ವೆಲ್ಲೆಸ್ಲಿ ಸೇತುವೆ ತಡೆಗೋಡೆ ಕುಸಿತ…ಸಚಿವ ಚೆಲುವರಾಯಸ್ವಾಮಿ ಭೇಟಿ ಪರಿಶೀಲನೆ…

ವೆಲ್ಲೆಸ್ಲಿ ಸೇತುವೆ ತಡೆಗೋಡೆ ಕುಸಿತ…ಸಚಿವ ಚೆಲುವರಾಯಸ್ವಾಮಿ ಭೇಟಿ ಪರಿಶೀಲನೆ…

ಮಂಡ್ಯ,ಆ3,Tv10 ಕನ್ನಡಕಾವೇರಿ ನದಿ ಪ್ರವಾಹದಿಂದಾಗಿ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ಕುಸಿತಗೊಂಡಿದ್ದ ತಡೆಗೋಡೆ,ಹಾನಿಗೊಳಗಾದ ಡಾಂಬಾರ್ ರಸ್ತೆ ಪ್ರದೇಶಗಳನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯ ಸ್ವಾಮಿ ಹಾಗೂ ಸ್ಥಳೀಯ ಶಾಸಕ ರಮೇಶ ಬಂಡಿಸಿದ್ದೇಗೌಡ ಇತರ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು.ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಬಳಿ ನದಿಗೆ ಕಟ್ಟಲಾಗಿದ್ದ ಬಾರಿ ತಡೆಗೋಡೆ ಸಹ ನೀರಿನ ರಭಸಕ್ಕೆ ಕುಸಿದು ಕೊಚ್ಚಿ ಹೋಗಿತ್ತು ಇದರ ಜೊತೆ ಸಂಪರ್ಕ ಡಾಂಬಾರ್ ರಸ್ತೆ ಸಹಿತ ಮಣ್ಣು ಸಹಿತ ಕೊಚ್ಚಿ ಹೋಗಿ ಹಳ್ಳ ಬಿದ್ದು ಅಪಾರ ಹಾನಿಯಾಗಿದೆ.ಸಂಪರ್ಕಕಡಿತಗೊಂಡಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕುಮಾರ್ ಮತ್ತು ಇತರ ಅಧಿಕಾರಿಗಳ ತಂಡ ಮೊದಲು ಒಮ್ಮೆ ಪರಿಶೀಲನೆ ನಡೆಸಿ ಜಿಲ್ಲೆಯ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದರು.200 ವರ್ಷಗಳ ಇತಿಹಾಸವಿರುವ ಲಾರ್ಡ್ ವೆಲ್ಲೆಸ್ಲಿ ಸೇತುವೆ ಮೇಲೆ ನಡೆದಾಡಿದ ಸಚಿವರು ಹಾನಿಯಾಗದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಇದರ ಜೊತೆ ನದಿ ಪಕ್ಕದಲ್ಲೇ ಇದ್ದ ಉದ್ಯಾನವನವೂ ಸಹ ಕೊಚ್ಚಿ ಹೋಗಿ ಕಬ್ಬಿಣದ ತಂತಿ, ಬೇಲೆ ಸಹಿತ ಹಾನಿಗೊಳಗಾಗಿರುವುದನ್ನು ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಇಲಾಖೆಯೊಂದಿಗೆ ಸ್ಥಳದಲ್ಲಿ ಚರ್ಚೆ ನಡೆಸಿ, ಪ್ರವಾಹ ನಿಂತ ಮೇಲೆ ಹಾನಿಯಾಗಿರುವ ಸಂಪರ್ಕ ರಸ್ತೆ, ತಡೆಗೋಡೆ ಸೇರಿಂದತೆ ಉದ್ಯಾನವನ್ನು ಸರಿ ಪಡಿಸಿ, ಯತಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದರು.
ತಹಶೀಲ್ದಾರ್ ಪರಿಶುರಾಮ್ ಸತ್ತಿಗೇರಿ, ತಾ.ಪಂ ಇಒ ವೇಣು, ಲೋಕೋಪಯೋಗಿ ಇಲಾಖೆ, ಸೆಸ್ಕ್ ಇಲಾಖೆ, ಕಂದಾಯ ಇಲಾಖೆ, ನೀರಾವರಿ ಇಲಾಖೆಯ ಅಧಿಕಾರಿಗಳು ಜೊತೆಯಲ್ಲಿದ್ದರು…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *