ಪ್ರವಾಹದ ನೀರಿಗೆ  ಪಂಪ್ ಹೌಸ್ ಜಲಾವೃತ… ಕುಡಿಯುವ ನೀರಿಗೆ ಸಂಕಷ್ಟ…

ಪ್ರವಾಹದ ನೀರಿಗೆ ಪಂಪ್ ಹೌಸ್ ಜಲಾವೃತ… ಕುಡಿಯುವ ನೀರಿಗೆ ಸಂಕಷ್ಟ…

ನಂಜನಗೂಡು,ಆ1,Tv10 ಕನ್ನಡಕೇರಳದ ವೈನಾಡು ಪ್ರದೇಶದಲ್ಲಿ ಭಾರಿ ಮಳೆ ಹಿನ್ನಲೆ ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ.ಈಗಾಗಲೇ 70 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಕಪಿಲಾ ನದಿಗೆ ಬಿಡುಗಡೆ

ಮಾಡಲಾಗಿದೆ.ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆ ಬಿಡುಗಡೆ ಪ್ರಮಾಣ 80 ಸಾವಿರ ಕ್ಯೂಸೆಕ್ಸ್ ದಾಟುವ ಸಾಧ್ಯತೆ ಇದೆ.
ನಂಜನಗೂಡಿನ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನಗರಕ್ಕೆ ದಿನನಿತ್ಯ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ದೇಬೂರು ಗ್ರಾಮದ ಬಳಿ ಇರುವ ಕುಡಿಯುವ ನೀರಿನ ಸರಬರಾಜು ಪಂಪ್ ಹೌಸ್ ಸಹ ಜಲಾವೃತವಾಗಿದೆ. ನಂಜನಗೂಡು ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜು ವೆತ್ಯಯವಾಗಿದೆ. ಈಗಾಗಲೇ ನಂಜುಂಡೇಶ್ವರನ ದೇವಾಲಯದ ಸ್ಥಾನಘಟ್ಟ,ಹದಿನಾರು ಕಾಲು ಮಂಟಪ, ಪರಶುರಾಮ ದೇವಾಲಯ,ಅಯ್ಯಪ್ಪ ಸ್ವಾಮಿ ದೇವಾಲಯ, ಚಾಮುಂಡೇಶ್ವರಿ ದೇವಾಲಯ,ತೋಪಿನ ಬೀದಿ, ಒಕ್ಕಲಗೇರಿ,ಹಳ್ಳದ ಕೇರಿ ಸೇರಿದಂತೆ ಸಾಕಷ್ಟು ಬಡಾವಣೆಗಳಿಗೆ ಪ್ರವಾಹದ ನೀರು ನುಗ್ಗಿದೆ. ಮತ್ತೆ ನಂಜನಗೂಡು ಪಟ್ಟಣದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *