ಮುಡಾ ದೈನಂದಿನ ಕೆಲಸಗಳಿಗೆ ಗ್ರೀನ್ ಸಿಗ್ನಲ್…ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಆದೇಶ…

ಮುಡಾ ದೈನಂದಿನ ಕೆಲಸಗಳಿಗೆ ಗ್ರೀನ್ ಸಿಗ್ನಲ್…ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಆದೇಶ…

ಮೈಸೂರು,ಆ4,Tv10 ಕನ್ನಡ

ಸಾರ್ವಜನಿಕರ ದೈನಂದಿನ ಕೆಲಸ

ಕಾರ್ಯಗಳನ್ನ ನಿಯಮಾನುಸಾರ ಕೈಗೊಳ್ಳುವಂತೆ ಮುಡಾ ಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.ಈ ಹಿಂದೆ ವಿಧಿಸಲಾದ ಕೆಲವು ಷರತ್ತುಗಳನ್ನ ಹೊರತು ಪಡಿಸಿ ಕಂದಾಯ ಪಾವತಿ,ಕಟ್ಟಡ ವಿನ್ಯಾಸ ನಕ್ಷೆ ಅನುಮೋದನೆ,ನ್ಯಾಯಾಲಯದ ಕಡತಗಳು,ಅನ್ಯಕ್ರಾಂತ ಅಭಿಪ್ರಾಯ ನೀಡುವ ಕಡತಗಳು,ಲೋಕ ಅದಾಲತ್ ಪ್ರಕರಣಗಳು ಹಾಗೂ ಮಾಹಿತಿ ಹಕ್ಕು ಪ್ರಕರಣಗಳಿಗೆ ಸಂಭಂಧಿಸಿದಂತೆ ಸಾರ್ವಜನಿಕರಿಂದ ಬರುತ್ತಿರುವ ದೂರು ಮತ್ತು ಅಹವಾಲು ಸ್ವೀಕರಿಸುವ ವಿಚಾರದಲ್ಲಿ ನೀಡಿರುವ ನಿರ್ದೇಶನಗಳಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಸರ್ಕಾರ ಸ್ಪಂದಿಸಿದೆ.ನಗರಾಭಿವೃದ್ದಿ ಪ್ರಾಧಿಕಾರದ ಕಾಯ್ದೆ 1987 ಅನ್ವಯದಂತೆ ನಿಯಮ,ಮಾರ್ಗಸೂಚಿಗಳು ಉಲ್ಲಂಘನೆ ಆಗದಂತೆ ನಿಯಮಾನುಸಾರ ಕಾರ್ಯ ನಿರ್ವಹಿಸುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ರವರು ಮುಡಾ ಆಯುಕ್ತರಿಗೆ ಪತ್ರ ಬರೆದು ದೈನಂದಿನ ಕೆಲಸ ಕಾರ್ಯಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಈ ಹಿಂದೆ ವಿಧಿಸಲಾಗಿದ್ದ ಷರತ್ತುಗಳನ್ನ ಮುಡಾ ಪಾಲಿಸಬೇಕಿದೆ.ಯಾವುದೇ ಸಭೆಗಳನ್ನ ನಡೆಸಬಾರದು, ಪ್ರಸ್ತುತ ಹಂತದಲ್ಲಿರುವ ಯಾವುದೇ ಕಡತಗಳ ತೀರ್ಮಾನ ಕೈಗೊಳ್ಳಬಾರದು,ಈ ಹಿಂದೆ ಕೈಗೊಂಡ ಸಾಮಾನ್ಯ ಸಭೆ ತೀರ್ಮಾನಗಳನ್ನ ಅನುಷ್ಠಾನಗೊಳಿಸಬಾರದು ಹಾಗೂ ಸರ್ಕಾರದ ನಿರ್ದೇಶನವಿಲ್ಲದೆ ಯಾವುದೇ ನಿವೇಶನಗಳ ವಿಲೇವಾರಿ ಕುರಿತು ಕ್ರಮ ಜರುಗಿಸಬಾರದೆಂಬ ಷರತ್ತುಗಳನ್ನ ಮುಂದುವರೆಸಲಾಗಿದೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *