ಅಪರಿಚತನಿಗೆ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ…ಮಾನವೀಯತೆ ತೋರಿದ್ದೇ ತಪ್ಪಾಯ್ತು…!

ಅಪರಿಚತನಿಗೆ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ…ಮಾನವೀಯತೆ ತೋರಿದ್ದೇ ತಪ್ಪಾಯ್ತು…!

ಮೈಸೂರು,ಆ1,Tv10 ಕನ್ನಡ

ಅಪರಿಚಿತನ ಅಸಹಾಯಕತೆಗೆ ಮರುಗಿ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬೋಗಾದಿ ರಿಂಗ್ ರಸ್ತೆ ಬಳಿ ನಡೆದಿದೆ.ಚಾಮರಾಜನಗರ ಮೂಲದ ಶಿವು ಎಂಬುವರೇ ಹಲ್ಲೆಗೊಳಗಾದವರು.ಅಪರಿಚತನಿಂದ ಹಲ್ಲೆಗೆ ಒಳಗಾದ ಶಿವು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾತ್ರಿ ವೇಳೆ ನಿರ್ಗತಿಕರು,ಭಿಕ್ಷುಕರು,ಅಸಹಾಯಕರಿಗೆ ಬೆಡ್ ಶೀಟ್ ಗಳನ್ನ ನೀಡಿ ಮಾನವೀಯತೆ ಮೆರೆಯುವ ಪುಣ್ಯದ ಕಾರ್ಯ ಮಾಡುವ ಶಿವು ರವರು ಎರಡು ದಿನಗಳ ಹಿಂದೆ ಬೋಗಾದಿ ರಿಂಗ್ ರಸ್ತೆಯ ಸೌಪರ್ಣಿಕ ಅಪಾರ್ಟ್ ಮೆಂಟ್ ಬಳಿ ರಾತ್ರಿ 11 ಗಂಟೆ ವೇಳೆ ತಮ್ಮ ಬೈಕ್ ನಲ್ಲಿ ತೆರಳುತ್ತಿದ್ದಾಗ.ಅಪರಿಚಿತ ವ್ಯಕ್ತಿಯೊಬ್ಬ ಅಸಹಾಯಕನಾಗಿ ಕಂಡು ಬಂದಿದ್ದಾನೆ.ನೋಡಲು ಭಿಕ್ಷುಕನಂತೆ ಕಂಡು ಬಂದರೂ ಶಿವು ಆತನ ನೆರವಿಗೆ ಮುಂದಾಗಿದ್ದಾರೆ.ವ್ಯಕ್ತಿಗೆ ತಮ್ಮ ಬೈಕ್ ನಲ್ಲಿ ಲಿಫ್ಟ್ ಕೊಡಲು ಯತ್ನಿಸಿದ್ದಾರೆ.ಶಿವು ರವರ ಮನವಿಯನ್ನ ಅಪರಿಚಿತ ವ್ಯಕ್ತಿ ತಿರಸ್ಕರಿಸಿದ್ದಾನೆ.ಮಾನವೀಯತೆಯಿಂದ ಮತ್ತೆ ಬೈಕ್ ಹತ್ತುವಂತೆ ಕರೆದಿದ್ದಾರೆ.ಈ ವೇಳೆ ಅಪರಿಚಿತ ವ್ಯಕ್ತಿ ತನ್ನ ಬಳಿ ಇದ್ದ ಆಯುಧದಿಂದ ಶಿವು ಮೇಲೆ ಹಲ್ಲೆ ನಡೆಸಿದ್ದಾನೆ.ಶಿವು ರವರ ಕೂಗಾಟ ಕೇಳಿ ಕೆಲವು ಸಾರ್ವಜನಿಕರು ನೆರವಿಗೆ ಬಂದಿದ್ದಾರೆ.ಆಯುಧದಿಂದ ಹಲ್ಲೆ ನಡೆಸಿದ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ.ಅಪರಿಚಿತನಿಗೆ ಸಹಾಯ ಮಾಡಲು ಹೋದ ಶಿವು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *