ದೈನಂದಿನ ಕಚೇರಿ ಕೆಲಸಗಳ ನಿರ್ವಹಣೆಗೆ ಅನುಮತಿ ನೀಡಿ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಪತ್ರ…

ದೈನಂದಿನ ಕಚೇರಿ ಕೆಲಸಗಳ ನಿರ್ವಹಣೆಗೆ ಅನುಮತಿ ನೀಡಿ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಪತ್ರ…

ಮೈಸೂರು,ಜು31,Tv10 ಕನ್ನಡ

ಮುಡಾ ವಿವಾದ ರಾಜ್ಯದಲ್ಲಿ ಸಂಚಲನ ಮೂಡಿಸಿದೆ.ಅಧಿವೇಶನದಲ್ಲೂ ಸಹ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.ವಿವಾದವೊಂದು ಸಿಎಂ ಗೂ ಕಂಟಕವಾಗಿ ನಿಂತಿದೆ.ಈ ಎಲ್ಲಾ ಹಿನ್ನಲೆ ಸರ್ಕಾರ ಈ ಹಿಂದೆ ಕೆಲವು ಷರತ್ತುಗಳನ್ನ ಹೇರಿದೆ.ಯಾವುದೇ ಸಭೆಗಳನ್ನ ನಡೆಸಬಾರದು,ಕಡತಗಳ ವಿಲೇವಾರಿ ಮಾಡಬಾರದು,ಈ ಹಿಂದೆ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನ ಅನುಷ್ಠಾನಗೊಳಿಸಬಾರದು,ಸರ್ಕಾರದ ನಿರ್ದೇಶನವಿಲ್ಲದೆ ಯಾವುದೇ ನಿವೇಶನ ವಿಲೇವಾರಿ ಕುರಿತು ಕ್ರಮ ಜರುಗಿಸಬಾರದೆಂಬ ಷರತ್ತುಗಳನ್ನ ಹಾಕಿದೆ.ಹೀಗಾಗಿ ಮುಡಾ ದಲ್ಲಿ ದೈನಂದಿನ ಕಚೇರಿ ಕೆಲಸಗಳಿಗೆ ಅಡಚಣೆ ಆಗಿದೆ.ಈ ಹಿನ್ನಲೆ ಮುಡಾ ಆಯುಕ್ತರು ನಗರಾಭಿವೃದ್ದಿ ಪ್ರಾಧಿಕಾರಗಳು ಮತ್ತು ನಗರಯೋಜನಾ ಹಾಗೂ ಗ್ರಾಮಾಂತರ ಯೋಜನಾ ಆಯುಕ್ತರಿಗೆ ದೈನಂದಿನ ಕೆಲಸಗಳನ್ನ ನಿರ್ವಹಿಸಲು ಅನುಮತಿ ಕೋರಿ ಪತ್ರ ಬರೆದಿದ್ದಾರೆ.ನೌಕರರ ವೇತನ ಭತ್ಯ ನಿರ್ವಹಿಸುವುದು,ನ್ಯಾಯಾಲಯದ ಆದೇಶಗಳನ್ನ ಪಾಲಿಸುವುದು,ಮಾಹಿತಿ ಹಕ್ಕು ಪ್ರಕರಣಗಳಿಗೆ ಸ್ಪಂದಿಸುವುದು,ಭೂಸ್ವಾಧೀನವಾಗದ ಜಮೀನಿಗಳಿಗೆ ನಿರಾಕ್ಷೇಪಣಾ ಪತ್ರ ನೀಡುವುದು,ಅನ್ಯಕ್ರಾಂತ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೂಸ್ವಾಧೀನ ಸಂಭಂಧ ಅಭಿಪ್ರಾಯ ನೀಡುವುದು ಸೇರಿದಂತೆ ಇನ್ನಿತರ ಕೆಲಸಗಳ ನಿರ್ವಹಣೆಗೆ ಅನುಮತಿ ನೀಡುವಂತೆ ಪತ್ರ ಬರೆದಿದ್ದಾರೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *