ಮುಡಾ ದೈನಂದಿನ ಕೆಲಸಗಳಿಗೆ ಗ್ರೀನ್ ಸಿಗ್ನಲ್…ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಆದೇಶ…

ಮುಡಾ ದೈನಂದಿನ ಕೆಲಸಗಳಿಗೆ ಗ್ರೀನ್ ಸಿಗ್ನಲ್…ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಆದೇಶ…

ಮೈಸೂರು,ಆ4,Tv10 ಕನ್ನಡ

ಸಾರ್ವಜನಿಕರ ದೈನಂದಿನ ಕೆಲಸ

ಕಾರ್ಯಗಳನ್ನ ನಿಯಮಾನುಸಾರ ಕೈಗೊಳ್ಳುವಂತೆ ಮುಡಾ ಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.ಈ ಹಿಂದೆ ವಿಧಿಸಲಾದ ಕೆಲವು ಷರತ್ತುಗಳನ್ನ ಹೊರತು ಪಡಿಸಿ ಕಂದಾಯ ಪಾವತಿ,ಕಟ್ಟಡ ವಿನ್ಯಾಸ ನಕ್ಷೆ ಅನುಮೋದನೆ,ನ್ಯಾಯಾಲಯದ ಕಡತಗಳು,ಅನ್ಯಕ್ರಾಂತ ಅಭಿಪ್ರಾಯ ನೀಡುವ ಕಡತಗಳು,ಲೋಕ ಅದಾಲತ್ ಪ್ರಕರಣಗಳು ಹಾಗೂ ಮಾಹಿತಿ ಹಕ್ಕು ಪ್ರಕರಣಗಳಿಗೆ ಸಂಭಂಧಿಸಿದಂತೆ ಸಾರ್ವಜನಿಕರಿಂದ ಬರುತ್ತಿರುವ ದೂರು ಮತ್ತು ಅಹವಾಲು ಸ್ವೀಕರಿಸುವ ವಿಚಾರದಲ್ಲಿ ನೀಡಿರುವ ನಿರ್ದೇಶನಗಳಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಸರ್ಕಾರ ಸ್ಪಂದಿಸಿದೆ.ನಗರಾಭಿವೃದ್ದಿ ಪ್ರಾಧಿಕಾರದ ಕಾಯ್ದೆ 1987 ಅನ್ವಯದಂತೆ ನಿಯಮ,ಮಾರ್ಗಸೂಚಿಗಳು ಉಲ್ಲಂಘನೆ ಆಗದಂತೆ ನಿಯಮಾನುಸಾರ ಕಾರ್ಯ ನಿರ್ವಹಿಸುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ರವರು ಮುಡಾ ಆಯುಕ್ತರಿಗೆ ಪತ್ರ ಬರೆದು ದೈನಂದಿನ ಕೆಲಸ ಕಾರ್ಯಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಈ ಹಿಂದೆ ವಿಧಿಸಲಾಗಿದ್ದ ಷರತ್ತುಗಳನ್ನ ಮುಡಾ ಪಾಲಿಸಬೇಕಿದೆ.ಯಾವುದೇ ಸಭೆಗಳನ್ನ ನಡೆಸಬಾರದು, ಪ್ರಸ್ತುತ ಹಂತದಲ್ಲಿರುವ ಯಾವುದೇ ಕಡತಗಳ ತೀರ್ಮಾನ ಕೈಗೊಳ್ಳಬಾರದು,ಈ ಹಿಂದೆ ಕೈಗೊಂಡ ಸಾಮಾನ್ಯ ಸಭೆ ತೀರ್ಮಾನಗಳನ್ನ ಅನುಷ್ಠಾನಗೊಳಿಸಬಾರದು ಹಾಗೂ ಸರ್ಕಾರದ ನಿರ್ದೇಶನವಿಲ್ಲದೆ ಯಾವುದೇ ನಿವೇಶನಗಳ ವಿಲೇವಾರಿ ಕುರಿತು ಕ್ರಮ ಜರುಗಿಸಬಾರದೆಂಬ ಷರತ್ತುಗಳನ್ನ ಮುಂದುವರೆಸಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *