ಚಾಮುಂಡಿ ಬೆಟ್ಟ ಅನ್ನದಾಸೋಹ  ಭವನಕ್ಕೆ ಶುದ್ಧ ನೀರಿನ RO plant ಸಮರ್ಪಣೆ…

ಚಾಮುಂಡಿ ಬೆಟ್ಟ ಅನ್ನದಾಸೋಹ ಭವನಕ್ಕೆ ಶುದ್ಧ ನೀರಿನ RO plant ಸಮರ್ಪಣೆ…

ಮೈಸೂರು,ಜು25,Tv10 ಕನ್ನಡಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮತ್ತು ಪ್ರವಾಸಿಗರ ಅನೂಕಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನ ವಿ-ಗಾರ್ಡ್ ಕಂಪನಿ ವತಿಯಿಂದ ಅನ್ನದಾಸೋಹ ಭವನದಲ್ಲಿ ಸ್ಥಾಪಿಸಿ ಇಂದು ಹಸ್ತಾಂತರಿಸಲಾಯಿತು.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿಟಿ.ದೇವೆಗೌಡ ರವರು ಚಾಮುಂಡಿ ಬೆಟ್ಟಕ್ಕೆ ಮೂಲಭೂತ ಸೌಲಭ್ಯಗಳನ್ನ ಶಾಶ್ವತವಾಗಿ ಒದಗಿಸಲು ಸಿ.ಎಸ್. ಆರ್ ವಲಯ ಖಾಸಗಿ ಕಂಪನಿಗಳಿಗೆ ಮನವಿ ಮಾಡಿದ್ದರು, ಇದಕ್ಕೆ ಸ್ಪಂದಿಸಿದ ವಿ-ಗಾರ್ಡ್ ಕಂಪನಿ ಚಾಮುಂಡಿಬೆಟ್ಟಕ್ಕೆ ಪ್ರತಿನಿತ್ಯ ಆಗಮಿಸುವ ಭಕ್ತಾಧಿಗಳಿಗೆ ಸುಮಾರ 50ಸಾವಿರ ಮಂದಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಸಾಮರ್ಥ್ಯವುಳ್ಳ ವಿ-ಗಾರ್ಡ್ RO plant ಶುದ್ಧ ಕುಡಿಯುವ ನೀರಿನ ಘಟಕವನ್ನ ಸ್ಥಾಪಿಸಲಾಗಿದೆ. ವಿ- ಗಾರ್ಡ್ ಕಂಪನಿಯ ಉಪಾಧ್ಯಕ್ಷರಾದ ಸೂರ್ಯಪ್ರಸಾದ್ ವಿಜೆ, ಶಾಖೆ ವ್ಯವಸ್ಥಾಪಕ ಹರ್ಷೇಂದ್ರ ಪ್ರಸಾದ್ ರವರು ಯಂತ್ರವನ್ನ ಹಸ್ತಾಂತರಿಸಿದರು.
ಇದೇ ಸಂಧರ್ಭದಲ್ಲಿ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಡಾ. ಶಶಿಶೇಖರ ದೀಕ್ಷತ್ ರವರು ಕುಡಿಯುವ ನೀರಿನ ಘಟಕ ಯಂತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಮಾತನಾಡಿ ಮನುಷ್ಯನಿಗೆ ಶುದ್ಧವಾದ ನೀರು ಗಾಳಿ ಆಹಾರ ಬಹಳ ಮುಖ್ಯವಾದದು, ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳ ಮತ್ತು ಸಾರ್ವಜನಿಕರ ಅನೂಕೂಲಕ್ಕೆ ವಿವಿಧ ಮೂಲಭೂತ ಸೌಲಭ್ಯ ಸರ್ಕಾರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಒದಗಿಸಲು ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ, ಆದರೂ ಸಹ ಸಾಮಾಜಿಕ ಕಳಕಳಿಯುಳ್ಳ ಸಂಘ ಸಂಸ್ಥೆಗಳ ಸಾರ್ವಜನಿಕ ಸಹಭಾಗಿತ್ವ ಬಹಳ ಮುಖ್ಯವಾದುದು, ವಿ-ಗಾರ್ಡ್ ಕಂಪನಿ ವತಿಯಿಂದ ಚಾಮುಂಡಿ ಬೆಟ್ಟಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿರುವುದು ಶ್ಲಾಘನೀಯವಾದುದು ಇದರಿಂದ ಬೆಟ್ಟಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾಧಿಗಳಿಗೆ ಅನೂಕೂಲವಾಗುತ್ತದೆ ಮತ್ತು ಸಂಘಸಂಸ್ಥೆಗಳು ಇಂತಹ ಸೇವಾಮನೋಭಾವದ ಕೊಡುಗೆಗೆ ಮುಂದೆ ಬಂದಲ್ಲಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಛೇರಿಯನ್ನ ಸಂಪರ್ಕಿಸಬೇಕಾಗಿ ತಿಳಿಸಿದರು, ಇದೇ ಸಂಧರ್ಭದಲ್ಲಿ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಬಸವರಾಜು,ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ ,ತನ್ವಿ ಟ್ರೇಡಿಂಗ್ ಕಾರ್ಪೋರೇಷನ್ ದೀಪಕ್ ಆರ್ ಹೆಬ್ಬಾಳ್, ಚಮನ್, ಪುರುಷೋತ್ತಮ್, ಅರಣ್ ಹಾಜರಿದ್ದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *