ತಾ.ಪಂ.ಮಾಜಿ ಸದಸ್ಯೆ ನಿವೇಶನದಲ್ಲಿ ದಾಂಧಲೆ…ಯುವಕನ ಮೇಲೆ ಹಲ್ಲೆ…ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ…ಮೈಸೂರಿನಲ್ಲಿ ಆಟಾಟೋಪ…

ತಾ.ಪಂ.ಮಾಜಿ ಸದಸ್ಯೆ ನಿವೇಶನದಲ್ಲಿ ದಾಂಧಲೆ…ಯುವಕನ ಮೇಲೆ ಹಲ್ಲೆ…ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ…ಮೈಸೂರಿನಲ್ಲಿ ಆಟಾಟೋಪ…

ಮೈಸೂರು,ಆ12,Tv10 ಕನ್ನಡ

ಮೈಸೂರು ತಾಲೂಕು ಪಂಚಾಯ್ತಿ ಮಾಜಿ ಸದಸ್ಯೆಗೆ ಸೇರಿದ ನಿವೇಶನಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮೂವರು ವ್ಯಕ್ತಿಗಳು ದಾಂಧಲೆ ಮಾಡಿದ್ದಾರೆ.ಜೆಸಿಬಿ ತಂದು ಕಟ್ಟಡವನ್ನ

ಧ್ವಂಸಗೊಳಿಸಿದ್ದಾರೆ.ಪ್ರತಿರೋಧಿಸಿದ ಮಾಜಿ ಸದಸ್ಯೆ ಪುತ್ರನನ್ನ ಎಳೆದೊಯ್ದು

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕಟ್ಟಡವನ್ನ ಧ್ವಂಸಗೊಳಿಸಿದ್ದಾರೆ.ಈ ಸಂಭಂಧ ಮೂವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.

ಮೈಸೂರಿನ ಹೊರವಲಯದ ಹಿನಕಲ್ ಬಳಿ ಇರುವ ನಿವೇಶನದ ಸಂಖ್ಯೆ 2403 ಬಿ 3 ತಾಲೂಕು ಪಂಚಾಯ್ತಿ ಮಾಜಿ ಸದಸ್ಯೆ ಚಿಕ್ಕತಾಯಮ್ಮ ಎಂಬುವರಿಗೆ ಸೇರಿದ್ದು.ಜಿ.ಡಬ್ಲೂ.ಎಸ್.ನಿವೇಶನದಲ್ಲಿ ಚಿಕ್ಕತಾಯಮ್ಮ ಕಟ್ಟಡ ನಿರ್ಮಿಸಿದ್ದಾರೆ.ನಿವೇಶನಕ್ಕೆ ಬಂದ ಮೂವರು ವ್ಯಕ್ತಿಗಳು ಏಕಾ ಏಕಿ ಜೆಸಿಬಿ ಯಂತ್ರದಿಂದ ಕಟ್ಟಡ ಕೆಡವಲು ಮುಂದಾಗಿದ್ದಾರೆ.ಇದನ್ನ ಪ್ರತಿರೋಧಿಸಿದ ಚಿಕ್ಕತಾಯಮ್ಮ ಪುತ್ರ ರಾಮ್ ಪ್ರೀತಂ ನ ಬಲವಂತವಾಗಿ ಎಳೆದೊಯ್ದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕಬ್ಬಿಣದ ರಾಡಿನಿಂದ ಕಾಲಿಗೆ ಹೊಡೆದು ರಕ್ತಗಾಯ ಮಾಡಿದ್ದಾರೆ.ಈ ಎಲ್ಲಾ ಘಟನೆ ಸಿಸಿ ಕ್ಯಾಮರಾದಲ್ಲಿ ಹಾಗೂ ಮೊಬೈಲ್ ನಲ್ಲಿ ಸೆರೆಯಾಗಿದೆ.ನ್ಯಾಯಾಲಯದ ಯಾವುದೇ ಆದೇಶ ಪಡೆಯದೆ ಏಕಾಏಕಿ ನಿವೇಶನಕ್ಕೆ ಅಕ್ರಮವಾಗಿ ಪ್ರವೇಶಿಸಿ ಧಂಕಿ ಹಾಕಿ ಬಲವಂತವಾಗಿ ಯುವಕನನ್ನ ಎಳೆದೊಯ್ದು ಹಲ್ಲೆ ನಡೆಸಿದ ಮೂವರ ವಿರುದ್ದ ಕ್ರಮ ಕೈಗೊಳ್ಳುವಂತೆ ಚಿಕ್ಕತಾಯಮ್ಮ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ದಾಂಧಲೆ ನಡೆಸಿದವರು ಮಂಜುನಾಥ್ ಹಾಗೂ ರೌಡಿ ಶೀಟರ್ ಗಳಾದ ಲೋಕೇಶ್,ಕುಳ್ಳ ದರ್ಶನ್ ಎಂದು ಗುರುತಿಸಲಾಗಿದೆ.ಕಟ್ಟಡ ಧ್ವಂಸಗೊಳಿಸಿ ದಾಂಧಲೆ ನಡೆಸಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *