ಹೆತ್ತ ತಾಯಿಗೆ ಮಗಳ ಅಶ್ಲೀಲ ಫೋಟೋ ರವಾನಿಸಿದ ಪ್ರಿಯಕರ…ಮದುವೆ ನಿರಾಕರಿಸಿದ್ದಕ್ಕೆ ಸೇಡು…!

ಹೆತ್ತ ತಾಯಿಗೆ ಮಗಳ ಅಶ್ಲೀಲ ಫೋಟೋ ರವಾನಿಸಿದ ಪ್ರಿಯಕರ…ಮದುವೆ ನಿರಾಕರಿಸಿದ್ದಕ್ಕೆ ಸೇಡು…!

ಯುವಕನ ದುರ್ವರ್ತನೆಗೆ ಬೇಸತ್ತು ಮದುವೆ ನಿರಾಕರಿಸಿದ ಹಿನ್ನಲೆ ಪ್ರಿಯಕರ ತನ್ನ ಪ್ರಿಯಕರಳ ಅಶ್ಲೀಲ ಫೋಟೋವನ್ನ ಹೆತ್ತ ತಾಯಿಗೆ ರವಾನಿಸಿ ಸೇಡು ತೀರಿಸಿಕೊಂಡ ಘಟನೆ ಎನ್.ಆರ್.ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಯ್ಡುನಗರದಲ್ಲಿ ನಡೆದಿದೆ.ಮಗಳ ಅಶ್ಲೀಲ ಫೋಟೋ ನೋಡಿ ದಂಗಾದ ಹೆತ್ತ ತಾಯಿ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಅಳಿಯನಾಗಬೇಕಿದ್ದ ಪ್ರಿಯಕರನ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಕಲ್ಯಾಣಗಿರಿ ನಿವಾಸಿ ಮೊಹಮದ್ ವಾಸೀಂ ಮೇಲೆ ಎಫ.ಐ.ಆರ್.ದಾಖಲಾಗಿದೆ.

ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ನೊಂದ ಯುವತಿಗೆ ಮೊಹಮದ್ ವಾಸೀಂ ಪರಿಚಯವಾಗಿದ್ದಾನೆ.ಇಬ್ಬರೂ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಸಲುಗೆ ಬೆಳೆದಿದೆ.ಯುವತಿಯನ್ನ ಮದುವೆ ಆಗಲು ನಿರ್ಧರಿಸಿ ಹೆತ್ತ ತಾಯಿಯನ್ನ ಸಂಭಂಧ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.ಪ್ರಾರಂಭದಲ್ಲಿ ನಿರಾಕರಿಸಿದ ತಾಯಿ ನಂತರ ಹುಡುಗನ ಮನೆಯವರ ಒತ್ತಡಕ್ಕೆ ಮಣಿದು ಒಪ್ಪಿಗೆ ಸೂಚಿಸಿದ್ದಾರೆ.ನಿಶ್ಚಿತಾರ್ಥವಾದ ನಂತರ ಇಬ್ಬರೂ ಸುತ್ತಾಡಿದ್ದಾರೆ.ಈ ವೇಳೆ ಯುವತಿಯ ಅಶ್ಲೀಲ ಫೋಟೋ ಪಡೆಯುವಲ್ಲಿ ಮಹಮದ್ ವಾಸೀಂ ಯಶಸ್ವಿಯಾಗಿದ್ದಾನೆ.ಕೆಲವು ದಿನಗಳಲ್ಲಿ ಮಹಮದ್ ವಾಸೀಂ ವರ್ತನೆ ಬೇಸರಕ್ಕೆ ಕಾರಣವಾಗಿ ಮದುವೆ ನಿರಾಕರಿಸಿದ್ದಾರೆ.ಆದರೆ ಪಟ್ಟು ಬಿಡದ ಮಹಮದ್ ವಾಸೀಂ ಮದುವೆ ಮಾಡಿಕೊಡಿ ಇಲ್ಲಾಂದ್ರೆ ಅಶ್ಲೀಲ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.ಮಹಮದ್ ವಾಸೀಂ ನ ಬೆದರಿಕೆಗೆ ಮಣಿಯದ ಹಿನ್ನಲೆ ಯುವತಿಯ ತಾಯಿಗೆ ಅಶ್ಲೀಲ ಫೋಟೋ ರವಾನಿಸಿ ಸೇಡು ತೀರಿಸಿಕೊಂಡಿದ್ದಾನೆ.ಮಗಳ ಫೋಟೋ ರವಾನಿಸಿದ ಮಹಮದ್ ವಾಸೀಂ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಎನ್.ಆರ್.ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *