ಅಪರಿಚತನಿಗೆ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ…ಮಾನವೀಯತೆ ತೋರಿದ್ದೇ ತಪ್ಪಾಯ್ತು…!

ಅಪರಿಚತನಿಗೆ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ…ಮಾನವೀಯತೆ ತೋರಿದ್ದೇ ತಪ್ಪಾಯ್ತು…!

ಮೈಸೂರು,ಆ1,Tv10 ಕನ್ನಡ

ಅಪರಿಚಿತನ ಅಸಹಾಯಕತೆಗೆ ಮರುಗಿ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬೋಗಾದಿ ರಿಂಗ್ ರಸ್ತೆ ಬಳಿ ನಡೆದಿದೆ.ಚಾಮರಾಜನಗರ ಮೂಲದ ಶಿವು ಎಂಬುವರೇ ಹಲ್ಲೆಗೊಳಗಾದವರು.ಅಪರಿಚತನಿಂದ ಹಲ್ಲೆಗೆ ಒಳಗಾದ ಶಿವು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾತ್ರಿ ವೇಳೆ ನಿರ್ಗತಿಕರು,ಭಿಕ್ಷುಕರು,ಅಸಹಾಯಕರಿಗೆ ಬೆಡ್ ಶೀಟ್ ಗಳನ್ನ ನೀಡಿ ಮಾನವೀಯತೆ ಮೆರೆಯುವ ಪುಣ್ಯದ ಕಾರ್ಯ ಮಾಡುವ ಶಿವು ರವರು ಎರಡು ದಿನಗಳ ಹಿಂದೆ ಬೋಗಾದಿ ರಿಂಗ್ ರಸ್ತೆಯ ಸೌಪರ್ಣಿಕ ಅಪಾರ್ಟ್ ಮೆಂಟ್ ಬಳಿ ರಾತ್ರಿ 11 ಗಂಟೆ ವೇಳೆ ತಮ್ಮ ಬೈಕ್ ನಲ್ಲಿ ತೆರಳುತ್ತಿದ್ದಾಗ.ಅಪರಿಚಿತ ವ್ಯಕ್ತಿಯೊಬ್ಬ ಅಸಹಾಯಕನಾಗಿ ಕಂಡು ಬಂದಿದ್ದಾನೆ.ನೋಡಲು ಭಿಕ್ಷುಕನಂತೆ ಕಂಡು ಬಂದರೂ ಶಿವು ಆತನ ನೆರವಿಗೆ ಮುಂದಾಗಿದ್ದಾರೆ.ವ್ಯಕ್ತಿಗೆ ತಮ್ಮ ಬೈಕ್ ನಲ್ಲಿ ಲಿಫ್ಟ್ ಕೊಡಲು ಯತ್ನಿಸಿದ್ದಾರೆ.ಶಿವು ರವರ ಮನವಿಯನ್ನ ಅಪರಿಚಿತ ವ್ಯಕ್ತಿ ತಿರಸ್ಕರಿಸಿದ್ದಾನೆ.ಮಾನವೀಯತೆಯಿಂದ ಮತ್ತೆ ಬೈಕ್ ಹತ್ತುವಂತೆ ಕರೆದಿದ್ದಾರೆ.ಈ ವೇಳೆ ಅಪರಿಚಿತ ವ್ಯಕ್ತಿ ತನ್ನ ಬಳಿ ಇದ್ದ ಆಯುಧದಿಂದ ಶಿವು ಮೇಲೆ ಹಲ್ಲೆ ನಡೆಸಿದ್ದಾನೆ.ಶಿವು ರವರ ಕೂಗಾಟ ಕೇಳಿ ಕೆಲವು ಸಾರ್ವಜನಿಕರು ನೆರವಿಗೆ ಬಂದಿದ್ದಾರೆ.ಆಯುಧದಿಂದ ಹಲ್ಲೆ ನಡೆಸಿದ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ.ಅಪರಿಚಿತನಿಗೆ ಸಹಾಯ ಮಾಡಲು ಹೋದ ಶಿವು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *