ತಾಯಿಯನ್ನ ಕೊಲೆ ಮಾಡುವುದಾಗಿ ಹೆದರಿಸಿ ಅಪ್ರಾಪ್ತಳನ್ನ ಅತ್ಯಾಚಾರವೆಸಗಿ ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಯುವಕನ ಬಂಧನ….

ತಾಯಿಯನ್ನ ಕೊಲೆ ಮಾಡುವುದಾಗಿ ಹೆದರಿಸಿ ಅಪ್ರಾಪ್ತಳನ್ನ ಅತ್ಯಾಚಾರವೆಸಗಿ ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಯುವಕನ ಬಂಧನ….

ನಂಜನಗೂಡು,ಆ17,Tv10 ಕನ್ನಡ

ತಾಯಿಯನ್ನ ಕೊಲೆ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿ ಅಪ್ರಾಪ್ತ ಬಾಲಕಿಯನ್ನ ಅತ್ಯಾಚಾರವೆಸಗಿ ಆಕೆಯ ಬೆತ್ತಲೆ ಫೋಟೋಗಳನ್ನ ವೈರಲ್ ಮಾಡಿದ ಖದೀಮ ಯುವಕನನ್ನ ನಂಜನಗೂಡು ಟೌನ್ ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿ ಆದರ್ಶ್ ಬಂಧಿತ ಖದೀಮ.15 ವರ್ಷದ ಅಪ್ರಾಪ್ತ ಬಾಲಕಿಗೆ ಬೆದರಿಕೆ ಹಾಕಿ ಕೃತ್ಯವೆಸಗಿದ್ದಲ್ಲದೆ ಆಕೆಯ ಬೆತ್ತಲೆ ಫೋಟೋಗಳನ್ನ ಶಾಲೆಯ ಮುಖ್ಯಸ್ಥರಿಗೆ ಸೆಂಡ್ ಮಾಡಿದ್ದಾನೆ.

ಖಾಸಗಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿರುವ ಬಾಲಕಿಯ ಹಿಂದೆ ಬೈಕ್ ನಲ್ಲಿ ಫಾಲೋ ಮಾಡಿ ಆಕೆಯನ್ನ ಒಲಿಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ.ಆದರ್ಶ್ ಪ್ರಯತ್ನಕ್ಕೆ ಸ್ಪಂದಿಸದಿದ್ದಾಗ ಹೇಳದಂತೆ ಕೇಳದಿದ್ದರೆ ನಿನ್ನ ತಾಯಿಯನ್ನ ಸಾಯಿಸುತ್ತೇನೆ ಎಂದು ಹೆದರಿಸಿದ್ದಾನೆ.ಆದರ್ಶ್ ನ ಬೆದರಿಕೆಗೆ ಹೆದರಿದ ಬಾಲಕಿ ಕರೆದೆಡೆಗೆ ಹೋಗಿದ್ದಾಳೆ.ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರವೆಸಗಿದ್ದಾನೆ.ಅಲ್ಲದೆ ಆಕೆಯ ಬೆತ್ತಲೆ ಫೋಟೋಗಳನ್ನ ಶಾಲೆಯ ಮುಖ್ಯಸ್ಥರಿಗೆ ರವಾನಿಸಿದ್ದಾನೆ.ಶಾಲೆಯ ಮುಖ್ಯಸ್ಥರು ಬಾಲಕಿಯ ತಾಯಿಯನ್ನ ಕರೆದು ಮಾಹಿತಿ ನೀಡಿದ್ದಾರೆ.ಮಗಳನ್ನು ಲೈಂಗಿಕವಾಗಿ ಬಳಸಿಕೊಂಡು ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಆದರ್ಶ್ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಾಯಿ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅತ್ಯಾಚಾರವೆಸಗಿದ ಆದರ್ಶನ್ ನನ್ನು ಬಂಧಿಸಿದ್ದಾರೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *