ದೈನಂದಿನ ಕಚೇರಿ ಕೆಲಸಗಳ ನಿರ್ವಹಣೆಗೆ ಅನುಮತಿ ನೀಡಿ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಪತ್ರ…

ದೈನಂದಿನ ಕಚೇರಿ ಕೆಲಸಗಳ ನಿರ್ವಹಣೆಗೆ ಅನುಮತಿ ನೀಡಿ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಪತ್ರ…

ಮೈಸೂರು,ಜು31,Tv10 ಕನ್ನಡ

ಮುಡಾ ವಿವಾದ ರಾಜ್ಯದಲ್ಲಿ ಸಂಚಲನ ಮೂಡಿಸಿದೆ.ಅಧಿವೇಶನದಲ್ಲೂ ಸಹ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.ವಿವಾದವೊಂದು ಸಿಎಂ ಗೂ ಕಂಟಕವಾಗಿ ನಿಂತಿದೆ.ಈ ಎಲ್ಲಾ ಹಿನ್ನಲೆ ಸರ್ಕಾರ ಈ ಹಿಂದೆ ಕೆಲವು ಷರತ್ತುಗಳನ್ನ ಹೇರಿದೆ.ಯಾವುದೇ ಸಭೆಗಳನ್ನ ನಡೆಸಬಾರದು,ಕಡತಗಳ ವಿಲೇವಾರಿ ಮಾಡಬಾರದು,ಈ ಹಿಂದೆ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನ ಅನುಷ್ಠಾನಗೊಳಿಸಬಾರದು,ಸರ್ಕಾರದ ನಿರ್ದೇಶನವಿಲ್ಲದೆ ಯಾವುದೇ ನಿವೇಶನ ವಿಲೇವಾರಿ ಕುರಿತು ಕ್ರಮ ಜರುಗಿಸಬಾರದೆಂಬ ಷರತ್ತುಗಳನ್ನ ಹಾಕಿದೆ.ಹೀಗಾಗಿ ಮುಡಾ ದಲ್ಲಿ ದೈನಂದಿನ ಕಚೇರಿ ಕೆಲಸಗಳಿಗೆ ಅಡಚಣೆ ಆಗಿದೆ.ಈ ಹಿನ್ನಲೆ ಮುಡಾ ಆಯುಕ್ತರು ನಗರಾಭಿವೃದ್ದಿ ಪ್ರಾಧಿಕಾರಗಳು ಮತ್ತು ನಗರಯೋಜನಾ ಹಾಗೂ ಗ್ರಾಮಾಂತರ ಯೋಜನಾ ಆಯುಕ್ತರಿಗೆ ದೈನಂದಿನ ಕೆಲಸಗಳನ್ನ ನಿರ್ವಹಿಸಲು ಅನುಮತಿ ಕೋರಿ ಪತ್ರ ಬರೆದಿದ್ದಾರೆ.ನೌಕರರ ವೇತನ ಭತ್ಯ ನಿರ್ವಹಿಸುವುದು,ನ್ಯಾಯಾಲಯದ ಆದೇಶಗಳನ್ನ ಪಾಲಿಸುವುದು,ಮಾಹಿತಿ ಹಕ್ಕು ಪ್ರಕರಣಗಳಿಗೆ ಸ್ಪಂದಿಸುವುದು,ಭೂಸ್ವಾಧೀನವಾಗದ ಜಮೀನಿಗಳಿಗೆ ನಿರಾಕ್ಷೇಪಣಾ ಪತ್ರ ನೀಡುವುದು,ಅನ್ಯಕ್ರಾಂತ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೂಸ್ವಾಧೀನ ಸಂಭಂಧ ಅಭಿಪ್ರಾಯ ನೀಡುವುದು ಸೇರಿದಂತೆ ಇನ್ನಿತರ ಕೆಲಸಗಳ ನಿರ್ವಹಣೆಗೆ ಅನುಮತಿ ನೀಡುವಂತೆ ಪತ್ರ ಬರೆದಿದ್ದಾರೆ…

Spread the love

Related post

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…
ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…

Leave a Reply

Your email address will not be published. Required fields are marked *