ದೈನಂದಿನ ಕಚೇರಿ ಕೆಲಸಗಳ ನಿರ್ವಹಣೆಗೆ ಅನುಮತಿ ನೀಡಿ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಪತ್ರ…

ದೈನಂದಿನ ಕಚೇರಿ ಕೆಲಸಗಳ ನಿರ್ವಹಣೆಗೆ ಅನುಮತಿ ನೀಡಿ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಪತ್ರ…

ಮೈಸೂರು,ಜು31,Tv10 ಕನ್ನಡ

ಮುಡಾ ವಿವಾದ ರಾಜ್ಯದಲ್ಲಿ ಸಂಚಲನ ಮೂಡಿಸಿದೆ.ಅಧಿವೇಶನದಲ್ಲೂ ಸಹ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.ವಿವಾದವೊಂದು ಸಿಎಂ ಗೂ ಕಂಟಕವಾಗಿ ನಿಂತಿದೆ.ಈ ಎಲ್ಲಾ ಹಿನ್ನಲೆ ಸರ್ಕಾರ ಈ ಹಿಂದೆ ಕೆಲವು ಷರತ್ತುಗಳನ್ನ ಹೇರಿದೆ.ಯಾವುದೇ ಸಭೆಗಳನ್ನ ನಡೆಸಬಾರದು,ಕಡತಗಳ ವಿಲೇವಾರಿ ಮಾಡಬಾರದು,ಈ ಹಿಂದೆ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನ ಅನುಷ್ಠಾನಗೊಳಿಸಬಾರದು,ಸರ್ಕಾರದ ನಿರ್ದೇಶನವಿಲ್ಲದೆ ಯಾವುದೇ ನಿವೇಶನ ವಿಲೇವಾರಿ ಕುರಿತು ಕ್ರಮ ಜರುಗಿಸಬಾರದೆಂಬ ಷರತ್ತುಗಳನ್ನ ಹಾಕಿದೆ.ಹೀಗಾಗಿ ಮುಡಾ ದಲ್ಲಿ ದೈನಂದಿನ ಕಚೇರಿ ಕೆಲಸಗಳಿಗೆ ಅಡಚಣೆ ಆಗಿದೆ.ಈ ಹಿನ್ನಲೆ ಮುಡಾ ಆಯುಕ್ತರು ನಗರಾಭಿವೃದ್ದಿ ಪ್ರಾಧಿಕಾರಗಳು ಮತ್ತು ನಗರಯೋಜನಾ ಹಾಗೂ ಗ್ರಾಮಾಂತರ ಯೋಜನಾ ಆಯುಕ್ತರಿಗೆ ದೈನಂದಿನ ಕೆಲಸಗಳನ್ನ ನಿರ್ವಹಿಸಲು ಅನುಮತಿ ಕೋರಿ ಪತ್ರ ಬರೆದಿದ್ದಾರೆ.ನೌಕರರ ವೇತನ ಭತ್ಯ ನಿರ್ವಹಿಸುವುದು,ನ್ಯಾಯಾಲಯದ ಆದೇಶಗಳನ್ನ ಪಾಲಿಸುವುದು,ಮಾಹಿತಿ ಹಕ್ಕು ಪ್ರಕರಣಗಳಿಗೆ ಸ್ಪಂದಿಸುವುದು,ಭೂಸ್ವಾಧೀನವಾಗದ ಜಮೀನಿಗಳಿಗೆ ನಿರಾಕ್ಷೇಪಣಾ ಪತ್ರ ನೀಡುವುದು,ಅನ್ಯಕ್ರಾಂತ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೂಸ್ವಾಧೀನ ಸಂಭಂಧ ಅಭಿಪ್ರಾಯ ನೀಡುವುದು ಸೇರಿದಂತೆ ಇನ್ನಿತರ ಕೆಲಸಗಳ ನಿರ್ವಹಣೆಗೆ ಅನುಮತಿ ನೀಡುವಂತೆ ಪತ್ರ ಬರೆದಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *