ಅಪರಿಚತನಿಗೆ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ…ಮಾನವೀಯತೆ ತೋರಿದ್ದೇ ತಪ್ಪಾಯ್ತು…!

ಅಪರಿಚತನಿಗೆ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ…ಮಾನವೀಯತೆ ತೋರಿದ್ದೇ ತಪ್ಪಾಯ್ತು…!

ಮೈಸೂರು,ಆ1,Tv10 ಕನ್ನಡ

ಅಪರಿಚಿತನ ಅಸಹಾಯಕತೆಗೆ ಮರುಗಿ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬೋಗಾದಿ ರಿಂಗ್ ರಸ್ತೆ ಬಳಿ ನಡೆದಿದೆ.ಚಾಮರಾಜನಗರ ಮೂಲದ ಶಿವು ಎಂಬುವರೇ ಹಲ್ಲೆಗೊಳಗಾದವರು.ಅಪರಿಚತನಿಂದ ಹಲ್ಲೆಗೆ ಒಳಗಾದ ಶಿವು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾತ್ರಿ ವೇಳೆ ನಿರ್ಗತಿಕರು,ಭಿಕ್ಷುಕರು,ಅಸಹಾಯಕರಿಗೆ ಬೆಡ್ ಶೀಟ್ ಗಳನ್ನ ನೀಡಿ ಮಾನವೀಯತೆ ಮೆರೆಯುವ ಪುಣ್ಯದ ಕಾರ್ಯ ಮಾಡುವ ಶಿವು ರವರು ಎರಡು ದಿನಗಳ ಹಿಂದೆ ಬೋಗಾದಿ ರಿಂಗ್ ರಸ್ತೆಯ ಸೌಪರ್ಣಿಕ ಅಪಾರ್ಟ್ ಮೆಂಟ್ ಬಳಿ ರಾತ್ರಿ 11 ಗಂಟೆ ವೇಳೆ ತಮ್ಮ ಬೈಕ್ ನಲ್ಲಿ ತೆರಳುತ್ತಿದ್ದಾಗ.ಅಪರಿಚಿತ ವ್ಯಕ್ತಿಯೊಬ್ಬ ಅಸಹಾಯಕನಾಗಿ ಕಂಡು ಬಂದಿದ್ದಾನೆ.ನೋಡಲು ಭಿಕ್ಷುಕನಂತೆ ಕಂಡು ಬಂದರೂ ಶಿವು ಆತನ ನೆರವಿಗೆ ಮುಂದಾಗಿದ್ದಾರೆ.ವ್ಯಕ್ತಿಗೆ ತಮ್ಮ ಬೈಕ್ ನಲ್ಲಿ ಲಿಫ್ಟ್ ಕೊಡಲು ಯತ್ನಿಸಿದ್ದಾರೆ.ಶಿವು ರವರ ಮನವಿಯನ್ನ ಅಪರಿಚಿತ ವ್ಯಕ್ತಿ ತಿರಸ್ಕರಿಸಿದ್ದಾನೆ.ಮಾನವೀಯತೆಯಿಂದ ಮತ್ತೆ ಬೈಕ್ ಹತ್ತುವಂತೆ ಕರೆದಿದ್ದಾರೆ.ಈ ವೇಳೆ ಅಪರಿಚಿತ ವ್ಯಕ್ತಿ ತನ್ನ ಬಳಿ ಇದ್ದ ಆಯುಧದಿಂದ ಶಿವು ಮೇಲೆ ಹಲ್ಲೆ ನಡೆಸಿದ್ದಾನೆ.ಶಿವು ರವರ ಕೂಗಾಟ ಕೇಳಿ ಕೆಲವು ಸಾರ್ವಜನಿಕರು ನೆರವಿಗೆ ಬಂದಿದ್ದಾರೆ.ಆಯುಧದಿಂದ ಹಲ್ಲೆ ನಡೆಸಿದ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ.ಅಪರಿಚಿತನಿಗೆ ಸಹಾಯ ಮಾಡಲು ಹೋದ ಶಿವು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *