ತಾ.ಪಂ.ಮಾಜಿ ಸದಸ್ಯೆ ನಿವೇಶನದಲ್ಲಿ ದಾಂಧಲೆ…ಯುವಕನ ಮೇಲೆ ಹಲ್ಲೆ…ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ…ಮೈಸೂರಿನಲ್ಲಿ ಆಟಾಟೋಪ…

ತಾ.ಪಂ.ಮಾಜಿ ಸದಸ್ಯೆ ನಿವೇಶನದಲ್ಲಿ ದಾಂಧಲೆ…ಯುವಕನ ಮೇಲೆ ಹಲ್ಲೆ…ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ…ಮೈಸೂರಿನಲ್ಲಿ ಆಟಾಟೋಪ…

ಮೈಸೂರು,ಆ12,Tv10 ಕನ್ನಡ

ಮೈಸೂರು ತಾಲೂಕು ಪಂಚಾಯ್ತಿ ಮಾಜಿ ಸದಸ್ಯೆಗೆ ಸೇರಿದ ನಿವೇಶನಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮೂವರು ವ್ಯಕ್ತಿಗಳು ದಾಂಧಲೆ ಮಾಡಿದ್ದಾರೆ.ಜೆಸಿಬಿ ತಂದು ಕಟ್ಟಡವನ್ನ

ಧ್ವಂಸಗೊಳಿಸಿದ್ದಾರೆ.ಪ್ರತಿರೋಧಿಸಿದ ಮಾಜಿ ಸದಸ್ಯೆ ಪುತ್ರನನ್ನ ಎಳೆದೊಯ್ದು

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕಟ್ಟಡವನ್ನ ಧ್ವಂಸಗೊಳಿಸಿದ್ದಾರೆ.ಈ ಸಂಭಂಧ ಮೂವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.

ಮೈಸೂರಿನ ಹೊರವಲಯದ ಹಿನಕಲ್ ಬಳಿ ಇರುವ ನಿವೇಶನದ ಸಂಖ್ಯೆ 2403 ಬಿ 3 ತಾಲೂಕು ಪಂಚಾಯ್ತಿ ಮಾಜಿ ಸದಸ್ಯೆ ಚಿಕ್ಕತಾಯಮ್ಮ ಎಂಬುವರಿಗೆ ಸೇರಿದ್ದು.ಜಿ.ಡಬ್ಲೂ.ಎಸ್.ನಿವೇಶನದಲ್ಲಿ ಚಿಕ್ಕತಾಯಮ್ಮ ಕಟ್ಟಡ ನಿರ್ಮಿಸಿದ್ದಾರೆ.ನಿವೇಶನಕ್ಕೆ ಬಂದ ಮೂವರು ವ್ಯಕ್ತಿಗಳು ಏಕಾ ಏಕಿ ಜೆಸಿಬಿ ಯಂತ್ರದಿಂದ ಕಟ್ಟಡ ಕೆಡವಲು ಮುಂದಾಗಿದ್ದಾರೆ.ಇದನ್ನ ಪ್ರತಿರೋಧಿಸಿದ ಚಿಕ್ಕತಾಯಮ್ಮ ಪುತ್ರ ರಾಮ್ ಪ್ರೀತಂ ನ ಬಲವಂತವಾಗಿ ಎಳೆದೊಯ್ದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕಬ್ಬಿಣದ ರಾಡಿನಿಂದ ಕಾಲಿಗೆ ಹೊಡೆದು ರಕ್ತಗಾಯ ಮಾಡಿದ್ದಾರೆ.ಈ ಎಲ್ಲಾ ಘಟನೆ ಸಿಸಿ ಕ್ಯಾಮರಾದಲ್ಲಿ ಹಾಗೂ ಮೊಬೈಲ್ ನಲ್ಲಿ ಸೆರೆಯಾಗಿದೆ.ನ್ಯಾಯಾಲಯದ ಯಾವುದೇ ಆದೇಶ ಪಡೆಯದೆ ಏಕಾಏಕಿ ನಿವೇಶನಕ್ಕೆ ಅಕ್ರಮವಾಗಿ ಪ್ರವೇಶಿಸಿ ಧಂಕಿ ಹಾಕಿ ಬಲವಂತವಾಗಿ ಯುವಕನನ್ನ ಎಳೆದೊಯ್ದು ಹಲ್ಲೆ ನಡೆಸಿದ ಮೂವರ ವಿರುದ್ದ ಕ್ರಮ ಕೈಗೊಳ್ಳುವಂತೆ ಚಿಕ್ಕತಾಯಮ್ಮ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ದಾಂಧಲೆ ನಡೆಸಿದವರು ಮಂಜುನಾಥ್ ಹಾಗೂ ರೌಡಿ ಶೀಟರ್ ಗಳಾದ ಲೋಕೇಶ್,ಕುಳ್ಳ ದರ್ಶನ್ ಎಂದು ಗುರುತಿಸಲಾಗಿದೆ.ಕಟ್ಟಡ ಧ್ವಂಸಗೊಳಿಸಿ ದಾಂಧಲೆ ನಡೆಸಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *