ಸಸ್ಪೆಂಡ್ ಆದ ಪೊಲೀಸ್ ಪೇದೆಗೆ ಸಿಎಂ ಮೆಡಲ್…ಇದೆಂಥಾ ವ್ಯವಸ್ಥೆ…

ಸಸ್ಪೆಂಡ್ ಆದ ಪೊಲೀಸ್ ಪೇದೆಗೆ ಸಿಎಂ ಮೆಡಲ್…ಇದೆಂಥಾ ವ್ಯವಸ್ಥೆ…

ಮೈಸೂರು,ಆ15,Tv10 ಕನ್ನಡಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜೊತೆ ಸಂಪರ್ಕ,ಸಾರ್ವಜನಿಕರ ಆಸ್ತಿ ಕಳುವಿಗೆ ಪರೋಕ್ಷ ಸಹಾಯ,ದಾಖಲೆಗಳ ಸೋರಿಕೆ ಮಾಡುವ ಶಂಕೆ ಇವೆಲ್ಲಾ ಆರೋಪಗಳ ಹಿನ್ನಲೆ ಅಮಾನತಾದ ಮೈಸೂರು ಸಿಸಿಬಿ ಘಟಕದ ಮುಖ್ಯಪೇದೆಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ.ಒಂದು ತಿಂಗಳ ಹಿಂದೆ ಅಮಾನತಾದರೂ ಇದೀಗ ಬಿಡುಗಡೆಯಾದ ಮುಖ್ಯಮಂತ್ರಿಗಳ ಪದಕದ ಪಟ್ಟಿಯಲ್ಲಿ ಮುಖ್ಯಪೇದೆ ಸಲೀಂ ಪಾಷಾ ಹೆಸರು ಪ್ರಕಟವಾಗಿದ್ದು ಅಚ್ಚರಿಗೆ ಕಾರಣವಾಗಿದೆ.2023 ನೇ ಸಾಲಿಗೆ ಆಯ್ಕೆಯಾದವರ ಸಿಬ್ಬಂದಿ ಅಧಿಕಾರಿಗಳ ಪಟ್ಟಿಯಲ್ಲಿ ಮುಖ್ಯಪೇದೆ ಸಲಾಂ ಪಾಷಾ ಹೆಸರು ಪ್ರಕಟವಾಗಿದೆ.ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕನ್ನಕಳುವು ಹಾಗೂ ಗಾಂಜಾ ಪ್ರಕರಣಗಳ ಆರೋಪಿಗಳ ಸಂಭಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿರುವ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದೆ.ಸಮಾಜಘಾತುಕ ಶಕ್ತಿಗಳ ಜೊತೆ ಕೈಜೋಡಿಸಿ ಸಾರ್ವಜನಿಕರ ಸ್ವತ್ತು ಕಳುವಾಗಲು ಕಾರಣೀಭೂತರಾಗಿರುತ್ತಾರೆ.ಇದರಿಂದಾಗಿ ಮುಂದಿನ ದಿನಗಳಲ್ಲಿ ಇಲಾಖೆಯ ಆಂತರಿಕ ಮತ್ತು ಗುಪ್ತಮಾಹಿತಿಗಳು ಸೋರಿಕೆಯಾಗಿ ಸಾರ್ವಜನಿಕರ ಸ್ವತ್ತುಗಳು ಹೆಚ್ಚು ಹೆಚ್ಚಾಗಿ ಕಾಣೆಯಾಗುವ ಸಾಧ್ಯತೆಗಳು ಇರುವುದಾಗಿ ಕಾರಣ ನೀಡಿ ಸಲೀಂ ಪಾಷಾ ರವರನ್ನ ಸಸ್ಪೆಂಡ್ ಮಾಡಲಾಗಿದೆ.ಹೀಗಿದ್ದೂ ಸಲೀಂ ಪಾಷಾ ಹೆಸರು ಮುಖ್ಯಮಂತ್ರಿಗಳ ಪದಕ ಗಳಿಸುವಲ್ಲಿ ಯಶಸ್ವಿಯಾಗಿರುವುದು ಇಲಾಖಾ ವ್ಯವಸ್ಥೆಯನ್ನ ಅನುಮಾನದಿಂದ ನೋಡುವಂತಾಗಿದೆ.ಮುಖ್ಯಮಂತ್ರಿಗಳ ಪದಕ ಪಡೆಯಬೇಕಿದ್ದಲ್ಲಿ ಸಾಕಷ್ಟು ಹಂತಗಳಿವೆ.ಹಿರಿಯ ಅಧಿಕಾರಿಗಳ ಶಿಫಾರಸ್ಸು ಅಗತ್ಯವಿದೆ.ಹೀಗಿದ್ದರೂ ಪದಕ ಪಡೆಯುವಲ್ಲಿ ಅರ್ಹತೆ ಪಡೆದಿದ್ದಾರೆ ಅಂದ್ರೆ ಇಡೀ ವ್ಯವಸ್ಥೆಯನ್ನ ಅನುಮಾನದಿಂದ ನೋಡಲೇ ಬೇಕಾಗುತ್ತದೆ.ಅಧಿಕಾರಿಯೊಬ್ಬರ ಅಭಿಪ್ರಾಯದಂತೆ ಇದು 2023 ರ ಕರ್ತವ್ಯದ ಆಧಾರದ ಮೇಲೆ ಕೊಟ್ಟಿದ್ದಾರೆಂದು ಸಮರ್ಥಿಸಿಕೊಳ್ಳಲಾಗುತ್ತಿದೆ.ಹಾಗಿದ್ದಲ್ಲಿ ಕಳೆದ ವರ್ಷ ಒಳ್ಳೆಯವನಾದ ವ್ಯಕ್ತಿ ಈ ವರ್ಷ ಕಳ್ಳನಾದರೆ ಆತ ಒಳ್ಳೆಯವನೆಂದೇ ಭಾವಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರ ನೀಡಬೇಕಿದೆ.ಒಟ್ಟಾರೆ ಸಲೀಂ ಪಾಷಾ ರವರಿಗೆ ಮುಖ್ಯಮಂತ್ರಿಗಳ ಪದಕ ದಕ್ಕಿರುವುದು ಸೋಜಿಗವಲ್ಲದೆ ಇನ್ನೇನು…? ಇದಕ್ಕೆ ಹಿರಿಯ ಅಧಿಕಾರಿಗಳು ಸ್ಪಷ್ಟನೆ ನೀಡುವರೇ…?

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *