ಸಸ್ಪೆಂಡ್ ಆದ ಪೊಲೀಸ್ ಪೇದೆಗೆ ಸಿಎಂ ಮೆಡಲ್…ಇದೆಂಥಾ ವ್ಯವಸ್ಥೆ…

ಸಸ್ಪೆಂಡ್ ಆದ ಪೊಲೀಸ್ ಪೇದೆಗೆ ಸಿಎಂ ಮೆಡಲ್…ಇದೆಂಥಾ ವ್ಯವಸ್ಥೆ…

ಮೈಸೂರು,ಆ15,Tv10 ಕನ್ನಡಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜೊತೆ ಸಂಪರ್ಕ,ಸಾರ್ವಜನಿಕರ ಆಸ್ತಿ ಕಳುವಿಗೆ ಪರೋಕ್ಷ ಸಹಾಯ,ದಾಖಲೆಗಳ ಸೋರಿಕೆ ಮಾಡುವ ಶಂಕೆ ಇವೆಲ್ಲಾ ಆರೋಪಗಳ ಹಿನ್ನಲೆ ಅಮಾನತಾದ ಮೈಸೂರು ಸಿಸಿಬಿ ಘಟಕದ ಮುಖ್ಯಪೇದೆಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ.ಒಂದು ತಿಂಗಳ ಹಿಂದೆ ಅಮಾನತಾದರೂ ಇದೀಗ ಬಿಡುಗಡೆಯಾದ ಮುಖ್ಯಮಂತ್ರಿಗಳ ಪದಕದ ಪಟ್ಟಿಯಲ್ಲಿ ಮುಖ್ಯಪೇದೆ ಸಲೀಂ ಪಾಷಾ ಹೆಸರು ಪ್ರಕಟವಾಗಿದ್ದು ಅಚ್ಚರಿಗೆ ಕಾರಣವಾಗಿದೆ.2023 ನೇ ಸಾಲಿಗೆ ಆಯ್ಕೆಯಾದವರ ಸಿಬ್ಬಂದಿ ಅಧಿಕಾರಿಗಳ ಪಟ್ಟಿಯಲ್ಲಿ ಮುಖ್ಯಪೇದೆ ಸಲಾಂ ಪಾಷಾ ಹೆಸರು ಪ್ರಕಟವಾಗಿದೆ.ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕನ್ನಕಳುವು ಹಾಗೂ ಗಾಂಜಾ ಪ್ರಕರಣಗಳ ಆರೋಪಿಗಳ ಸಂಭಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿರುವ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದೆ.ಸಮಾಜಘಾತುಕ ಶಕ್ತಿಗಳ ಜೊತೆ ಕೈಜೋಡಿಸಿ ಸಾರ್ವಜನಿಕರ ಸ್ವತ್ತು ಕಳುವಾಗಲು ಕಾರಣೀಭೂತರಾಗಿರುತ್ತಾರೆ.ಇದರಿಂದಾಗಿ ಮುಂದಿನ ದಿನಗಳಲ್ಲಿ ಇಲಾಖೆಯ ಆಂತರಿಕ ಮತ್ತು ಗುಪ್ತಮಾಹಿತಿಗಳು ಸೋರಿಕೆಯಾಗಿ ಸಾರ್ವಜನಿಕರ ಸ್ವತ್ತುಗಳು ಹೆಚ್ಚು ಹೆಚ್ಚಾಗಿ ಕಾಣೆಯಾಗುವ ಸಾಧ್ಯತೆಗಳು ಇರುವುದಾಗಿ ಕಾರಣ ನೀಡಿ ಸಲೀಂ ಪಾಷಾ ರವರನ್ನ ಸಸ್ಪೆಂಡ್ ಮಾಡಲಾಗಿದೆ.ಹೀಗಿದ್ದೂ ಸಲೀಂ ಪಾಷಾ ಹೆಸರು ಮುಖ್ಯಮಂತ್ರಿಗಳ ಪದಕ ಗಳಿಸುವಲ್ಲಿ ಯಶಸ್ವಿಯಾಗಿರುವುದು ಇಲಾಖಾ ವ್ಯವಸ್ಥೆಯನ್ನ ಅನುಮಾನದಿಂದ ನೋಡುವಂತಾಗಿದೆ.ಮುಖ್ಯಮಂತ್ರಿಗಳ ಪದಕ ಪಡೆಯಬೇಕಿದ್ದಲ್ಲಿ ಸಾಕಷ್ಟು ಹಂತಗಳಿವೆ.ಹಿರಿಯ ಅಧಿಕಾರಿಗಳ ಶಿಫಾರಸ್ಸು ಅಗತ್ಯವಿದೆ.ಹೀಗಿದ್ದರೂ ಪದಕ ಪಡೆಯುವಲ್ಲಿ ಅರ್ಹತೆ ಪಡೆದಿದ್ದಾರೆ ಅಂದ್ರೆ ಇಡೀ ವ್ಯವಸ್ಥೆಯನ್ನ ಅನುಮಾನದಿಂದ ನೋಡಲೇ ಬೇಕಾಗುತ್ತದೆ.ಅಧಿಕಾರಿಯೊಬ್ಬರ ಅಭಿಪ್ರಾಯದಂತೆ ಇದು 2023 ರ ಕರ್ತವ್ಯದ ಆಧಾರದ ಮೇಲೆ ಕೊಟ್ಟಿದ್ದಾರೆಂದು ಸಮರ್ಥಿಸಿಕೊಳ್ಳಲಾಗುತ್ತಿದೆ.ಹಾಗಿದ್ದಲ್ಲಿ ಕಳೆದ ವರ್ಷ ಒಳ್ಳೆಯವನಾದ ವ್ಯಕ್ತಿ ಈ ವರ್ಷ ಕಳ್ಳನಾದರೆ ಆತ ಒಳ್ಳೆಯವನೆಂದೇ ಭಾವಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರ ನೀಡಬೇಕಿದೆ.ಒಟ್ಟಾರೆ ಸಲೀಂ ಪಾಷಾ ರವರಿಗೆ ಮುಖ್ಯಮಂತ್ರಿಗಳ ಪದಕ ದಕ್ಕಿರುವುದು ಸೋಜಿಗವಲ್ಲದೆ ಇನ್ನೇನು…? ಇದಕ್ಕೆ ಹಿರಿಯ ಅಧಿಕಾರಿಗಳು ಸ್ಪಷ್ಟನೆ ನೀಡುವರೇ…?

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *