ಹೆತ್ತ ತಾಯಿಗೆ ಮಗಳ ಅಶ್ಲೀಲ ಫೋಟೋ ರವಾನಿಸಿದ ಪ್ರಿಯಕರ…ಮದುವೆ ನಿರಾಕರಿಸಿದ್ದಕ್ಕೆ ಸೇಡು…!

ಹೆತ್ತ ತಾಯಿಗೆ ಮಗಳ ಅಶ್ಲೀಲ ಫೋಟೋ ರವಾನಿಸಿದ ಪ್ರಿಯಕರ…ಮದುವೆ ನಿರಾಕರಿಸಿದ್ದಕ್ಕೆ ಸೇಡು…!

ಯುವಕನ ದುರ್ವರ್ತನೆಗೆ ಬೇಸತ್ತು ಮದುವೆ ನಿರಾಕರಿಸಿದ ಹಿನ್ನಲೆ ಪ್ರಿಯಕರ ತನ್ನ ಪ್ರಿಯಕರಳ ಅಶ್ಲೀಲ ಫೋಟೋವನ್ನ ಹೆತ್ತ ತಾಯಿಗೆ ರವಾನಿಸಿ ಸೇಡು ತೀರಿಸಿಕೊಂಡ ಘಟನೆ ಎನ್.ಆರ್.ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಯ್ಡುನಗರದಲ್ಲಿ ನಡೆದಿದೆ.ಮಗಳ ಅಶ್ಲೀಲ ಫೋಟೋ ನೋಡಿ ದಂಗಾದ ಹೆತ್ತ ತಾಯಿ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಅಳಿಯನಾಗಬೇಕಿದ್ದ ಪ್ರಿಯಕರನ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಕಲ್ಯಾಣಗಿರಿ ನಿವಾಸಿ ಮೊಹಮದ್ ವಾಸೀಂ ಮೇಲೆ ಎಫ.ಐ.ಆರ್.ದಾಖಲಾಗಿದೆ.

ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ನೊಂದ ಯುವತಿಗೆ ಮೊಹಮದ್ ವಾಸೀಂ ಪರಿಚಯವಾಗಿದ್ದಾನೆ.ಇಬ್ಬರೂ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಸಲುಗೆ ಬೆಳೆದಿದೆ.ಯುವತಿಯನ್ನ ಮದುವೆ ಆಗಲು ನಿರ್ಧರಿಸಿ ಹೆತ್ತ ತಾಯಿಯನ್ನ ಸಂಭಂಧ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.ಪ್ರಾರಂಭದಲ್ಲಿ ನಿರಾಕರಿಸಿದ ತಾಯಿ ನಂತರ ಹುಡುಗನ ಮನೆಯವರ ಒತ್ತಡಕ್ಕೆ ಮಣಿದು ಒಪ್ಪಿಗೆ ಸೂಚಿಸಿದ್ದಾರೆ.ನಿಶ್ಚಿತಾರ್ಥವಾದ ನಂತರ ಇಬ್ಬರೂ ಸುತ್ತಾಡಿದ್ದಾರೆ.ಈ ವೇಳೆ ಯುವತಿಯ ಅಶ್ಲೀಲ ಫೋಟೋ ಪಡೆಯುವಲ್ಲಿ ಮಹಮದ್ ವಾಸೀಂ ಯಶಸ್ವಿಯಾಗಿದ್ದಾನೆ.ಕೆಲವು ದಿನಗಳಲ್ಲಿ ಮಹಮದ್ ವಾಸೀಂ ವರ್ತನೆ ಬೇಸರಕ್ಕೆ ಕಾರಣವಾಗಿ ಮದುವೆ ನಿರಾಕರಿಸಿದ್ದಾರೆ.ಆದರೆ ಪಟ್ಟು ಬಿಡದ ಮಹಮದ್ ವಾಸೀಂ ಮದುವೆ ಮಾಡಿಕೊಡಿ ಇಲ್ಲಾಂದ್ರೆ ಅಶ್ಲೀಲ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.ಮಹಮದ್ ವಾಸೀಂ ನ ಬೆದರಿಕೆಗೆ ಮಣಿಯದ ಹಿನ್ನಲೆ ಯುವತಿಯ ತಾಯಿಗೆ ಅಶ್ಲೀಲ ಫೋಟೋ ರವಾನಿಸಿ ಸೇಡು ತೀರಿಸಿಕೊಂಡಿದ್ದಾನೆ.ಮಗಳ ಫೋಟೋ ರವಾನಿಸಿದ ಮಹಮದ್ ವಾಸೀಂ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಎನ್.ಆರ್.ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *