ತಾಯಿಯನ್ನ ಕೊಲೆ ಮಾಡುವುದಾಗಿ ಹೆದರಿಸಿ ಅಪ್ರಾಪ್ತಳನ್ನ ಅತ್ಯಾಚಾರವೆಸಗಿ ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಯುವಕನ ಬಂಧನ….

ತಾಯಿಯನ್ನ ಕೊಲೆ ಮಾಡುವುದಾಗಿ ಹೆದರಿಸಿ ಅಪ್ರಾಪ್ತಳನ್ನ ಅತ್ಯಾಚಾರವೆಸಗಿ ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಯುವಕನ ಬಂಧನ….

ನಂಜನಗೂಡು,ಆ17,Tv10 ಕನ್ನಡ

ತಾಯಿಯನ್ನ ಕೊಲೆ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿ ಅಪ್ರಾಪ್ತ ಬಾಲಕಿಯನ್ನ ಅತ್ಯಾಚಾರವೆಸಗಿ ಆಕೆಯ ಬೆತ್ತಲೆ ಫೋಟೋಗಳನ್ನ ವೈರಲ್ ಮಾಡಿದ ಖದೀಮ ಯುವಕನನ್ನ ನಂಜನಗೂಡು ಟೌನ್ ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿ ಆದರ್ಶ್ ಬಂಧಿತ ಖದೀಮ.15 ವರ್ಷದ ಅಪ್ರಾಪ್ತ ಬಾಲಕಿಗೆ ಬೆದರಿಕೆ ಹಾಕಿ ಕೃತ್ಯವೆಸಗಿದ್ದಲ್ಲದೆ ಆಕೆಯ ಬೆತ್ತಲೆ ಫೋಟೋಗಳನ್ನ ಶಾಲೆಯ ಮುಖ್ಯಸ್ಥರಿಗೆ ಸೆಂಡ್ ಮಾಡಿದ್ದಾನೆ.

ಖಾಸಗಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿರುವ ಬಾಲಕಿಯ ಹಿಂದೆ ಬೈಕ್ ನಲ್ಲಿ ಫಾಲೋ ಮಾಡಿ ಆಕೆಯನ್ನ ಒಲಿಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ.ಆದರ್ಶ್ ಪ್ರಯತ್ನಕ್ಕೆ ಸ್ಪಂದಿಸದಿದ್ದಾಗ ಹೇಳದಂತೆ ಕೇಳದಿದ್ದರೆ ನಿನ್ನ ತಾಯಿಯನ್ನ ಸಾಯಿಸುತ್ತೇನೆ ಎಂದು ಹೆದರಿಸಿದ್ದಾನೆ.ಆದರ್ಶ್ ನ ಬೆದರಿಕೆಗೆ ಹೆದರಿದ ಬಾಲಕಿ ಕರೆದೆಡೆಗೆ ಹೋಗಿದ್ದಾಳೆ.ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರವೆಸಗಿದ್ದಾನೆ.ಅಲ್ಲದೆ ಆಕೆಯ ಬೆತ್ತಲೆ ಫೋಟೋಗಳನ್ನ ಶಾಲೆಯ ಮುಖ್ಯಸ್ಥರಿಗೆ ರವಾನಿಸಿದ್ದಾನೆ.ಶಾಲೆಯ ಮುಖ್ಯಸ್ಥರು ಬಾಲಕಿಯ ತಾಯಿಯನ್ನ ಕರೆದು ಮಾಹಿತಿ ನೀಡಿದ್ದಾರೆ.ಮಗಳನ್ನು ಲೈಂಗಿಕವಾಗಿ ಬಳಸಿಕೊಂಡು ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಆದರ್ಶ್ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಾಯಿ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅತ್ಯಾಚಾರವೆಸಗಿದ ಆದರ್ಶನ್ ನನ್ನು ಬಂಧಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *