ಮನೆ ಬಿಟ್ಟುಹೋದ ಅಪ್ಪನಿಗಾಗಿ ಕಾಯುತ್ತಿರುವ ಮಗಳ ಮೃತದೇಹ…ಎಲ್ಲೇ ಇದ್ದರೂ ಬನ್ನಿ…ಕುಟುಂಬಸ್ಥರ ಕಣ್ಣೀರು…ಮೈಸೂರಿನಲ್ಲೊಂದ ಮನಕಲುಕುವ ಘಟನೆ…

ಮನೆ ಬಿಟ್ಟುಹೋದ ಅಪ್ಪನಿಗಾಗಿ ಕಾಯುತ್ತಿರುವ ಮಗಳ ಮೃತದೇಹ…ಎಲ್ಲೇ ಇದ್ದರೂ ಬನ್ನಿ…ಕುಟುಂಬಸ್ಥರ ಕಣ್ಣೀರು…ಮೈಸೂರಿನಲ್ಲೊಂದ ಮನಕಲುಕುವ ಘಟನೆ…

ಮೈಸೂರು,ಆ5,Tv10 ಕನ್ನಡ

ಮನೆ ಬಿಟ್ಟುಹೋದ ತಂದೆಗಾಗಿ ಮಗಳ ಮೃತದೇಹ ಕಾಯುತ್ತಿರುವ ಮನಕಲುಕುವ ಘಟನೆ ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ.ಅಪಘಾತದಲ್ಲಿ ಮೃತಪಟ್ಟಯುವತಿಯ ಮೃತದೇಹವನ್ನ ಇಟ್ಟುಕೊಂಡ ಕುಟುಂಬ ಹೆತ್ತ ತಂದೆಯ ಬರುವಿಕೆಗಾಗಿ ಕಾದು ಕುಳಿತಿದೆ.ತಂದೆ ಬರುವಿಕೆಗಾಗಿ ಅಂತ್ಯಕ್ರಿಯೆಯನ್ನ ಒಂದು ದಿನ ಮುಂದೂಡಿದ್ದು ಇಡೀ ಕುಟುಂಬ ಮನೆ ಬಿಟ್ಟುಹೋದ ವ್ಯಕ್ತಿಗಾಗಿ ಕಾತುರದಿಂದ ಎದುರು ನೋಡುತ್ತಿದೆ.ನಾಗರಾಜ್.ಆ.ಕೆಂಚಪ್ಪ ಹಾಗೂ ಇಂದಿರಮ್ಮ ದಂಪತಿಯ ಪುತ್ರಿ ಕವನಾ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.ಹೂಟಗಳ್ಳಿಯಲ್ಲಿ ಸ್ನೇಹಿತರ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಕವನ ಸ್ಥಳದಲ್ಲೇ

ಮೃತಪಟ್ಟಿದ್ದಾಳೆ.ಆದಿಚುಂಚನಗಿರಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ಓದುತ್ತಿರುವ ಕವನ ಸ್ನೇಹಿತರ ಜೊತೆ ತೆರಳುತ್ತಿದ್ದಾಗ ದಾರುಣವಾಗಿ ಸಾವನ್ನಪ್ಪಿದ್ದಾಳೆ.ಮೂರು ತಿಂಗಳ ಹಿಂದೆ ಕಾರಣಾಂತರದಿಂದ ಹೆತ್ತ ತಂದೆ ನಾಗರಾಜ್ ಮನೆ ಬಿಟ್ಟು ಹೋಗಿದ್ದಾರೆ.ತಂದೆಗಾಗಿ ಕುಟುಂಬಸ್ಥರು ಹುಡುಕಾಡಿದ ಜಾಗವೇ ಇಲ್ಲ.ಕುಟುಂಬಕ್ಕೆ ಊರುಗೋಲಾಗಿದ್ದ ತಂದೆ ಇಲ್ಲದೆ ಅಘಾತಗೊಂಡಿದ್ದ ಕುಟುಂಬಕ್ಕೆ ಇದೀಗ ಮಗಳು ಅಪಘಾತದಲ್ಲಿ ಮೃತಪಟ್ಟಿರುವುದು ಮತ್ತೊಂದು ಶಾಕ್ ಗೆ ಕಾರಣವಾಗಿದೆ.ಸಧ್ಯ ಮನೆ ಬಿಟ್ಟುಹೋದ ತಂದೆ ಈಗಲಾದ್ರೂ ಹಿಂದಿರುಗುತ್ತಾರೆ.ಮಗಳ ಸಾವಿನ ಮಾಹಿತಿ ಅರಿತ ಮೇಲಾದ್ರೂ ಬರಬಹುದೆಂದ ಆಶಾಕಿರಣ ಕುಟುಂಬಸ್ಥರಲ್ಲಿದೆ.ಎಲ್ಲೇ ಇದ್ರೂ ವಾಪಸ್ ಬನ್ನಿ ನಿಮ್ಮ ಮಗಳು ಅಪಘಾತದಲ್ಲಿ ಮೃತಪಟ್ಟಿದ್ದಾಳೆ.ನಿಮಗಾಗಿ ಮೃತದೇಹವನ್ನ ಇರಿಸಿಕೊಂಡಿದ್ದೇವೆ.ಯಾವುದೇ ಬೇಸರವಿದ್ರೂ ಮರೆತು ಬನ್ನಿ.ನಾಳೆ ಅಂತ್ಯಕ್ರಿಯೆ ಮಾಡುವುದಾಗಿ ಕಳಕಳಿಯಿಂದ ಮನವಿ ಮಾಡಿದ್ದಾರೆ.ಮಗಳ ಅಂತಿಮ ದರುಶನ ಪಡೆಯಲು ಹೆತ್ತ ತಂದೆ ಬರುತ್ತಾರೆಂಬ ವಿಶ್ವಾಸ ಕುಟುಂಬಸ್ಥರಲ್ಲಿದೆ…

Spread the love

Related post

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…
ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…

Leave a Reply

Your email address will not be published. Required fields are marked *