ಅಪರಿಚತನಿಗೆ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ…ಮಾನವೀಯತೆ ತೋರಿದ್ದೇ ತಪ್ಪಾಯ್ತು…!

ಅಪರಿಚತನಿಗೆ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ…ಮಾನವೀಯತೆ ತೋರಿದ್ದೇ ತಪ್ಪಾಯ್ತು…!

ಮೈಸೂರು,ಆ1,Tv10 ಕನ್ನಡ

ಅಪರಿಚಿತನ ಅಸಹಾಯಕತೆಗೆ ಮರುಗಿ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬೋಗಾದಿ ರಿಂಗ್ ರಸ್ತೆ ಬಳಿ ನಡೆದಿದೆ.ಚಾಮರಾಜನಗರ ಮೂಲದ ಶಿವು ಎಂಬುವರೇ ಹಲ್ಲೆಗೊಳಗಾದವರು.ಅಪರಿಚತನಿಂದ ಹಲ್ಲೆಗೆ ಒಳಗಾದ ಶಿವು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾತ್ರಿ ವೇಳೆ ನಿರ್ಗತಿಕರು,ಭಿಕ್ಷುಕರು,ಅಸಹಾಯಕರಿಗೆ ಬೆಡ್ ಶೀಟ್ ಗಳನ್ನ ನೀಡಿ ಮಾನವೀಯತೆ ಮೆರೆಯುವ ಪುಣ್ಯದ ಕಾರ್ಯ ಮಾಡುವ ಶಿವು ರವರು ಎರಡು ದಿನಗಳ ಹಿಂದೆ ಬೋಗಾದಿ ರಿಂಗ್ ರಸ್ತೆಯ ಸೌಪರ್ಣಿಕ ಅಪಾರ್ಟ್ ಮೆಂಟ್ ಬಳಿ ರಾತ್ರಿ 11 ಗಂಟೆ ವೇಳೆ ತಮ್ಮ ಬೈಕ್ ನಲ್ಲಿ ತೆರಳುತ್ತಿದ್ದಾಗ.ಅಪರಿಚಿತ ವ್ಯಕ್ತಿಯೊಬ್ಬ ಅಸಹಾಯಕನಾಗಿ ಕಂಡು ಬಂದಿದ್ದಾನೆ.ನೋಡಲು ಭಿಕ್ಷುಕನಂತೆ ಕಂಡು ಬಂದರೂ ಶಿವು ಆತನ ನೆರವಿಗೆ ಮುಂದಾಗಿದ್ದಾರೆ.ವ್ಯಕ್ತಿಗೆ ತಮ್ಮ ಬೈಕ್ ನಲ್ಲಿ ಲಿಫ್ಟ್ ಕೊಡಲು ಯತ್ನಿಸಿದ್ದಾರೆ.ಶಿವು ರವರ ಮನವಿಯನ್ನ ಅಪರಿಚಿತ ವ್ಯಕ್ತಿ ತಿರಸ್ಕರಿಸಿದ್ದಾನೆ.ಮಾನವೀಯತೆಯಿಂದ ಮತ್ತೆ ಬೈಕ್ ಹತ್ತುವಂತೆ ಕರೆದಿದ್ದಾರೆ.ಈ ವೇಳೆ ಅಪರಿಚಿತ ವ್ಯಕ್ತಿ ತನ್ನ ಬಳಿ ಇದ್ದ ಆಯುಧದಿಂದ ಶಿವು ಮೇಲೆ ಹಲ್ಲೆ ನಡೆಸಿದ್ದಾನೆ.ಶಿವು ರವರ ಕೂಗಾಟ ಕೇಳಿ ಕೆಲವು ಸಾರ್ವಜನಿಕರು ನೆರವಿಗೆ ಬಂದಿದ್ದಾರೆ.ಆಯುಧದಿಂದ ಹಲ್ಲೆ ನಡೆಸಿದ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ.ಅಪರಿಚಿತನಿಗೆ ಸಹಾಯ ಮಾಡಲು ಹೋದ ಶಿವು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *