ಬಿಡಾಡಿ ದನಗಳು ಪಿಂಜರಾಪೋಲ್ ವಶಕ್ಕೆ…ಪಾಲಿಕೆ ನಿರ್ಧಾರ…ಕಾರ್ಯಾಚರಣೆ ಯಾವಾಗ…?

ಬಿಡಾಡಿ ದನಗಳು ಪಿಂಜರಾಪೋಲ್ ವಶಕ್ಕೆ…ಪಾಲಿಕೆ ನಿರ್ಧಾರ…ಕಾರ್ಯಾಚರಣೆ ಯಾವಾಗ…?

ಮೈಸೂರು,ಆ1,Tv10,ಕನ್ನಡಬಿಡಾಡಿ ದನಗಳ ಉಪಟಳದಿಂದ ಸಂಚಾರ ಮುಕ್ತಗೊಳಿಸಲು ಮೈಸೂರು ಮಹಾನಗರ ಪಾಲಿಕೆ ನಿರ್ಧರಿಸಿದೆ.ರಸ್ತೆಗಳ ಮಧ್ಯೆ ನಿಂತ ವಾಹನ ಸಂಚಾರಕ್ಕೆ ಕಿರಿಕಿರಿ ಉಂಟುಮಾಡುವ ದನಗಳನ್ನ ವಶಕ್ಕೆ ಪಡೆದು ದಂಡ ವಿಧಿಸಿ ನಂತರ ಎಚ್ಚೆತ್ತುಕೊಳ್ಳದಿದ್ದಲ್ಲಿ ಪಿಂಜರಾಪೋಲ್ ವಶಕ್ಕೆ ನೀಡಲು ನಿನ್ನೆ ನಡೆದ ಪಾಲಿಕೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.ಆದರೆ ಈ ಕಾರ್ಯಾಚರಣೆ ಎಂದಿನದ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.ಯಾಕಂದ್ರೆ ಈ ಹಿಂದೆಯೂ ಪಾಲಿಕೆ ಅಧಿಕಾರಿಗಳು ಇಂತಹ ಹೇಳಿಕೆಗಳನ್ನ ನೀಡಿ ಕೇವಲ ಹೇಳಿಕೆಗೆ ಮಾತ್ರ ಸೀಮಿತವಾದದ್ದು ಸಾರ್ವಜನಿಕರಿಗೆ ತಿಳಿದಿದೆ.ಹೇಳಿಕೆಗೆ ತಕ್ಕಂತೆ ಕಾರ್ಯಾಚರಣೆ ಮಾಡದೆ ಸಾರ್ವಜನಿಕರ ಟೀಕೆಗೂ ಪಾಲಿಕೆ ಅಧಿಕಾರಿಗಳು ಗುರಿಯಾಗಿದ್ದಾರೆ.ಈಗಾಗಲೇ ಇಂತಹ ನಿರ್ಣಯ ಕೈಗೊಂಡು ಗಂಟೆಗಳು ಕಳೆದಿದೆ.ಆದ್ರೂ ದನಗಳು ರಾಜಾರೋಷವಾಗಿ ರಸ್ತೆಗಳ ಮಧ್ಯೆ ಕುಳಿತಿರುವ ದೃಶ್ಯಗಳು ಅಲ್ಲಲ್ಲಿ ಕಂಡು ಬರುತ್ತಿವೆ.ಮೈಸೂರು ನಗರದ ಬಹುತೇಕ ಸ್ಥಳಗಳಲ್ಲಿ ರಸ್ತೆ ಮಧ್ಯೆ ನಿಂತ ಹಸುಗಳ ದೃಶ್ಯಗಳನ್ನ ಸಾರ್ವಜನಿಕರೇ ಸೆರೆ ಹಿಡಿದು ನಮ್ಮ ಕಾರ್ಯಾಲಯಕ್ಕೆ ರವಾನಿಸಿದ್ದಾರೆ.ಈ ಬಗ್ಗೆ ಪೊಲೀಸ್ ಇಲಾಖೆ ಸಹ ದೂರು ನೀಡಿದೆ,ಸಾರ್ವಜನಿಕರಂತೂ ದೂರುಗಳ ಸುರಿಮಳೆ ಸುರಿಸಿದ್ದಾರೆ.ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಪಾಲಿಕೆ ಆಯುಕ್ತರು ದನಗಳ ಕಿರುಕುಳ ತಪ್ಪಿಸಲು ಕಠಿಣ ನಿರ್ಧಾರ ಕೈಗೊಂಡಿದ್ದಾರೆ.ಈ ಬಾರಿಯಾದ್ರೂ ಈ ನಿರ್ಧಾರ ಸಕ್ಸಸ್ ಆಗುವುದೇ ಕಾದು ನೋಡಬೇಕಿದೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *