ಮನೆ ಬಿಟ್ಟುಹೋದ ಅಪ್ಪನಿಗಾಗಿ ಕಾಯುತ್ತಿರುವ ಮಗಳ ಮೃತದೇಹ…ಎಲ್ಲೇ ಇದ್ದರೂ ಬನ್ನಿ…ಕುಟುಂಬಸ್ಥರ ಕಣ್ಣೀರು…ಮೈಸೂರಿನಲ್ಲೊಂದ ಮನಕಲುಕುವ ಘಟನೆ…

ಮನೆ ಬಿಟ್ಟುಹೋದ ಅಪ್ಪನಿಗಾಗಿ ಕಾಯುತ್ತಿರುವ ಮಗಳ ಮೃತದೇಹ…ಎಲ್ಲೇ ಇದ್ದರೂ ಬನ್ನಿ…ಕುಟುಂಬಸ್ಥರ ಕಣ್ಣೀರು…ಮೈಸೂರಿನಲ್ಲೊಂದ ಮನಕಲುಕುವ ಘಟನೆ…

ಮೈಸೂರು,ಆ5,Tv10 ಕನ್ನಡ

ಮನೆ ಬಿಟ್ಟುಹೋದ ತಂದೆಗಾಗಿ ಮಗಳ ಮೃತದೇಹ ಕಾಯುತ್ತಿರುವ ಮನಕಲುಕುವ ಘಟನೆ ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ.ಅಪಘಾತದಲ್ಲಿ ಮೃತಪಟ್ಟಯುವತಿಯ ಮೃತದೇಹವನ್ನ ಇಟ್ಟುಕೊಂಡ ಕುಟುಂಬ ಹೆತ್ತ ತಂದೆಯ ಬರುವಿಕೆಗಾಗಿ ಕಾದು ಕುಳಿತಿದೆ.ತಂದೆ ಬರುವಿಕೆಗಾಗಿ ಅಂತ್ಯಕ್ರಿಯೆಯನ್ನ ಒಂದು ದಿನ ಮುಂದೂಡಿದ್ದು ಇಡೀ ಕುಟುಂಬ ಮನೆ ಬಿಟ್ಟುಹೋದ ವ್ಯಕ್ತಿಗಾಗಿ ಕಾತುರದಿಂದ ಎದುರು ನೋಡುತ್ತಿದೆ.ನಾಗರಾಜ್.ಆ.ಕೆಂಚಪ್ಪ ಹಾಗೂ ಇಂದಿರಮ್ಮ ದಂಪತಿಯ ಪುತ್ರಿ ಕವನಾ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.ಹೂಟಗಳ್ಳಿಯಲ್ಲಿ ಸ್ನೇಹಿತರ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಕವನ ಸ್ಥಳದಲ್ಲೇ

ಮೃತಪಟ್ಟಿದ್ದಾಳೆ.ಆದಿಚುಂಚನಗಿರಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ಓದುತ್ತಿರುವ ಕವನ ಸ್ನೇಹಿತರ ಜೊತೆ ತೆರಳುತ್ತಿದ್ದಾಗ ದಾರುಣವಾಗಿ ಸಾವನ್ನಪ್ಪಿದ್ದಾಳೆ.ಮೂರು ತಿಂಗಳ ಹಿಂದೆ ಕಾರಣಾಂತರದಿಂದ ಹೆತ್ತ ತಂದೆ ನಾಗರಾಜ್ ಮನೆ ಬಿಟ್ಟು ಹೋಗಿದ್ದಾರೆ.ತಂದೆಗಾಗಿ ಕುಟುಂಬಸ್ಥರು ಹುಡುಕಾಡಿದ ಜಾಗವೇ ಇಲ್ಲ.ಕುಟುಂಬಕ್ಕೆ ಊರುಗೋಲಾಗಿದ್ದ ತಂದೆ ಇಲ್ಲದೆ ಅಘಾತಗೊಂಡಿದ್ದ ಕುಟುಂಬಕ್ಕೆ ಇದೀಗ ಮಗಳು ಅಪಘಾತದಲ್ಲಿ ಮೃತಪಟ್ಟಿರುವುದು ಮತ್ತೊಂದು ಶಾಕ್ ಗೆ ಕಾರಣವಾಗಿದೆ.ಸಧ್ಯ ಮನೆ ಬಿಟ್ಟುಹೋದ ತಂದೆ ಈಗಲಾದ್ರೂ ಹಿಂದಿರುಗುತ್ತಾರೆ.ಮಗಳ ಸಾವಿನ ಮಾಹಿತಿ ಅರಿತ ಮೇಲಾದ್ರೂ ಬರಬಹುದೆಂದ ಆಶಾಕಿರಣ ಕುಟುಂಬಸ್ಥರಲ್ಲಿದೆ.ಎಲ್ಲೇ ಇದ್ರೂ ವಾಪಸ್ ಬನ್ನಿ ನಿಮ್ಮ ಮಗಳು ಅಪಘಾತದಲ್ಲಿ ಮೃತಪಟ್ಟಿದ್ದಾಳೆ.ನಿಮಗಾಗಿ ಮೃತದೇಹವನ್ನ ಇರಿಸಿಕೊಂಡಿದ್ದೇವೆ.ಯಾವುದೇ ಬೇಸರವಿದ್ರೂ ಮರೆತು ಬನ್ನಿ.ನಾಳೆ ಅಂತ್ಯಕ್ರಿಯೆ ಮಾಡುವುದಾಗಿ ಕಳಕಳಿಯಿಂದ ಮನವಿ ಮಾಡಿದ್ದಾರೆ.ಮಗಳ ಅಂತಿಮ ದರುಶನ ಪಡೆಯಲು ಹೆತ್ತ ತಂದೆ ಬರುತ್ತಾರೆಂಬ ವಿಶ್ವಾಸ ಕುಟುಂಬಸ್ಥರಲ್ಲಿದೆ…

Spread the love

Related post

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು…
ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ…
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ…

ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ…

Leave a Reply

Your email address will not be published. Required fields are marked *