿ-ಗಾರ್ಡ್ ಕಂಪನಿ ವತಿಯಿಂದ ಅನ್ನದಾಸೋಹ ಭವನದಲ್ಲಿ ಸ್ಥಾಪಿಸಿ ಇಂದು ಹಸ್ತಾಂತರಿಸಲಾಯಿತು.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿಟಿ.ದೇವೆಗೌಡ ರವರು ಚಾಮುಂಡಿ ಬೆಟ್ಟಕ್ಕೆ ಮೂಲಭೂತ ಸೌಲಭ್ಯಗಳನ್ನ ಶಾಶ್ವತವಾಗಿ ಒದಗಿಸಲು ಸಿ.ಎಸ್. ಆರ್ ವಲಯ ಖಾಸಗಿ ಕಂಪನಿಗಳಿಗೆ ಮನವಿ ಮಾಡಿದ್ದರು, ಇದಕ್ಕೆ ಸ್ಪಂದಿಸಿದ ವಿ-ಗಾರ್ಡ್ ಕಂಪನಿ ಚಾಮುಂಡಿಬೆಟ್ಟಕ್ಕೆ ಪ್ರತಿನಿತ್ಯ ಆಗಮಿಸುವ ಭಕ್ತಾಧಿಗಳಿಗೆ ಸುಮಾರ 50ಸಾವಿರ ಮಂದಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಸಾಮರ್ಥ್ಯವುಳ್ಳ ವಿ-ಗಾರ್ಡ್ RO plant ಶುದ್ಧ ಕುಡಿಯುವ ನೀರಿನ ಘಟಕವನ್ನ ಸ್ಥಾಪಿಸಲಾಗಿದೆ. ವಿ- ಗಾರ್ಡ್ ಕಂಪನಿಯ ಉಪಾಧ್ಯಕ್ಷರಾದ ಸೂರ್ಯಪ್ರಸಾದ್ ವಿಜೆ, ಶಾಖೆ ವ್ಯವಸ್ಥಾಪಕ ಹರ್ಷೇಂದ್ರ ಪ್ರಸಾದ್ ರವರು ಯಂತ್ರವನ್ನ ಹಸ್ತಾಂತರಿಸಿದರು.
ಇದೇ ಸಂಧರ್ಭದಲ್ಲಿ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಡಾ. ಶಶಿಶೇಖರ ದೀಕ್ಷತ್ ರವರು ಕುಡಿಯುವ ನೀರಿನ ಘಟಕ ಯಂತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಮಾತನಾಡಿ ಮನುಷ್ಯನಿಗೆ ಶುದ್ಧವಾದ ನೀರು ಗಾಳಿ ಆಹಾರ ಬಹಳ ಮುಖ್ಯವಾದದು, ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳ ಮತ್ತು ಸಾರ್ವಜನಿಕರ ಅನೂಕೂಲಕ್ಕೆ ವಿವಿಧ ಮೂಲಭೂತ ಸೌಲಭ್ಯ ಸರ್ಕಾರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಒದಗಿಸಲು ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ, ಆದರೂ ಸಹ ಸಾಮಾಜಿಕ ಕಳಕಳಿಯುಳ್ಳ ಸಂಘ ಸಂಸ್ಥೆಗಳ ಸಾರ್ವಜನಿಕ ಸಹಭಾಗಿತ್ವ ಬಹಳ ಮುಖ್ಯವಾದುದು, ವಿ-ಗಾರ್ಡ್ ಕಂಪನಿ ವತಿಯಿಂದ ಚಾಮುಂಡಿ ಬೆಟ್ಟಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿರುವುದು ಶ್ಲಾಘನೀಯವಾದುದು ಇದರಿಂದ ಬೆಟ್ಟಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾಧಿಗಳಿಗೆ ಅನೂಕೂಲವಾಗುತ್ತದೆ ಮತ್ತು ಸಂಘಸಂಸ್ಥೆಗಳು ಇಂತಹ ಸೇವಾಮನೋಭಾವದ ಕೊಡುಗೆಗೆ ಮುಂದೆ ಬಂದಲ್ಲಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಛೇರಿಯನ್ನ ಸಂಪರ್ಕಿಸಬೇಕಾಗಿ ತಿಳಿಸಿದರು, ಇದೇ ಸಂಧರ್ಭದಲ್ಲಿ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಬಸವರಾಜು,ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ ,ತನ್ವಿ ಟ್ರೇಡಿಂಗ್ ಕಾರ್ಪೋರೇಷನ್ ದೀಪಕ್ ಆರ್ ಹೆಬ್ಬಾಳ್, ಚಮನ್, ಪುರುಷೋತ್ತಮ್, ಅರಣ್ ಹಾಜರಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *