ತಾ.ಪಂ.ಮಾಜಿ ಸದಸ್ಯೆ ನಿವೇಶನದಲ್ಲಿ ದಾಂಧಲೆ…ಯುವಕನ ಮೇಲೆ ಹಲ್ಲೆ…ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ…ಮೈಸೂರಿನಲ್ಲಿ ಆಟಾಟೋಪ…

ತಾ.ಪಂ.ಮಾಜಿ ಸದಸ್ಯೆ ನಿವೇಶನದಲ್ಲಿ ದಾಂಧಲೆ…ಯುವಕನ ಮೇಲೆ ಹಲ್ಲೆ…ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ…ಮೈಸೂರಿನಲ್ಲಿ ಆಟಾಟೋಪ…

ಮೈಸೂರು,ಆ12,Tv10 ಕನ್ನಡ

ಮೈಸೂರು ತಾಲೂಕು ಪಂಚಾಯ್ತಿ ಮಾಜಿ ಸದಸ್ಯೆಗೆ ಸೇರಿದ ನಿವೇಶನಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮೂವರು ವ್ಯಕ್ತಿಗಳು ದಾಂಧಲೆ ಮಾಡಿದ್ದಾರೆ.ಜೆಸಿಬಿ ತಂದು ಕಟ್ಟಡವನ್ನ

ಧ್ವಂಸಗೊಳಿಸಿದ್ದಾರೆ.ಪ್ರತಿರೋಧಿಸಿದ ಮಾಜಿ ಸದಸ್ಯೆ ಪುತ್ರನನ್ನ ಎಳೆದೊಯ್ದು

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕಟ್ಟಡವನ್ನ ಧ್ವಂಸಗೊಳಿಸಿದ್ದಾರೆ.ಈ ಸಂಭಂಧ ಮೂವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.

ಮೈಸೂರಿನ ಹೊರವಲಯದ ಹಿನಕಲ್ ಬಳಿ ಇರುವ ನಿವೇಶನದ ಸಂಖ್ಯೆ 2403 ಬಿ 3 ತಾಲೂಕು ಪಂಚಾಯ್ತಿ ಮಾಜಿ ಸದಸ್ಯೆ ಚಿಕ್ಕತಾಯಮ್ಮ ಎಂಬುವರಿಗೆ ಸೇರಿದ್ದು.ಜಿ.ಡಬ್ಲೂ.ಎಸ್.ನಿವೇಶನದಲ್ಲಿ ಚಿಕ್ಕತಾಯಮ್ಮ ಕಟ್ಟಡ ನಿರ್ಮಿಸಿದ್ದಾರೆ.ನಿವೇಶನಕ್ಕೆ ಬಂದ ಮೂವರು ವ್ಯಕ್ತಿಗಳು ಏಕಾ ಏಕಿ ಜೆಸಿಬಿ ಯಂತ್ರದಿಂದ ಕಟ್ಟಡ ಕೆಡವಲು ಮುಂದಾಗಿದ್ದಾರೆ.ಇದನ್ನ ಪ್ರತಿರೋಧಿಸಿದ ಚಿಕ್ಕತಾಯಮ್ಮ ಪುತ್ರ ರಾಮ್ ಪ್ರೀತಂ ನ ಬಲವಂತವಾಗಿ ಎಳೆದೊಯ್ದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕಬ್ಬಿಣದ ರಾಡಿನಿಂದ ಕಾಲಿಗೆ ಹೊಡೆದು ರಕ್ತಗಾಯ ಮಾಡಿದ್ದಾರೆ.ಈ ಎಲ್ಲಾ ಘಟನೆ ಸಿಸಿ ಕ್ಯಾಮರಾದಲ್ಲಿ ಹಾಗೂ ಮೊಬೈಲ್ ನಲ್ಲಿ ಸೆರೆಯಾಗಿದೆ.ನ್ಯಾಯಾಲಯದ ಯಾವುದೇ ಆದೇಶ ಪಡೆಯದೆ ಏಕಾಏಕಿ ನಿವೇಶನಕ್ಕೆ ಅಕ್ರಮವಾಗಿ ಪ್ರವೇಶಿಸಿ ಧಂಕಿ ಹಾಕಿ ಬಲವಂತವಾಗಿ ಯುವಕನನ್ನ ಎಳೆದೊಯ್ದು ಹಲ್ಲೆ ನಡೆಸಿದ ಮೂವರ ವಿರುದ್ದ ಕ್ರಮ ಕೈಗೊಳ್ಳುವಂತೆ ಚಿಕ್ಕತಾಯಮ್ಮ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ದಾಂಧಲೆ ನಡೆಸಿದವರು ಮಂಜುನಾಥ್ ಹಾಗೂ ರೌಡಿ ಶೀಟರ್ ಗಳಾದ ಲೋಕೇಶ್,ಕುಳ್ಳ ದರ್ಶನ್ ಎಂದು ಗುರುತಿಸಲಾಗಿದೆ.ಕಟ್ಟಡ ಧ್ವಂಸಗೊಳಿಸಿ ದಾಂಧಲೆ ನಡೆಸಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *