ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಮೈಸೂರು,ಜು31,Tv10 ಕನ್ನಡಒತ್ತುವರಿಯಾಗಿದ್ದ ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ನಿರ್ಮಾಣಕ್ಕಾಗಿಕಾಯ್ದಿರಿಸಿದ್ದ ಜಾಗವನ್ನ ತಾಲೂಕು ಆಡಳಿತ ತೆರುವುಗೊಳಿಸಿದೆ.ಸುಮಾರು ಒಂದು ಕೋಟಿ ಬೆಲೆ ಬಾಳುವ ಜಾಗವನ್ನ ತೆರುವುಗೊಳಿಸಿ ವಶಕ್ಕೆ ಪಡೆದು ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಗಿದೆ.ಮೈಸೂರು ತಾಲೂಕು ಕಸಬ ಹೋಬಳಿ ಬಂಡೀಪಾಳ್ಯ ಗ್ರಾಮದ ಸರ್ವೆ ನಂ.60 ರಲ್ಲಿ 20 ಗುಂಟೆ ಜಮೀನು 2018-19 ರಲ್ಲಿ ಡಾ.ಜಗಜೀವನ್ ರಾಮ್ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿತ್ತು.ಸದರಿ ಜಾಗವನ್ನ ಕೆಲವು ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದರು.ಈ ಕುರಿತಂತೆ ತಹಸೀಲ್ದಾರ್ ಕೆ.ಎಂ. ಮಹೇಶ್ ಕುಮಾರ್ ರವರು ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿಯನ್ನ ಖಚಿತಪಡಿಸಿಕೊಂಡು ತೆರುವುಗೊಳಿಸಲು ಆದೇಶಿಸಿದ್ದರು.ಇಂದು ರಾಜಸ್ವ ನಿರೀಕ್ಷಕರಾದ ಹೇಮಂತ್ ಕುಮಾರ್,ಗ್ರಾಮ ಆಡಳಿತ ಅಧಿಕಾರಿಗಳಾದ ಹರೀಶ್,ಮಹೇಶ್,ಅಜೀಮ್ ಖಾನ್,ಭಾಸ್ಕರ್,ಮಹೇಶ್ ರವರು ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರ ಭದ್ರತೆಯೊಂದಿಗೆ ತೆರುವುಗೊಳಿಸಿ ನಂತರ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *