ಗಣಪತಿ ಶ್ರೀ ಗಳ ಆಶ್ರಮದಲ್ಲಿ ಶ್ರೀ ಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮ…ದತ್ತ ವಿಜಯಾನಂದ ಶ್ರೀಗಳಿಂದ ಆಶೀರ್ವಚನ…

ಗಣಪತಿ ಶ್ರೀ ಗಳ ಆಶ್ರಮದಲ್ಲಿ ಶ್ರೀ ಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮ…ದತ್ತ ವಿಜಯಾನಂದ ಶ್ರೀಗಳಿಂದ ಆಶೀರ್ವಚನ…

ಮೈಸೂರು,ಆ18,Tv10 ಕನ್ನಡದತ್ತ ಪೀಠದ ಆವರಣದಲ್ಲಿರುವ ಶ್ರೀ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಆಗಸ್ಟ್ 8 ರಿಂದಆರಂಭವಾಗಿದ್ದ ಸಂಪೂರ್ಣ ಶ್ರೀಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಮಹಾ ಪೂರ್ಣಾಹುತಿ ಕಾರ್ಯಕ್ರಮ ಇಂದು ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿ ಮಾತನಾಡಿದರು.ಪ್ರತಿಯೊಬ್ಬರೂ ಒಮ್ಮೆಯಾದರೂ ಸಂಪೂರ್ಣ ರಾಮಾಯಣ ಪಾರಾಯಣ ಮಾಡಬೇಕು.ಭಾರತ ಅಷ್ಟೇ ಅಲ್ಲ ಇಡೀ ಪ್ರಪಂಚದಲ್ಲಿ ಶ್ರೀರಾಮ ಎಂಬ ಹೆಸರು ಕೇಳಿದರೆ ಸಾಕು ಮೈ ನವಿರೇಳುತ್ತದೆ.
ಲೋಕಕಲ್ಯಾಣಾರ್ಥವಾಗಿ ಮತ್ತು ವಿಶ್ವಶಾಂತಿಗಾಗಿ ಪ್ರಾರ್ಥಿಸಿ 11 ದಿನಗಳಿಂದ ಸಂಪೂರ್ಣ ರಾಮಾಯಣ ಪಾರಾಯಣ ಮಾಡಲಾಗಿದೆ.ನಮ್ಮ ಕರ್ನಾಟಕ,ನಮ್ಮ ದೇಶ ಹಾಗೂ ವಿಶ್ವದೆಲ್ಲೆಡೆ ಸದಾ ಶಾಂತಿ ಇರಬೇಕು ಎಂದು ಪ್ರಾರ್ಥಿಸಿದ್ದೇವೆ.ಎಲ್ಲೆಡೆ‌ ಕಷ್ಟದ ವಾತಾವರಣ,ಯುದ್ಧದ ವಾತಾವರಣ ಕಾಡುತ್ತಿದೆ ಇದೆಲ್ಲ ಹೋಗಬೇಕೆಂದು ಸಂಕಲ್ಪ ಮಾಡಲಾಗಿದೆ. ಶ್ರೀ ರಾಮ ಸೀತಾ ಮಾತಾ, ಆಂಜನೇಯ‌ ಸ್ವಾಮಿ ಎಲ್ಲರಿಗೂ ಅನುಗ್ರಹ ನೀಡಲಿ ಎಂದು ಶ್ರೀಗಳು ಹಾರೈಸಿದರು.ಕಳೆದ ಎರಡು ವರ್ಷಗಳ ಹಿಂದೆ ಇಡೀ ನಾಡಿನಲ್ಲಿ ಕೊರೊನಾ ಬಾಧಿಸುತ್ತಿದ್ದಾಗ ರಾಮಾಯಣ ಪಾರಾಯಣ ಮಾಡಿಸಬೇಕು ಎಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಅಂದುಕೊಂಡಿದ್ದರು.
ಪ್ರಾರಂಭದಲ್ಲಿ ಕೆಲ ವಿಘ್ನಗಳು ಬರಲಿದೆ ಎಂದು ಕೂಡ ಶ್ರೀಗಳು ತಿಳಿಸಿದ್ದರು.ನಾನು ಒಳಗೆ ರಾಮಾಯಣ ಪಾರಾಯಣ ಮಾಡಿಕೊಳ್ಳುತ್ತೇನೆ ನೀವು ಮುಂದೆ ಮಾಡಿ ಎಲ್ಲಾ ಸರಿಯಾಗಲಿದೆ ಎಂದು ಹೇಳಿದ್ದರು. ಅದರಂತೆ ಈಗ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ರಾಮಾಯಣ ಪಾರಾಯಣ ಆಗಿದೆ ಇದಕ್ಕೆ ಈ ಎಲ್ಲ‌ ಹೃತ್ವಿಕರು ಮುಖ್ಯ ಕಾರಣ ಎಂದು ತಿಳಿಸಿದರು.ಇಲ್ಲಿಗೆ ರಾಮಾಯಣ ಪಾರಾಯಣ ಹಾಗೂ ಶ್ರೀ ಮದ್ರಾಮಾಯಣ ಯಾಗ ಎರಡೂ ಯಶಸ್ವಿಯಾಗಿದೆ, 24,000 ಆಹುತಿಗಳನ್ನು ಸಮರ್ಪಣೆ ಮಾಡಲಾಗಿದೆ ಶ್ರೀರಾಮ ಜಯರಾಮ ಜಯ ಜಯ ರಾಮ ಮಂತ್ರವನ್ನು 52 ಲಕ್ಷ ಪೂರ್ತಿ ಮಾಡಲಾಗಿದೆ ಎಂದು ತಿಳಿಸಿದರು.ಇದಕ್ಕೂ ಮುನ್ನ ಆಶ್ರಮದ ವಿಶ್ವ ಪ್ರಾರ್ಥನಾ ಮಂದಿರದಿಂದ ಸೀತಾರಾಮ ಆಂಜನೇಯ ಸಮೇತ ಉತ್ಸವ ಮೂರ್ತಿಯನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿ ವರೆಗೆ ತರಲಾಯಿತು ಶ್ರೀಗಳು ಈ ಉತ್ಸವ ಮೂರ್ತಿಗಳಿಗೆ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *