ವೆಲ್ಲೆಸ್ಲಿ ಸೇತುವೆ ತಡೆಗೋಡೆ ಕುಸಿತ…ಸಚಿವ ಚೆಲುವರಾಯಸ್ವಾಮಿ ಭೇಟಿ ಪರಿಶೀಲನೆ…

ವೆಲ್ಲೆಸ್ಲಿ ಸೇತುವೆ ತಡೆಗೋಡೆ ಕುಸಿತ…ಸಚಿವ ಚೆಲುವರಾಯಸ್ವಾಮಿ ಭೇಟಿ ಪರಿಶೀಲನೆ…

ಮಂಡ್ಯ,ಆ3,Tv10 ಕನ್ನಡಕಾವೇರಿ ನದಿ ಪ್ರವಾಹದಿಂದಾಗಿ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ಕುಸಿತಗೊಂಡಿದ್ದ ತಡೆಗೋಡೆ,ಹಾನಿಗೊಳಗಾದ ಡಾಂಬಾರ್ ರಸ್ತೆ ಪ್ರದೇಶಗಳನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯ ಸ್ವಾಮಿ ಹಾಗೂ ಸ್ಥಳೀಯ ಶಾಸಕ ರಮೇಶ ಬಂಡಿಸಿದ್ದೇಗೌಡ ಇತರ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು.ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಬಳಿ ನದಿಗೆ ಕಟ್ಟಲಾಗಿದ್ದ ಬಾರಿ ತಡೆಗೋಡೆ ಸಹ ನೀರಿನ ರಭಸಕ್ಕೆ ಕುಸಿದು ಕೊಚ್ಚಿ ಹೋಗಿತ್ತು ಇದರ ಜೊತೆ ಸಂಪರ್ಕ ಡಾಂಬಾರ್ ರಸ್ತೆ ಸಹಿತ ಮಣ್ಣು ಸಹಿತ ಕೊಚ್ಚಿ ಹೋಗಿ ಹಳ್ಳ ಬಿದ್ದು ಅಪಾರ ಹಾನಿಯಾಗಿದೆ.ಸಂಪರ್ಕಕಡಿತಗೊಂಡಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕುಮಾರ್ ಮತ್ತು ಇತರ ಅಧಿಕಾರಿಗಳ ತಂಡ ಮೊದಲು ಒಮ್ಮೆ ಪರಿಶೀಲನೆ ನಡೆಸಿ ಜಿಲ್ಲೆಯ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದರು.200 ವರ್ಷಗಳ ಇತಿಹಾಸವಿರುವ ಲಾರ್ಡ್ ವೆಲ್ಲೆಸ್ಲಿ ಸೇತುವೆ ಮೇಲೆ ನಡೆದಾಡಿದ ಸಚಿವರು ಹಾನಿಯಾಗದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಇದರ ಜೊತೆ ನದಿ ಪಕ್ಕದಲ್ಲೇ ಇದ್ದ ಉದ್ಯಾನವನವೂ ಸಹ ಕೊಚ್ಚಿ ಹೋಗಿ ಕಬ್ಬಿಣದ ತಂತಿ, ಬೇಲೆ ಸಹಿತ ಹಾನಿಗೊಳಗಾಗಿರುವುದನ್ನು ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಇಲಾಖೆಯೊಂದಿಗೆ ಸ್ಥಳದಲ್ಲಿ ಚರ್ಚೆ ನಡೆಸಿ, ಪ್ರವಾಹ ನಿಂತ ಮೇಲೆ ಹಾನಿಯಾಗಿರುವ ಸಂಪರ್ಕ ರಸ್ತೆ, ತಡೆಗೋಡೆ ಸೇರಿಂದತೆ ಉದ್ಯಾನವನ್ನು ಸರಿ ಪಡಿಸಿ, ಯತಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದರು.
ತಹಶೀಲ್ದಾರ್ ಪರಿಶುರಾಮ್ ಸತ್ತಿಗೇರಿ, ತಾ.ಪಂ ಇಒ ವೇಣು, ಲೋಕೋಪಯೋಗಿ ಇಲಾಖೆ, ಸೆಸ್ಕ್ ಇಲಾಖೆ, ಕಂದಾಯ ಇಲಾಖೆ, ನೀರಾವರಿ ಇಲಾಖೆಯ ಅಧಿಕಾರಿಗಳು ಜೊತೆಯಲ್ಲಿದ್ದರು…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *