ಮುಡಾ ದೈನಂದಿನ ಕೆಲಸಗಳಿಗೆ ಗ್ರೀನ್ ಸಿಗ್ನಲ್…ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಆದೇಶ…

ಮುಡಾ ದೈನಂದಿನ ಕೆಲಸಗಳಿಗೆ ಗ್ರೀನ್ ಸಿಗ್ನಲ್…ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಆದೇಶ…

ಮೈಸೂರು,ಆ4,Tv10 ಕನ್ನಡ

ಸಾರ್ವಜನಿಕರ ದೈನಂದಿನ ಕೆಲಸ

ಕಾರ್ಯಗಳನ್ನ ನಿಯಮಾನುಸಾರ ಕೈಗೊಳ್ಳುವಂತೆ ಮುಡಾ ಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.ಈ ಹಿಂದೆ ವಿಧಿಸಲಾದ ಕೆಲವು ಷರತ್ತುಗಳನ್ನ ಹೊರತು ಪಡಿಸಿ ಕಂದಾಯ ಪಾವತಿ,ಕಟ್ಟಡ ವಿನ್ಯಾಸ ನಕ್ಷೆ ಅನುಮೋದನೆ,ನ್ಯಾಯಾಲಯದ ಕಡತಗಳು,ಅನ್ಯಕ್ರಾಂತ ಅಭಿಪ್ರಾಯ ನೀಡುವ ಕಡತಗಳು,ಲೋಕ ಅದಾಲತ್ ಪ್ರಕರಣಗಳು ಹಾಗೂ ಮಾಹಿತಿ ಹಕ್ಕು ಪ್ರಕರಣಗಳಿಗೆ ಸಂಭಂಧಿಸಿದಂತೆ ಸಾರ್ವಜನಿಕರಿಂದ ಬರುತ್ತಿರುವ ದೂರು ಮತ್ತು ಅಹವಾಲು ಸ್ವೀಕರಿಸುವ ವಿಚಾರದಲ್ಲಿ ನೀಡಿರುವ ನಿರ್ದೇಶನಗಳಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಸರ್ಕಾರ ಸ್ಪಂದಿಸಿದೆ.ನಗರಾಭಿವೃದ್ದಿ ಪ್ರಾಧಿಕಾರದ ಕಾಯ್ದೆ 1987 ಅನ್ವಯದಂತೆ ನಿಯಮ,ಮಾರ್ಗಸೂಚಿಗಳು ಉಲ್ಲಂಘನೆ ಆಗದಂತೆ ನಿಯಮಾನುಸಾರ ಕಾರ್ಯ ನಿರ್ವಹಿಸುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ರವರು ಮುಡಾ ಆಯುಕ್ತರಿಗೆ ಪತ್ರ ಬರೆದು ದೈನಂದಿನ ಕೆಲಸ ಕಾರ್ಯಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಈ ಹಿಂದೆ ವಿಧಿಸಲಾಗಿದ್ದ ಷರತ್ತುಗಳನ್ನ ಮುಡಾ ಪಾಲಿಸಬೇಕಿದೆ.ಯಾವುದೇ ಸಭೆಗಳನ್ನ ನಡೆಸಬಾರದು, ಪ್ರಸ್ತುತ ಹಂತದಲ್ಲಿರುವ ಯಾವುದೇ ಕಡತಗಳ ತೀರ್ಮಾನ ಕೈಗೊಳ್ಳಬಾರದು,ಈ ಹಿಂದೆ ಕೈಗೊಂಡ ಸಾಮಾನ್ಯ ಸಭೆ ತೀರ್ಮಾನಗಳನ್ನ ಅನುಷ್ಠಾನಗೊಳಿಸಬಾರದು ಹಾಗೂ ಸರ್ಕಾರದ ನಿರ್ದೇಶನವಿಲ್ಲದೆ ಯಾವುದೇ ನಿವೇಶನಗಳ ವಿಲೇವಾರಿ ಕುರಿತು ಕ್ರಮ ಜರುಗಿಸಬಾರದೆಂಬ ಷರತ್ತುಗಳನ್ನ ಮುಂದುವರೆಸಲಾಗಿದೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *