ವೆಲ್ಲೆಸ್ಲಿ ಸೇತುವೆ ತಡೆಗೋಡೆ ಕುಸಿತ…ಸಚಿವ ಚೆಲುವರಾಯಸ್ವಾಮಿ ಭೇಟಿ ಪರಿಶೀಲನೆ…

ವೆಲ್ಲೆಸ್ಲಿ ಸೇತುವೆ ತಡೆಗೋಡೆ ಕುಸಿತ…ಸಚಿವ ಚೆಲುವರಾಯಸ್ವಾಮಿ ಭೇಟಿ ಪರಿಶೀಲನೆ…

ಮಂಡ್ಯ,ಆ3,Tv10 ಕನ್ನಡಕಾವೇರಿ ನದಿ ಪ್ರವಾಹದಿಂದಾಗಿ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ಕುಸಿತಗೊಂಡಿದ್ದ ತಡೆಗೋಡೆ,ಹಾನಿಗೊಳಗಾದ ಡಾಂಬಾರ್ ರಸ್ತೆ ಪ್ರದೇಶಗಳನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯ ಸ್ವಾಮಿ ಹಾಗೂ ಸ್ಥಳೀಯ ಶಾಸಕ ರಮೇಶ ಬಂಡಿಸಿದ್ದೇಗೌಡ ಇತರ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು.ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಬಳಿ ನದಿಗೆ ಕಟ್ಟಲಾಗಿದ್ದ ಬಾರಿ ತಡೆಗೋಡೆ ಸಹ ನೀರಿನ ರಭಸಕ್ಕೆ ಕುಸಿದು ಕೊಚ್ಚಿ ಹೋಗಿತ್ತು ಇದರ ಜೊತೆ ಸಂಪರ್ಕ ಡಾಂಬಾರ್ ರಸ್ತೆ ಸಹಿತ ಮಣ್ಣು ಸಹಿತ ಕೊಚ್ಚಿ ಹೋಗಿ ಹಳ್ಳ ಬಿದ್ದು ಅಪಾರ ಹಾನಿಯಾಗಿದೆ.ಸಂಪರ್ಕಕಡಿತಗೊಂಡಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕುಮಾರ್ ಮತ್ತು ಇತರ ಅಧಿಕಾರಿಗಳ ತಂಡ ಮೊದಲು ಒಮ್ಮೆ ಪರಿಶೀಲನೆ ನಡೆಸಿ ಜಿಲ್ಲೆಯ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದರು.200 ವರ್ಷಗಳ ಇತಿಹಾಸವಿರುವ ಲಾರ್ಡ್ ವೆಲ್ಲೆಸ್ಲಿ ಸೇತುವೆ ಮೇಲೆ ನಡೆದಾಡಿದ ಸಚಿವರು ಹಾನಿಯಾಗದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಇದರ ಜೊತೆ ನದಿ ಪಕ್ಕದಲ್ಲೇ ಇದ್ದ ಉದ್ಯಾನವನವೂ ಸಹ ಕೊಚ್ಚಿ ಹೋಗಿ ಕಬ್ಬಿಣದ ತಂತಿ, ಬೇಲೆ ಸಹಿತ ಹಾನಿಗೊಳಗಾಗಿರುವುದನ್ನು ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಇಲಾಖೆಯೊಂದಿಗೆ ಸ್ಥಳದಲ್ಲಿ ಚರ್ಚೆ ನಡೆಸಿ, ಪ್ರವಾಹ ನಿಂತ ಮೇಲೆ ಹಾನಿಯಾಗಿರುವ ಸಂಪರ್ಕ ರಸ್ತೆ, ತಡೆಗೋಡೆ ಸೇರಿಂದತೆ ಉದ್ಯಾನವನ್ನು ಸರಿ ಪಡಿಸಿ, ಯತಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದರು.
ತಹಶೀಲ್ದಾರ್ ಪರಿಶುರಾಮ್ ಸತ್ತಿಗೇರಿ, ತಾ.ಪಂ ಇಒ ವೇಣು, ಲೋಕೋಪಯೋಗಿ ಇಲಾಖೆ, ಸೆಸ್ಕ್ ಇಲಾಖೆ, ಕಂದಾಯ ಇಲಾಖೆ, ನೀರಾವರಿ ಇಲಾಖೆಯ ಅಧಿಕಾರಿಗಳು ಜೊತೆಯಲ್ಲಿದ್ದರು…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *