ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಕಟ್ಟಡ ನೆಲಸಮ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಕಟ್ಟಡ ನೆಲಸಮ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಮೈಸೂರು,ಜು25,Tv10 ಕನ್ನಡಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಭೂಗಳ್ಳರಿಗೆ ತಹಸೀಲ್ದಾರ್ ಮಹೇಶ್ ಕುಮಾರ್ ಶಾಕ್ ಕೊಟ್ಟಿದ್ದಾರೆ.ಸರ್ಕಾರಿ ಜಾಗವನ್ನ ಕಬಳಿಸಿ ಅಕ್ರಮವಾಗಿ ವಾಣಿಜ್ಯ ಮಳಿಗೆಗಳನ್ನ ನಿರ್ಮಿಸಿದ್ದ ಖದೀಮರಿಗೆ ಚಾಟಿಬೀಸಿದ್ದಾರೆ.ಸುಮಾರು 10 ರಿಂದ 12 ವಾಣಿಜ್ಯ ಮಳಿಗೆಗಳನ್ನ ತೆರುವುಗೊಳಿಸಿ ಕೋಟ್ಯಾಂತರ ಬೆಲೆಬಾಳುವ ಭೂಮಿಯನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ.ತಹಸೀಲ್ದಾರ್ ಮಹೇಶ್ ಕುಮಾರ್ ರವರು ಖುದ್ದು ಸ್ಥಳದಲ್ಲಿ ಹಾಜರಿದ್ದು ಒತ್ತುವರಿ ಕಾರ್ಯವನ್ನ ನಡೆಸಿದ್ದಾರೆ.ಮೈಸೂರು ತಾಲೂಕು ಇಲವಾಲ ಹೋಬಳಿ ಮಾದಗಳ್ಳಿ ಗ್ರಾಮ ಗದ್ದಿಗೆ ಮುಖ್ಯ ರಸ್ತೆ ಸರ್ವೆ ನಂ.54 ರಿಂದ 57 ರವರೆಗಿನ ಸ್ಥಳ ಸರ್ಕಾರಿ ರಸ್ತೆ ಆಗಿದೆ.ಸದರಿ ಸ್ಥಳವನ್ನ ಒತ್ತುವರಿ ಮಾಡಿಕೊಂಡಿದ್ದ ಭೂಗಳ್ಳರು ವಾಣಿಜ್ಯ ಮಳಿಗೆಗಳನ್ನ ನಿರ್ಮಿಸಿದ್ದರು.ಈ ಮಾಹಿತಿ ಅರಿತ ತಹಸೀಲ್ದಾರ್ ಮಹೇಶ್ ಕುಮಾರ್ ದಾಖಲೆಗಳನ್ನ ಪರಿಶೀಲಿಸಿ ಅಕ್ರಮವಾಗಿ ಒತ್ತುವರಿ ಆಗಿರುವುದನ್ನ ಖಚಿತಪಡಿಸಿಕೊಂಡಿದ್ದಾರೆ.ಇಂದು ತಹಸೀಲ್ದಾರ್ ನೇತೃತ್ವದಲ್ಲಿ ಜೆಸಿಬಿ ಯಂತ್ರದ ಮೂಲಕ ಮಳಿಗೆಗಳನ್ನ ನೆಲಸಮಗೊಳಿಸಿದ್ದಾರೆ.ಸುಮಾರು 3 ಕೋಟಿ ಬೆಲೆಬಾಳುವ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ.ಒತ್ತುವರಿ ತೆರುವು ಕಾರ್ಯಾಚರಣೆಯಲ್ಲಿ ಇಲವಾಲ ಹೋಬಳಿ ಉಪತಹಸೀಲ್ದಾರ್ ಕುಬೇರ್,ರಾಜಸ್ವ ನಿರೀಕ್ಷಕರಾದ ಶಿವಕುಮಾರ್,ಗ್ರಾಮ ಆಡಳಿತ ಅಧಿಕಾರಿ ಭಾರತೀಶ್,ಬೋಗಾದಿ ಪಟ್ಟಣ ಪಂಚಾಯ್ತಿ ಮುಖ್ಯ ಅಧಿಕಾರಿ ಬಸವರಾಜ್,ರೆವಿನ್ಯೂ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಹಾಗೂ ಪಿಡಬ್ಲ್ಯೂ ಡಿ ಸಿಬ್ಬಂದಿಗಳು ಭಾಗವಹಿಸಿದ್ದಾರೆ.ಇಲವಾಲ ಪೊಲೀಸ್ ಠಾಣೆ ಸಿಬ್ಬಂದಿಗಳು ಭದ್ರತೆ ಒದಗಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *