ಚಾಮುಂಡಿ ಬೆಟ್ಟ ಅನ್ನದಾಸೋಹ  ಭವನಕ್ಕೆ ಶುದ್ಧ ನೀರಿನ RO plant ಸಮರ್ಪಣೆ…

ಚಾಮುಂಡಿ ಬೆಟ್ಟ ಅನ್ನದಾಸೋಹ ಭವನಕ್ಕೆ ಶುದ್ಧ ನೀರಿನ RO plant ಸಮರ್ಪಣೆ…

ಮೈಸೂರು,ಜು25,Tv10 ಕನ್ನಡಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮತ್ತು ಪ್ರವಾಸಿಗರ ಅನೂಕಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನ ವಿ-ಗಾರ್ಡ್ ಕಂಪನಿ ವತಿಯಿಂದ ಅನ್ನದಾಸೋಹ ಭವನದಲ್ಲಿ ಸ್ಥಾಪಿಸಿ ಇಂದು ಹಸ್ತಾಂತರಿಸಲಾಯಿತು.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿಟಿ.ದೇವೆಗೌಡ ರವರು ಚಾಮುಂಡಿ ಬೆಟ್ಟಕ್ಕೆ ಮೂಲಭೂತ ಸೌಲಭ್ಯಗಳನ್ನ ಶಾಶ್ವತವಾಗಿ ಒದಗಿಸಲು ಸಿ.ಎಸ್. ಆರ್ ವಲಯ ಖಾಸಗಿ ಕಂಪನಿಗಳಿಗೆ ಮನವಿ ಮಾಡಿದ್ದರು, ಇದಕ್ಕೆ ಸ್ಪಂದಿಸಿದ ವಿ-ಗಾರ್ಡ್ ಕಂಪನಿ ಚಾಮುಂಡಿಬೆಟ್ಟಕ್ಕೆ ಪ್ರತಿನಿತ್ಯ ಆಗಮಿಸುವ ಭಕ್ತಾಧಿಗಳಿಗೆ ಸುಮಾರ 50ಸಾವಿರ ಮಂದಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಸಾಮರ್ಥ್ಯವುಳ್ಳ ವಿ-ಗಾರ್ಡ್ RO plant ಶುದ್ಧ ಕುಡಿಯುವ ನೀರಿನ ಘಟಕವನ್ನ ಸ್ಥಾಪಿಸಲಾಗಿದೆ. ವಿ- ಗಾರ್ಡ್ ಕಂಪನಿಯ ಉಪಾಧ್ಯಕ್ಷರಾದ ಸೂರ್ಯಪ್ರಸಾದ್ ವಿಜೆ, ಶಾಖೆ ವ್ಯವಸ್ಥಾಪಕ ಹರ್ಷೇಂದ್ರ ಪ್ರಸಾದ್ ರವರು ಯಂತ್ರವನ್ನ ಹಸ್ತಾಂತರಿಸಿದರು.
ಇದೇ ಸಂಧರ್ಭದಲ್ಲಿ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಡಾ. ಶಶಿಶೇಖರ ದೀಕ್ಷತ್ ರವರು ಕುಡಿಯುವ ನೀರಿನ ಘಟಕ ಯಂತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಮಾತನಾಡಿ ಮನುಷ್ಯನಿಗೆ ಶುದ್ಧವಾದ ನೀರು ಗಾಳಿ ಆಹಾರ ಬಹಳ ಮುಖ್ಯವಾದದು, ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳ ಮತ್ತು ಸಾರ್ವಜನಿಕರ ಅನೂಕೂಲಕ್ಕೆ ವಿವಿಧ ಮೂಲಭೂತ ಸೌಲಭ್ಯ ಸರ್ಕಾರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಒದಗಿಸಲು ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ, ಆದರೂ ಸಹ ಸಾಮಾಜಿಕ ಕಳಕಳಿಯುಳ್ಳ ಸಂಘ ಸಂಸ್ಥೆಗಳ ಸಾರ್ವಜನಿಕ ಸಹಭಾಗಿತ್ವ ಬಹಳ ಮುಖ್ಯವಾದುದು, ವಿ-ಗಾರ್ಡ್ ಕಂಪನಿ ವತಿಯಿಂದ ಚಾಮುಂಡಿ ಬೆಟ್ಟಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿರುವುದು ಶ್ಲಾಘನೀಯವಾದುದು ಇದರಿಂದ ಬೆಟ್ಟಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾಧಿಗಳಿಗೆ ಅನೂಕೂಲವಾಗುತ್ತದೆ ಮತ್ತು ಸಂಘಸಂಸ್ಥೆಗಳು ಇಂತಹ ಸೇವಾಮನೋಭಾವದ ಕೊಡುಗೆಗೆ ಮುಂದೆ ಬಂದಲ್ಲಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಛೇರಿಯನ್ನ ಸಂಪರ್ಕಿಸಬೇಕಾಗಿ ತಿಳಿಸಿದರು, ಇದೇ ಸಂಧರ್ಭದಲ್ಲಿ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಬಸವರಾಜು,ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ ,ತನ್ವಿ ಟ್ರೇಡಿಂಗ್ ಕಾರ್ಪೋರೇಷನ್ ದೀಪಕ್ ಆರ್ ಹೆಬ್ಬಾಳ್, ಚಮನ್, ಪುರುಷೋತ್ತಮ್, ಅರಣ್ ಹಾಜರಿದ್ದರು…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *