ಗಣಪತಿ ಶ್ರೀ ಗಳ ಆಶ್ರಮದಲ್ಲಿ ಶ್ರೀ ಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮ…ದತ್ತ ವಿಜಯಾನಂದ ಶ್ರೀಗಳಿಂದ ಆಶೀರ್ವಚನ…

ಗಣಪತಿ ಶ್ರೀ ಗಳ ಆಶ್ರಮದಲ್ಲಿ ಶ್ರೀ ಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮ…ದತ್ತ ವಿಜಯಾನಂದ ಶ್ರೀಗಳಿಂದ ಆಶೀರ್ವಚನ…

ಮೈಸೂರು,ಆ18,Tv10 ಕನ್ನಡದತ್ತ ಪೀಠದ ಆವರಣದಲ್ಲಿರುವ ಶ್ರೀ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಆಗಸ್ಟ್ 8 ರಿಂದಆರಂಭವಾಗಿದ್ದ ಸಂಪೂರ್ಣ ಶ್ರೀಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಮಹಾ ಪೂರ್ಣಾಹುತಿ ಕಾರ್ಯಕ್ರಮ ಇಂದು ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿ ಮಾತನಾಡಿದರು.ಪ್ರತಿಯೊಬ್ಬರೂ ಒಮ್ಮೆಯಾದರೂ ಸಂಪೂರ್ಣ ರಾಮಾಯಣ ಪಾರಾಯಣ ಮಾಡಬೇಕು.ಭಾರತ ಅಷ್ಟೇ ಅಲ್ಲ ಇಡೀ ಪ್ರಪಂಚದಲ್ಲಿ ಶ್ರೀರಾಮ ಎಂಬ ಹೆಸರು ಕೇಳಿದರೆ ಸಾಕು ಮೈ ನವಿರೇಳುತ್ತದೆ.
ಲೋಕಕಲ್ಯಾಣಾರ್ಥವಾಗಿ ಮತ್ತು ವಿಶ್ವಶಾಂತಿಗಾಗಿ ಪ್ರಾರ್ಥಿಸಿ 11 ದಿನಗಳಿಂದ ಸಂಪೂರ್ಣ ರಾಮಾಯಣ ಪಾರಾಯಣ ಮಾಡಲಾಗಿದೆ.ನಮ್ಮ ಕರ್ನಾಟಕ,ನಮ್ಮ ದೇಶ ಹಾಗೂ ವಿಶ್ವದೆಲ್ಲೆಡೆ ಸದಾ ಶಾಂತಿ ಇರಬೇಕು ಎಂದು ಪ್ರಾರ್ಥಿಸಿದ್ದೇವೆ.ಎಲ್ಲೆಡೆ‌ ಕಷ್ಟದ ವಾತಾವರಣ,ಯುದ್ಧದ ವಾತಾವರಣ ಕಾಡುತ್ತಿದೆ ಇದೆಲ್ಲ ಹೋಗಬೇಕೆಂದು ಸಂಕಲ್ಪ ಮಾಡಲಾಗಿದೆ. ಶ್ರೀ ರಾಮ ಸೀತಾ ಮಾತಾ, ಆಂಜನೇಯ‌ ಸ್ವಾಮಿ ಎಲ್ಲರಿಗೂ ಅನುಗ್ರಹ ನೀಡಲಿ ಎಂದು ಶ್ರೀಗಳು ಹಾರೈಸಿದರು.ಕಳೆದ ಎರಡು ವರ್ಷಗಳ ಹಿಂದೆ ಇಡೀ ನಾಡಿನಲ್ಲಿ ಕೊರೊನಾ ಬಾಧಿಸುತ್ತಿದ್ದಾಗ ರಾಮಾಯಣ ಪಾರಾಯಣ ಮಾಡಿಸಬೇಕು ಎಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಅಂದುಕೊಂಡಿದ್ದರು.
ಪ್ರಾರಂಭದಲ್ಲಿ ಕೆಲ ವಿಘ್ನಗಳು ಬರಲಿದೆ ಎಂದು ಕೂಡ ಶ್ರೀಗಳು ತಿಳಿಸಿದ್ದರು.ನಾನು ಒಳಗೆ ರಾಮಾಯಣ ಪಾರಾಯಣ ಮಾಡಿಕೊಳ್ಳುತ್ತೇನೆ ನೀವು ಮುಂದೆ ಮಾಡಿ ಎಲ್ಲಾ ಸರಿಯಾಗಲಿದೆ ಎಂದು ಹೇಳಿದ್ದರು. ಅದರಂತೆ ಈಗ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ರಾಮಾಯಣ ಪಾರಾಯಣ ಆಗಿದೆ ಇದಕ್ಕೆ ಈ ಎಲ್ಲ‌ ಹೃತ್ವಿಕರು ಮುಖ್ಯ ಕಾರಣ ಎಂದು ತಿಳಿಸಿದರು.ಇಲ್ಲಿಗೆ ರಾಮಾಯಣ ಪಾರಾಯಣ ಹಾಗೂ ಶ್ರೀ ಮದ್ರಾಮಾಯಣ ಯಾಗ ಎರಡೂ ಯಶಸ್ವಿಯಾಗಿದೆ, 24,000 ಆಹುತಿಗಳನ್ನು ಸಮರ್ಪಣೆ ಮಾಡಲಾಗಿದೆ ಶ್ರೀರಾಮ ಜಯರಾಮ ಜಯ ಜಯ ರಾಮ ಮಂತ್ರವನ್ನು 52 ಲಕ್ಷ ಪೂರ್ತಿ ಮಾಡಲಾಗಿದೆ ಎಂದು ತಿಳಿಸಿದರು.ಇದಕ್ಕೂ ಮುನ್ನ ಆಶ್ರಮದ ವಿಶ್ವ ಪ್ರಾರ್ಥನಾ ಮಂದಿರದಿಂದ ಸೀತಾರಾಮ ಆಂಜನೇಯ ಸಮೇತ ಉತ್ಸವ ಮೂರ್ತಿಯನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿ ವರೆಗೆ ತರಲಾಯಿತು ಶ್ರೀಗಳು ಈ ಉತ್ಸವ ಮೂರ್ತಿಗಳಿಗೆ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *