ತಾ.ಪಂ.ಮಾಜಿ ಸದಸ್ಯೆ ನಿವೇಶನದಲ್ಲಿ ದಾಂಧಲೆ…ಯುವಕನ ಮೇಲೆ ಹಲ್ಲೆ…ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ…ಮೈಸೂರಿನಲ್ಲಿ ಆಟಾಟೋಪ…

ತಾ.ಪಂ.ಮಾಜಿ ಸದಸ್ಯೆ ನಿವೇಶನದಲ್ಲಿ ದಾಂಧಲೆ…ಯುವಕನ ಮೇಲೆ ಹಲ್ಲೆ…ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ…ಮೈಸೂರಿನಲ್ಲಿ ಆಟಾಟೋಪ…

ಮೈಸೂರು,ಆ12,Tv10 ಕನ್ನಡ

ಮೈಸೂರು ತಾಲೂಕು ಪಂಚಾಯ್ತಿ ಮಾಜಿ ಸದಸ್ಯೆಗೆ ಸೇರಿದ ನಿವೇಶನಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮೂವರು ವ್ಯಕ್ತಿಗಳು ದಾಂಧಲೆ ಮಾಡಿದ್ದಾರೆ.ಜೆಸಿಬಿ ತಂದು ಕಟ್ಟಡವನ್ನ

ಧ್ವಂಸಗೊಳಿಸಿದ್ದಾರೆ.ಪ್ರತಿರೋಧಿಸಿದ ಮಾಜಿ ಸದಸ್ಯೆ ಪುತ್ರನನ್ನ ಎಳೆದೊಯ್ದು

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕಟ್ಟಡವನ್ನ ಧ್ವಂಸಗೊಳಿಸಿದ್ದಾರೆ.ಈ ಸಂಭಂಧ ಮೂವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.

ಮೈಸೂರಿನ ಹೊರವಲಯದ ಹಿನಕಲ್ ಬಳಿ ಇರುವ ನಿವೇಶನದ ಸಂಖ್ಯೆ 2403 ಬಿ 3 ತಾಲೂಕು ಪಂಚಾಯ್ತಿ ಮಾಜಿ ಸದಸ್ಯೆ ಚಿಕ್ಕತಾಯಮ್ಮ ಎಂಬುವರಿಗೆ ಸೇರಿದ್ದು.ಜಿ.ಡಬ್ಲೂ.ಎಸ್.ನಿವೇಶನದಲ್ಲಿ ಚಿಕ್ಕತಾಯಮ್ಮ ಕಟ್ಟಡ ನಿರ್ಮಿಸಿದ್ದಾರೆ.ನಿವೇಶನಕ್ಕೆ ಬಂದ ಮೂವರು ವ್ಯಕ್ತಿಗಳು ಏಕಾ ಏಕಿ ಜೆಸಿಬಿ ಯಂತ್ರದಿಂದ ಕಟ್ಟಡ ಕೆಡವಲು ಮುಂದಾಗಿದ್ದಾರೆ.ಇದನ್ನ ಪ್ರತಿರೋಧಿಸಿದ ಚಿಕ್ಕತಾಯಮ್ಮ ಪುತ್ರ ರಾಮ್ ಪ್ರೀತಂ ನ ಬಲವಂತವಾಗಿ ಎಳೆದೊಯ್ದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕಬ್ಬಿಣದ ರಾಡಿನಿಂದ ಕಾಲಿಗೆ ಹೊಡೆದು ರಕ್ತಗಾಯ ಮಾಡಿದ್ದಾರೆ.ಈ ಎಲ್ಲಾ ಘಟನೆ ಸಿಸಿ ಕ್ಯಾಮರಾದಲ್ಲಿ ಹಾಗೂ ಮೊಬೈಲ್ ನಲ್ಲಿ ಸೆರೆಯಾಗಿದೆ.ನ್ಯಾಯಾಲಯದ ಯಾವುದೇ ಆದೇಶ ಪಡೆಯದೆ ಏಕಾಏಕಿ ನಿವೇಶನಕ್ಕೆ ಅಕ್ರಮವಾಗಿ ಪ್ರವೇಶಿಸಿ ಧಂಕಿ ಹಾಕಿ ಬಲವಂತವಾಗಿ ಯುವಕನನ್ನ ಎಳೆದೊಯ್ದು ಹಲ್ಲೆ ನಡೆಸಿದ ಮೂವರ ವಿರುದ್ದ ಕ್ರಮ ಕೈಗೊಳ್ಳುವಂತೆ ಚಿಕ್ಕತಾಯಮ್ಮ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ದಾಂಧಲೆ ನಡೆಸಿದವರು ಮಂಜುನಾಥ್ ಹಾಗೂ ರೌಡಿ ಶೀಟರ್ ಗಳಾದ ಲೋಕೇಶ್,ಕುಳ್ಳ ದರ್ಶನ್ ಎಂದು ಗುರುತಿಸಲಾಗಿದೆ.ಕಟ್ಟಡ ಧ್ವಂಸಗೊಳಿಸಿ ದಾಂಧಲೆ ನಡೆಸಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *