ಗಂಡು ಮಗು ಹೆತ್ತಿಲ್ಲವೆಂದು ವರದಕ್ಷಿಣೆ ನೆಪದಲ್ಲಿ ಪತ್ನಿಗೆ ಟಾರ್ಚರ್…ಹಿಗ್ಗಾಮುಗ್ಗ ಥಳಿಸಿದ ಪತಿ…ಜೀವಭಯದಲ್ಲಿ ಗೃಹಿಣಿ…

ಗಂಡು ಮಗು ಹೆತ್ತಿಲ್ಲವೆಂದು ವರದಕ್ಷಿಣೆ ನೆಪದಲ್ಲಿ ಪತ್ನಿಗೆ ಟಾರ್ಚರ್…ಹಿಗ್ಗಾಮುಗ್ಗ ಥಳಿಸಿದ ಪತಿ…ಜೀವಭಯದಲ್ಲಿ ಗೃಹಿಣಿ…

ಕೆ.ಆರ್.ನಗರ,ಆ2,Tv10 ಕನ್ನಡ

ಗಂಡು ಮಗು ಹೆತ್ತಿಲ್ಲವೆಂದು ವರದಕ್ಷಿಣೆ ನೆಪವೊಡ್ಡಿ ಪತಿರಾಯ ಪತ್ನಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಸಾಲಿಗ್ರಾಮ ತಾಲೂಕು ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ.ಪತಿ ಕ್ರೂರತನಕ್ಕೆ ಗಾಯಗೊಂಡ ಪತ್ನಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ವರದಕ್ಷಿಣೆ ಹಾಗೂ ಗಂಡುಮಗುವಿನ ವ್ಯಾಮೋಹಕ್ಕೆ ಒಳಗಾದ ಪತಿಯ ಹಿಂಸೆ ಭರಿಸಲು ಸಾಧ್ಯವಾಗದ ಪತ್ನಿ ನ್ಯಾಯಕ್ಕಾಗಿ ಸಾಲಿಗ್ರಾಮ ಪೊಲೀಸರ ಮೊರೆ ಹೋಗಿದ್ದಾರೆ.ಬೃಂದಾ(32) ಪತಿಯಿಂದ ಹಲ್ಲೆಗೆ ಒಳಗಾದ ಗೃಹಿಣಿ.ಹಲ್ಲೆ ನಡೆಸಿದ ಪತಿ ಬಸವರಾಜು,ಅತ್ತೆ ಕಾಳಮ್ಮ ಮತ್ತು ಮಾವ ಚೆಲುವಯ್ಯ ವಿರುದ್ದ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಬೃಂದಾ ದೂರು ದಾಖಲಿಸಿದ್ದಾರೆ.

ಹತ್ತು ವರ್ಷಗಳ ಹಿಂದೆ ಹುಣಸೇಗಾಲದ ಬೃಂದಾ ಹಾಗೂ ದಡದಹಳ್ಳಿಯ ಬಸವರಾಜ್ ಮದುವೆ ಆಗಿದ್ದರು.ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ.ಗಂಡು ಮಗು ಹೆತ್ತಿಲ್ಲವೆಂದು ಪತ್ನಿಗೆ ಬಸವರಾಜ್ ಸಾಕಷ್ಟು ಕಿರುಕುಳ ನೀಡಿದ್ದಾನೆ.ವರದಕ್ಷಿಣೆ ವ್ಯಾಮೋಹಕ್ಕೆ ಒಳಗಾದ ಬಸವರಾಜು ಗಂಡು ಮಗು ಹೆತ್ತಿಲ್ಲವೆಂದು ಆಗಾಗ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಾನೆ.ಈ ಬಗ್ಗೆ ಸಾಕಷ್ಟು ಬಾರಿ ಮನ ಒಲಿಸುವ ಕಾರ್ಯ ನಡೆದಿದೆ.ಆದರೂ ಎಚ್ಚೆತ್ತುಕೊಳ್ಳದ ಬಸವರಾಜು ಪತ್ನಿಯ ಮೇಲೆ ದೌರ್ಜನ್ಯ ತೋರಿಸುತ್ತಲೇ ಬಂದಿದ್ದಾನೆ.ಹೆಣ್ಣುಮಕ್ಕಳನ್ನ ಕರೆದುಕೊಂಡು ಹೋಗಿ ಆತ್ಮಹತ್ಯೆ ಮಾಡಿಕೋ ಆಗ ನಾನು ಬೇರೆ ಮದುವೆ ಮಾಡಿಕೊಳ್ಳುತ್ತೇನೆ ಎಂದು ಧಂಕಿ ಹಾಕುತ್ತಿದ್ದಾನೆ.ಪತಿಯ ವರ್ತನೆಯಿಂದ ಬೇಸತ್ತ ಬೃಂದಾ ಪೊಲೀಸರ ಮೊರೆ ಹೋಗಿದ್ದಾರೆ.ಹಿರಿಯರು ಬಸವರಾಜ್ ಗೆ ಬುದ್ದಿವಾದ ಹೇಳಿದ್ದರೂ ಬದಲಾಗಿಲ್ಲ.ಎರಡು ದಿನಗಳ ಹಿಂದೆ ಇದೇ ವಿಚಾರಕ್ಕೆ ಕ್ಯಾತೆ ತೆಗೆದ ಬಸವರಾಜ್ ಪತ್ನಿಯನ್ನ ಹಿಗ್ಗಾ ಮುಗ್ಗ ಥಳಿಸಿದ್ದಾನೆ.ಗಾಯಗೊಂಡ ಬೃಂದಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಪತಿ ಹಾಕುತ್ತಿರುವ ಧಂಕಿಯಿಂದ ಬೃಂದಾ ಜೀವಭಯದಲ್ಲಿದ್ದಾರೆ.ತನ್ನ ಹಾಗೂ ಮಕ್ಕಳಿಗೆ ರಕ್ಷಣೆ ಇಲ್ಲವೆಂದು ಕಣ್ಣೀರಿಡುತ್ತಿದ್ದಾರೆ.ಗಂಡು ಮಗು ಹಾಗೂ ವರದಕ್ಷಿಣೆ ವ್ಯಾಮೋಹಕ್ಕೆ ಒಳಗಾದ ಪತಿರಾಯನಿಗೆ ಪೊಲೀಸರು ತಕ್ಕ ಶಾಸ್ತಿ ನೀಡಬೇಕಿದೆ.ಬೃಂದಾ ಹಾಗೂ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಬೇಕಿದೆ…

Spread the love

Related post

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು…
ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ…
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ…

ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ…

Leave a Reply

Your email address will not be published. Required fields are marked *