ತಾಯಿಯನ್ನ ಕೊಲೆ ಮಾಡುವುದಾಗಿ ಹೆದರಿಸಿ ಅಪ್ರಾಪ್ತಳನ್ನ ಅತ್ಯಾಚಾರವೆಸಗಿ ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಯುವಕನ ಬಂಧನ….

ತಾಯಿಯನ್ನ ಕೊಲೆ ಮಾಡುವುದಾಗಿ ಹೆದರಿಸಿ ಅಪ್ರಾಪ್ತಳನ್ನ ಅತ್ಯಾಚಾರವೆಸಗಿ ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಯುವಕನ ಬಂಧನ….

ನಂಜನಗೂಡು,ಆ17,Tv10 ಕನ್ನಡ

ತಾಯಿಯನ್ನ ಕೊಲೆ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿ ಅಪ್ರಾಪ್ತ ಬಾಲಕಿಯನ್ನ ಅತ್ಯಾಚಾರವೆಸಗಿ ಆಕೆಯ ಬೆತ್ತಲೆ ಫೋಟೋಗಳನ್ನ ವೈರಲ್ ಮಾಡಿದ ಖದೀಮ ಯುವಕನನ್ನ ನಂಜನಗೂಡು ಟೌನ್ ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿ ಆದರ್ಶ್ ಬಂಧಿತ ಖದೀಮ.15 ವರ್ಷದ ಅಪ್ರಾಪ್ತ ಬಾಲಕಿಗೆ ಬೆದರಿಕೆ ಹಾಕಿ ಕೃತ್ಯವೆಸಗಿದ್ದಲ್ಲದೆ ಆಕೆಯ ಬೆತ್ತಲೆ ಫೋಟೋಗಳನ್ನ ಶಾಲೆಯ ಮುಖ್ಯಸ್ಥರಿಗೆ ಸೆಂಡ್ ಮಾಡಿದ್ದಾನೆ.

ಖಾಸಗಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿರುವ ಬಾಲಕಿಯ ಹಿಂದೆ ಬೈಕ್ ನಲ್ಲಿ ಫಾಲೋ ಮಾಡಿ ಆಕೆಯನ್ನ ಒಲಿಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ.ಆದರ್ಶ್ ಪ್ರಯತ್ನಕ್ಕೆ ಸ್ಪಂದಿಸದಿದ್ದಾಗ ಹೇಳದಂತೆ ಕೇಳದಿದ್ದರೆ ನಿನ್ನ ತಾಯಿಯನ್ನ ಸಾಯಿಸುತ್ತೇನೆ ಎಂದು ಹೆದರಿಸಿದ್ದಾನೆ.ಆದರ್ಶ್ ನ ಬೆದರಿಕೆಗೆ ಹೆದರಿದ ಬಾಲಕಿ ಕರೆದೆಡೆಗೆ ಹೋಗಿದ್ದಾಳೆ.ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರವೆಸಗಿದ್ದಾನೆ.ಅಲ್ಲದೆ ಆಕೆಯ ಬೆತ್ತಲೆ ಫೋಟೋಗಳನ್ನ ಶಾಲೆಯ ಮುಖ್ಯಸ್ಥರಿಗೆ ರವಾನಿಸಿದ್ದಾನೆ.ಶಾಲೆಯ ಮುಖ್ಯಸ್ಥರು ಬಾಲಕಿಯ ತಾಯಿಯನ್ನ ಕರೆದು ಮಾಹಿತಿ ನೀಡಿದ್ದಾರೆ.ಮಗಳನ್ನು ಲೈಂಗಿಕವಾಗಿ ಬಳಸಿಕೊಂಡು ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಆದರ್ಶ್ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಾಯಿ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅತ್ಯಾಚಾರವೆಸಗಿದ ಆದರ್ಶನ್ ನನ್ನು ಬಂಧಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *