ರಾಜಕಾರಣವನ್ನು ಉದ್ಯೋಗ ಮಾಡಿಕೊಳ್ಳುವ ಪರಿಪಾಠ ಅಪಾಯಕಾರಿ…ಸಾ.ರಾ.ಮಹೇಶ್…

ರಾಜಕಾರಣವನ್ನು ಉದ್ಯೋಗ ಮಾಡಿಕೊಳ್ಳುವ ಪರಿಪಾಠ ಅಪಾಯಕಾರಿ…ಸಾ.ರಾ.ಮಹೇಶ್…

ಮೈಸೂರು,ಆ6,Tv10 ಕನ್ನಡನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ನ ವತಿಯಿಂದ ನಗರದ ರುಚಿ ದಿ ಪ್ರಿನ್ಸ್ ಹೋಟೆಲ್ ನಲ್ಲಿ ಉದ್ಯಮಿ ಹಾಗೂ ವೃತ್ತಿಪರರ ಸಮ್ಮಿಲನ ಕಾರ್ಯಕ್ರಮಆಯೋಜಿಸಲಾಗಿತ್ತು.ಮಾಜಿ ಸಚಿವ ಸಾ.ರಾ.ಮಹೇಶ್ ಕಾರ್ಯಕ್ರಮವನ್ನ ಉದ್ಘಾಟಿಸಿದರು.ನಂತರ ಮಾತನಾಡಿ ಉದ್ಯೋಗ ಮತ್ತು ರಾಜಕಾರಣವನ್ನು ಪ್ರತ್ಯೇಕವಾಗಿ ನಿರ್ವಹಣೆ ಮಾಡಬೇಕಾದ ಅವಶ್ಯಕತೆ ಇದೆ. ರಾಜಕಾರಣಿಗಳು ಜೀವನೋಪಾಯಕ್ಕೆ ಒಂದು ಉದ್ಯೋಗವನ್ನು ಆಶ್ರಯಿಸಿ ಇದರಿಂದ ಪ್ರತ್ಯೇಕವಾಗಿ ರಾಜಕಾರಣ ಮಾಡುವುದನ್ನು ಒಂದು ಸೇವೆಯನ್ನಾಗಿ ರೂಢಿ ಮಾಡಿಕೊಳ್ಳಬೇಕು. ಆದರೆ ಬಹಳಷ್ಟು ಜನರು ರಾಜಕಾರಣವನ್ನೇ ತಮ್ಮ ಉದ್ಯೋಗ ವನ್ನಾಗಿ ಮಾಡಿಕೊಂಡು ಅದನ್ನೇ ತಮ್ಮ ಸಂಪಾದನೆಯ ಮಾರ್ಗವನ್ನಾಗಿಸಿಕೊಂಡು ಅಮಾಯಕರನ್ನು ಶೋಷಿಸುತ್ತಾ ಸಮಾಜಕ್ಕೆ ಕಂಟಕರಾಗುತ್ತಿದ್ದಾರೆ. ಇದರಿಂದಾಗಿ ಸಾಮಾನ್ಯ ಜನರಲ್ಲಿ ರಾಜಕಾರಣಿಗಳ ಬಗ್ಗೆ ಅಸಹನೆಯ ಭಾವನೆ ಹೆಚ್ಚಾಗುತ್ತಿದೆ ಎಂದು ವಿಷಾಧಿಸಿದರು.
ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಸಮಾಜದ ಬಾಂಧವರ ಕಲ್ಯಾಣಕ್ಕಾಗಿ ಹಾಗೂ ಸಾಮರಸ್ಯ ಸಮುದಾಯದ ನಿರ್ಮಾಣಕ್ಕಾಗಿ ಸಾಕಷ್ಟು ಶ್ರಮಿಸುತ್ತಿದೆ. ಹತ್ತು ಹಲವು ಯೋಜನೆಗಳನ್ನು ಹಮ್ಮಿಕೊಂಡು ಅವುಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವ ಮೂಲಕ ಸಮಾಜದ ಎಲ್ಲ ವರ್ಗಗಳ ಜನರಿಗೆ ಸೇವೆ ನೀಡುತ್ತಿದೆ.
ಮೈಸೂರು ಮಾತ್ರವಲ್ಲದೆ ಮಂಡ್ಯ ಬೆಂಗಳೂರು ರಾಮನಗರ ಹಾಸನ ಮತ್ತಿತರ ಜಿಲ್ಲೆಗಳಲ್ಲಿಯೂ ಶಾಖೆಗಳನ್ನು ತೆರೆಯುವ ಮೂಲಕ ಸಮುದಾಯದ ಒಳಿತಿಗೆ ಶ್ರಮಿಸುತ್ತಿದೆ. ಹಿಂದಿನಿಂದಲೂ ಸಂಸ್ಥೆಯ ಎಲ್ಲಾ ಉತ್ತಮ ಕಾರ್ಯಗಳಿಗೆ ಸಹಕಾರ ನೀಡುತ್ತಾ ಬರಲಾಗುತ್ತಿದ್ದು ಮುಂದಿನ ದಿನಗಳಲ್ಲಿಯೂ ಸಂಸ್ಥೆ ಹಮ್ಮಿಕೊಳ್ಳುವ ಎಲ್ಲಾ ರಚನಾತ್ಮಕ ಕಾರ್ಯಗಳಿಗೆ ಇನ್ನೂ ಹೆಚ್ಚಿನ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.ಮೈಸೂರು ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷ ಪಿ ವಿಶ್ವನಾಥ್, ಮೈಸೂರು ಮೂಡ ಮಾಜಿ ಅಧ್ಯಕ್ಷ ಯಶಸ್ವಿನಿ ಸೋಮಶೇಖರ್ ,ಕೆ ಎ ಎಸ್ ಎಸ್ ಎಫ್ ಐ ಜಂಟಿ ನಿರ್ದೇಶಕ ಸತೀಶ್ ,ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಮಂಜೇಗೌಡ ,ಗಂಗಾಧರ ಗೌಡ , ಡಾ.ಮೀನಾಕುಮಾರಿ ,ಡಾ. ಎಸ್ ಯಶಸ್ವಿನಿ , ಮಂಜುನಾಥ್ , ನಿಂಗರಾಜು , ಶಿವಶಂಕರ್ ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ಉದ್ಯಮಿಗಳು, ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಶೋಭ ರಮೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…

Spread the love

Related post

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…
ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…

Leave a Reply

Your email address will not be published. Required fields are marked *