ಮುಡಾ ದೈನಂದಿನ ಕೆಲಸಗಳಿಗೆ ಗ್ರೀನ್ ಸಿಗ್ನಲ್…ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಆದೇಶ…

ಮುಡಾ ದೈನಂದಿನ ಕೆಲಸಗಳಿಗೆ ಗ್ರೀನ್ ಸಿಗ್ನಲ್…ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಆದೇಶ…

ಮೈಸೂರು,ಆ4,Tv10 ಕನ್ನಡ

ಸಾರ್ವಜನಿಕರ ದೈನಂದಿನ ಕೆಲಸ

ಕಾರ್ಯಗಳನ್ನ ನಿಯಮಾನುಸಾರ ಕೈಗೊಳ್ಳುವಂತೆ ಮುಡಾ ಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.ಈ ಹಿಂದೆ ವಿಧಿಸಲಾದ ಕೆಲವು ಷರತ್ತುಗಳನ್ನ ಹೊರತು ಪಡಿಸಿ ಕಂದಾಯ ಪಾವತಿ,ಕಟ್ಟಡ ವಿನ್ಯಾಸ ನಕ್ಷೆ ಅನುಮೋದನೆ,ನ್ಯಾಯಾಲಯದ ಕಡತಗಳು,ಅನ್ಯಕ್ರಾಂತ ಅಭಿಪ್ರಾಯ ನೀಡುವ ಕಡತಗಳು,ಲೋಕ ಅದಾಲತ್ ಪ್ರಕರಣಗಳು ಹಾಗೂ ಮಾಹಿತಿ ಹಕ್ಕು ಪ್ರಕರಣಗಳಿಗೆ ಸಂಭಂಧಿಸಿದಂತೆ ಸಾರ್ವಜನಿಕರಿಂದ ಬರುತ್ತಿರುವ ದೂರು ಮತ್ತು ಅಹವಾಲು ಸ್ವೀಕರಿಸುವ ವಿಚಾರದಲ್ಲಿ ನೀಡಿರುವ ನಿರ್ದೇಶನಗಳಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಸರ್ಕಾರ ಸ್ಪಂದಿಸಿದೆ.ನಗರಾಭಿವೃದ್ದಿ ಪ್ರಾಧಿಕಾರದ ಕಾಯ್ದೆ 1987 ಅನ್ವಯದಂತೆ ನಿಯಮ,ಮಾರ್ಗಸೂಚಿಗಳು ಉಲ್ಲಂಘನೆ ಆಗದಂತೆ ನಿಯಮಾನುಸಾರ ಕಾರ್ಯ ನಿರ್ವಹಿಸುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ರವರು ಮುಡಾ ಆಯುಕ್ತರಿಗೆ ಪತ್ರ ಬರೆದು ದೈನಂದಿನ ಕೆಲಸ ಕಾರ್ಯಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಈ ಹಿಂದೆ ವಿಧಿಸಲಾಗಿದ್ದ ಷರತ್ತುಗಳನ್ನ ಮುಡಾ ಪಾಲಿಸಬೇಕಿದೆ.ಯಾವುದೇ ಸಭೆಗಳನ್ನ ನಡೆಸಬಾರದು, ಪ್ರಸ್ತುತ ಹಂತದಲ್ಲಿರುವ ಯಾವುದೇ ಕಡತಗಳ ತೀರ್ಮಾನ ಕೈಗೊಳ್ಳಬಾರದು,ಈ ಹಿಂದೆ ಕೈಗೊಂಡ ಸಾಮಾನ್ಯ ಸಭೆ ತೀರ್ಮಾನಗಳನ್ನ ಅನುಷ್ಠಾನಗೊಳಿಸಬಾರದು ಹಾಗೂ ಸರ್ಕಾರದ ನಿರ್ದೇಶನವಿಲ್ಲದೆ ಯಾವುದೇ ನಿವೇಶನಗಳ ವಿಲೇವಾರಿ ಕುರಿತು ಕ್ರಮ ಜರುಗಿಸಬಾರದೆಂಬ ಷರತ್ತುಗಳನ್ನ ಮುಂದುವರೆಸಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *