ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಒತ್ತುವರಿ ಜಾಗ ತೆರುವು…ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಒತ್ತುವರಿ ಜಾಗ ತೆರುವು…ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಮೈಸೂರು,ಆ12,Tv10 ಕನ್ನಡಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಾಗವನ್ನ ಕಬಳಿಸಿ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿದ್ದ ಭೂಗಳ್ಳರಿಗೆ ತಾಲೂಕು ಆಡಳಿತ ಶಾಕ್ಕೊಟ್ಟಿದೆ.ಸುಮಾರು ಒಂದು ಎಕರೆ ಜಾಗವನ್ನ ವಶಪಡಿಸಿಕೊಂಡು ಸಮಾಜ ಕಲ್ಯಾಣ ಇಲಾಖೆಗೆಹಸ್ತಾಂತರಿಸಿದೆ.ತಹಸೀಲ್ದಾರ್KM ಮಹೇಶ್ ಕುಮಾರ್ ನೇತೃತ್ವದಲ್ಲಿ ಒತ್ತುವರಿ ಕಾರ್ಯಾಚರಣೆ ನಡೆದಿದೆ.ಮೈಸೂರು ತಾಲೂಕು ಕಸಬಾ ಹೋಬಳಿ ಮಂಡಕಳ್ಳಿ ಗ್ರಾಮದ ಸರ್ವೆ ನಂಬರ್ 250/* ರ ಸರ್ಕಾರಿ ಬಂಜರು ಜಾಗ. ಸದರಿ ಜಾಗದಲ್ಲಿ 1-00 ಎಕರೆ ಒತ್ತುವರಿಯಾಗಿತ್ತು.ಸರ್ಕಾರಿಜಾಗವನ್ನ ಒತ್ತುವರಿ ಮಾಡಿಕೊಂಡಿದ್ದ ಭೂಗಳ್ಳರು ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿ ಬೇಲಿ ಹಾಕಿದ್ದರು.ದಾಖಲೆಗಳನ್ನ ಪರಿಶೀಲಿಸಿದ ತಹಸೀಲ್ದಾರ್KM ಮಹೇಶ್ ಕುಮಾರ್ ಒತ್ತುವರಿಯನ್ನ ಖಚಿತಪಡಿಸಿಕೊಂಡು ಇಂದು ಬೆಳಿಗ್ಗೆ ಭೂಗಳ್ಳರಿಗೆ ಶಾಕ್ ಕೊಟ್ಟಿದ್ದಾರೆ. ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗು, ಕಸಬಾ ಹೋಬಳಿ ರಾಜಸ್ವನಿರೀಕ್ಷಕರು ಬಿ.ಹೇಮಂತ್ ಕುಮಾರ್, ಮಂಡಕಳ್ಳಿ ಗ್ರಾಮದ ಆಡಳಿತಾಧಿಕಾರಿ ರಂಜಿತ, ದಕ್ಷಿಣ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಗೂ ಗ್ರಾಮಸ್ತರಾದ ವೀರಭದ್ರಪ್ಪನವರ ಸಮ್ಮುಖದಲ್ಲಿ ಖಾಸಗಿ ವ್ಯಕ್ತಿ ನಿರ್ಮಿಸಿದ್ದ ಕಾಂಪೌಂಡನ್ನು ತೇರವುಗೊಳಿಸಿ ವಶಕ್ಕೆ ಪಡೆದು ನಂತರ ಸಮಾಜಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *