ಬಿಡಾಡಿ ದನಗಳು ಪಿಂಜರಾಪೋಲ್ ವಶಕ್ಕೆ…ಪಾಲಿಕೆ ನಿರ್ಧಾರ…ಕಾರ್ಯಾಚರಣೆ ಯಾವಾಗ…?

ಬಿಡಾಡಿ ದನಗಳು ಪಿಂಜರಾಪೋಲ್ ವಶಕ್ಕೆ…ಪಾಲಿಕೆ ನಿರ್ಧಾರ…ಕಾರ್ಯಾಚರಣೆ ಯಾವಾಗ…?

ಮೈಸೂರು,ಆ1,Tv10,ಕನ್ನಡಬಿಡಾಡಿ ದನಗಳ ಉಪಟಳದಿಂದ ಸಂಚಾರ ಮುಕ್ತಗೊಳಿಸಲು ಮೈಸೂರು ಮಹಾನಗರ ಪಾಲಿಕೆ ನಿರ್ಧರಿಸಿದೆ.ರಸ್ತೆಗಳ ಮಧ್ಯೆ ನಿಂತ ವಾಹನ ಸಂಚಾರಕ್ಕೆ ಕಿರಿಕಿರಿ ಉಂಟುಮಾಡುವ ದನಗಳನ್ನ ವಶಕ್ಕೆ ಪಡೆದು ದಂಡ ವಿಧಿಸಿ ನಂತರ ಎಚ್ಚೆತ್ತುಕೊಳ್ಳದಿದ್ದಲ್ಲಿ ಪಿಂಜರಾಪೋಲ್ ವಶಕ್ಕೆ ನೀಡಲು ನಿನ್ನೆ ನಡೆದ ಪಾಲಿಕೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.ಆದರೆ ಈ ಕಾರ್ಯಾಚರಣೆ ಎಂದಿನದ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.ಯಾಕಂದ್ರೆ ಈ ಹಿಂದೆಯೂ ಪಾಲಿಕೆ ಅಧಿಕಾರಿಗಳು ಇಂತಹ ಹೇಳಿಕೆಗಳನ್ನ ನೀಡಿ ಕೇವಲ ಹೇಳಿಕೆಗೆ ಮಾತ್ರ ಸೀಮಿತವಾದದ್ದು ಸಾರ್ವಜನಿಕರಿಗೆ ತಿಳಿದಿದೆ.ಹೇಳಿಕೆಗೆ ತಕ್ಕಂತೆ ಕಾರ್ಯಾಚರಣೆ ಮಾಡದೆ ಸಾರ್ವಜನಿಕರ ಟೀಕೆಗೂ ಪಾಲಿಕೆ ಅಧಿಕಾರಿಗಳು ಗುರಿಯಾಗಿದ್ದಾರೆ.ಈಗಾಗಲೇ ಇಂತಹ ನಿರ್ಣಯ ಕೈಗೊಂಡು ಗಂಟೆಗಳು ಕಳೆದಿದೆ.ಆದ್ರೂ ದನಗಳು ರಾಜಾರೋಷವಾಗಿ ರಸ್ತೆಗಳ ಮಧ್ಯೆ ಕುಳಿತಿರುವ ದೃಶ್ಯಗಳು ಅಲ್ಲಲ್ಲಿ ಕಂಡು ಬರುತ್ತಿವೆ.ಮೈಸೂರು ನಗರದ ಬಹುತೇಕ ಸ್ಥಳಗಳಲ್ಲಿ ರಸ್ತೆ ಮಧ್ಯೆ ನಿಂತ ಹಸುಗಳ ದೃಶ್ಯಗಳನ್ನ ಸಾರ್ವಜನಿಕರೇ ಸೆರೆ ಹಿಡಿದು ನಮ್ಮ ಕಾರ್ಯಾಲಯಕ್ಕೆ ರವಾನಿಸಿದ್ದಾರೆ.ಈ ಬಗ್ಗೆ ಪೊಲೀಸ್ ಇಲಾಖೆ ಸಹ ದೂರು ನೀಡಿದೆ,ಸಾರ್ವಜನಿಕರಂತೂ ದೂರುಗಳ ಸುರಿಮಳೆ ಸುರಿಸಿದ್ದಾರೆ.ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಪಾಲಿಕೆ ಆಯುಕ್ತರು ದನಗಳ ಕಿರುಕುಳ ತಪ್ಪಿಸಲು ಕಠಿಣ ನಿರ್ಧಾರ ಕೈಗೊಂಡಿದ್ದಾರೆ.ಈ ಬಾರಿಯಾದ್ರೂ ಈ ನಿರ್ಧಾರ ಸಕ್ಸಸ್ ಆಗುವುದೇ ಕಾದು ನೋಡಬೇಕಿದೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *