ತಾಯಿಯನ್ನ ಕೊಲೆ ಮಾಡುವುದಾಗಿ ಹೆದರಿಸಿ ಅಪ್ರಾಪ್ತಳನ್ನ ಅತ್ಯಾಚಾರವೆಸಗಿ ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಯುವಕನ ಬಂಧನ….

ತಾಯಿಯನ್ನ ಕೊಲೆ ಮಾಡುವುದಾಗಿ ಹೆದರಿಸಿ ಅಪ್ರಾಪ್ತಳನ್ನ ಅತ್ಯಾಚಾರವೆಸಗಿ ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಯುವಕನ ಬಂಧನ….

ನಂಜನಗೂಡು,ಆ17,Tv10 ಕನ್ನಡ

ತಾಯಿಯನ್ನ ಕೊಲೆ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿ ಅಪ್ರಾಪ್ತ ಬಾಲಕಿಯನ್ನ ಅತ್ಯಾಚಾರವೆಸಗಿ ಆಕೆಯ ಬೆತ್ತಲೆ ಫೋಟೋಗಳನ್ನ ವೈರಲ್ ಮಾಡಿದ ಖದೀಮ ಯುವಕನನ್ನ ನಂಜನಗೂಡು ಟೌನ್ ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿ ಆದರ್ಶ್ ಬಂಧಿತ ಖದೀಮ.15 ವರ್ಷದ ಅಪ್ರಾಪ್ತ ಬಾಲಕಿಗೆ ಬೆದರಿಕೆ ಹಾಕಿ ಕೃತ್ಯವೆಸಗಿದ್ದಲ್ಲದೆ ಆಕೆಯ ಬೆತ್ತಲೆ ಫೋಟೋಗಳನ್ನ ಶಾಲೆಯ ಮುಖ್ಯಸ್ಥರಿಗೆ ಸೆಂಡ್ ಮಾಡಿದ್ದಾನೆ.

ಖಾಸಗಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿರುವ ಬಾಲಕಿಯ ಹಿಂದೆ ಬೈಕ್ ನಲ್ಲಿ ಫಾಲೋ ಮಾಡಿ ಆಕೆಯನ್ನ ಒಲಿಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ.ಆದರ್ಶ್ ಪ್ರಯತ್ನಕ್ಕೆ ಸ್ಪಂದಿಸದಿದ್ದಾಗ ಹೇಳದಂತೆ ಕೇಳದಿದ್ದರೆ ನಿನ್ನ ತಾಯಿಯನ್ನ ಸಾಯಿಸುತ್ತೇನೆ ಎಂದು ಹೆದರಿಸಿದ್ದಾನೆ.ಆದರ್ಶ್ ನ ಬೆದರಿಕೆಗೆ ಹೆದರಿದ ಬಾಲಕಿ ಕರೆದೆಡೆಗೆ ಹೋಗಿದ್ದಾಳೆ.ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರವೆಸಗಿದ್ದಾನೆ.ಅಲ್ಲದೆ ಆಕೆಯ ಬೆತ್ತಲೆ ಫೋಟೋಗಳನ್ನ ಶಾಲೆಯ ಮುಖ್ಯಸ್ಥರಿಗೆ ರವಾನಿಸಿದ್ದಾನೆ.ಶಾಲೆಯ ಮುಖ್ಯಸ್ಥರು ಬಾಲಕಿಯ ತಾಯಿಯನ್ನ ಕರೆದು ಮಾಹಿತಿ ನೀಡಿದ್ದಾರೆ.ಮಗಳನ್ನು ಲೈಂಗಿಕವಾಗಿ ಬಳಸಿಕೊಂಡು ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಆದರ್ಶ್ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಾಯಿ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅತ್ಯಾಚಾರವೆಸಗಿದ ಆದರ್ಶನ್ ನನ್ನು ಬಂಧಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *