ಗಣಪತಿ ಶ್ರೀ ಗಳ ಆಶ್ರಮದಲ್ಲಿ ಶ್ರೀ ಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮ…ದತ್ತ ವಿಜಯಾನಂದ ಶ್ರೀಗಳಿಂದ ಆಶೀರ್ವಚನ…

ಗಣಪತಿ ಶ್ರೀ ಗಳ ಆಶ್ರಮದಲ್ಲಿ ಶ್ರೀ ಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮ…ದತ್ತ ವಿಜಯಾನಂದ ಶ್ರೀಗಳಿಂದ ಆಶೀರ್ವಚನ…

ಮೈಸೂರು,ಆ18,Tv10 ಕನ್ನಡದತ್ತ ಪೀಠದ ಆವರಣದಲ್ಲಿರುವ ಶ್ರೀ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಆಗಸ್ಟ್ 8 ರಿಂದಆರಂಭವಾಗಿದ್ದ ಸಂಪೂರ್ಣ ಶ್ರೀಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಮಹಾ ಪೂರ್ಣಾಹುತಿ ಕಾರ್ಯಕ್ರಮ ಇಂದು ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿ ಮಾತನಾಡಿದರು.ಪ್ರತಿಯೊಬ್ಬರೂ ಒಮ್ಮೆಯಾದರೂ ಸಂಪೂರ್ಣ ರಾಮಾಯಣ ಪಾರಾಯಣ ಮಾಡಬೇಕು.ಭಾರತ ಅಷ್ಟೇ ಅಲ್ಲ ಇಡೀ ಪ್ರಪಂಚದಲ್ಲಿ ಶ್ರೀರಾಮ ಎಂಬ ಹೆಸರು ಕೇಳಿದರೆ ಸಾಕು ಮೈ ನವಿರೇಳುತ್ತದೆ.
ಲೋಕಕಲ್ಯಾಣಾರ್ಥವಾಗಿ ಮತ್ತು ವಿಶ್ವಶಾಂತಿಗಾಗಿ ಪ್ರಾರ್ಥಿಸಿ 11 ದಿನಗಳಿಂದ ಸಂಪೂರ್ಣ ರಾಮಾಯಣ ಪಾರಾಯಣ ಮಾಡಲಾಗಿದೆ.ನಮ್ಮ ಕರ್ನಾಟಕ,ನಮ್ಮ ದೇಶ ಹಾಗೂ ವಿಶ್ವದೆಲ್ಲೆಡೆ ಸದಾ ಶಾಂತಿ ಇರಬೇಕು ಎಂದು ಪ್ರಾರ್ಥಿಸಿದ್ದೇವೆ.ಎಲ್ಲೆಡೆ‌ ಕಷ್ಟದ ವಾತಾವರಣ,ಯುದ್ಧದ ವಾತಾವರಣ ಕಾಡುತ್ತಿದೆ ಇದೆಲ್ಲ ಹೋಗಬೇಕೆಂದು ಸಂಕಲ್ಪ ಮಾಡಲಾಗಿದೆ. ಶ್ರೀ ರಾಮ ಸೀತಾ ಮಾತಾ, ಆಂಜನೇಯ‌ ಸ್ವಾಮಿ ಎಲ್ಲರಿಗೂ ಅನುಗ್ರಹ ನೀಡಲಿ ಎಂದು ಶ್ರೀಗಳು ಹಾರೈಸಿದರು.ಕಳೆದ ಎರಡು ವರ್ಷಗಳ ಹಿಂದೆ ಇಡೀ ನಾಡಿನಲ್ಲಿ ಕೊರೊನಾ ಬಾಧಿಸುತ್ತಿದ್ದಾಗ ರಾಮಾಯಣ ಪಾರಾಯಣ ಮಾಡಿಸಬೇಕು ಎಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಅಂದುಕೊಂಡಿದ್ದರು.
ಪ್ರಾರಂಭದಲ್ಲಿ ಕೆಲ ವಿಘ್ನಗಳು ಬರಲಿದೆ ಎಂದು ಕೂಡ ಶ್ರೀಗಳು ತಿಳಿಸಿದ್ದರು.ನಾನು ಒಳಗೆ ರಾಮಾಯಣ ಪಾರಾಯಣ ಮಾಡಿಕೊಳ್ಳುತ್ತೇನೆ ನೀವು ಮುಂದೆ ಮಾಡಿ ಎಲ್ಲಾ ಸರಿಯಾಗಲಿದೆ ಎಂದು ಹೇಳಿದ್ದರು. ಅದರಂತೆ ಈಗ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ರಾಮಾಯಣ ಪಾರಾಯಣ ಆಗಿದೆ ಇದಕ್ಕೆ ಈ ಎಲ್ಲ‌ ಹೃತ್ವಿಕರು ಮುಖ್ಯ ಕಾರಣ ಎಂದು ತಿಳಿಸಿದರು.ಇಲ್ಲಿಗೆ ರಾಮಾಯಣ ಪಾರಾಯಣ ಹಾಗೂ ಶ್ರೀ ಮದ್ರಾಮಾಯಣ ಯಾಗ ಎರಡೂ ಯಶಸ್ವಿಯಾಗಿದೆ, 24,000 ಆಹುತಿಗಳನ್ನು ಸಮರ್ಪಣೆ ಮಾಡಲಾಗಿದೆ ಶ್ರೀರಾಮ ಜಯರಾಮ ಜಯ ಜಯ ರಾಮ ಮಂತ್ರವನ್ನು 52 ಲಕ್ಷ ಪೂರ್ತಿ ಮಾಡಲಾಗಿದೆ ಎಂದು ತಿಳಿಸಿದರು.ಇದಕ್ಕೂ ಮುನ್ನ ಆಶ್ರಮದ ವಿಶ್ವ ಪ್ರಾರ್ಥನಾ ಮಂದಿರದಿಂದ ಸೀತಾರಾಮ ಆಂಜನೇಯ ಸಮೇತ ಉತ್ಸವ ಮೂರ್ತಿಯನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿ ವರೆಗೆ ತರಲಾಯಿತು ಶ್ರೀಗಳು ಈ ಉತ್ಸವ ಮೂರ್ತಿಗಳಿಗೆ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *