ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಯಜುರ್ವೇದದ ಯಜುರ್ ಉಪಾಕರ್ಮ…ಭಾಷ್ಯಂ‌ಸ್ವಾಮಿಗಳಿಂದ ಶುಭಹಾರೈಕೆ…

ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಯಜುರ್ವೇದದ ಯಜುರ್ ಉಪಾಕರ್ಮ…ಭಾಷ್ಯಂ‌ಸ್ವಾಮಿಗಳಿಂದ ಶುಭಹಾರೈಕೆ…

ಮೈಸೂರು,ಆ19,Tv10 ಕನ್ನಡಮೈಸೂರಿನ ವಿಜಶ್ರೀಯನಗರದಲ್ಲಿರುವ ಶ್ರೀ ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ
ಯಜುರ್ವೇದದ ಸಾಮೂಹಿಕ ಯಜುರ್ ಉಪಾಕರ್ಮ ನೆರವೇರಿತು. ಬ್ರಾಹ್ಮಣರು ಯಜ್ಞೋಪವೀತಂ ಜನಿವಾರಬದಲಾಯಿಸಿಕೊಂಡು ಸಂಧ್ಯಾವಂದನೆ, ಗಾಯತ್ರಿ ಜಪ, ಹೋಮ ನೆರವೇರಿಸುವ ಮೂಲಕ ಆಚರಿಸಿದರು. ಉಪಾಕರ್ಮದ ಅಂಗವಾಗಿ ಜನಿವಾರ ಧಾರಣೆ ಮಾಡಿದ ಸಮಾಜದ ಬ್ರಾಹ್ಮಣರಿಗೆ
ದೇವಸ್ಥಾನದ ಸಂಸ್ಥಾಪಕರಾದ ಡಾಕ್ಟರ್
ಬಾಷ್ಯಂ ಸ್ವಾಮೀಜಿ ಶುಭಕೋರಿ ಆಶೀರ್ವದಿಸಿದರು.
ನಂತರ ಮಾತನಾಡಿ
ಹಿಂದೂ ಧರ್ಮ ಶ್ರೇಷ್ಠವಾದದ್ದು. ಮಕ್ಕಳಲ್ಲಿ ಧಾರ್ಮಿಕತೆಯ ವಾಸ್ತವದ ವಿಚಾರಗಳ ಅರಿವಿನ ಕೊರತೆಯಿಂದ, ಧರ್ಮಕ್ಕೆ ಹಿನ್ನಡೆಯಾಗುತ್ತಿದೆ.ಹಿಂದೆ ವೃದ್ಧಾಶ್ರಮಗಳಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಜನತೆಯಲ್ಲಿ ಸಂಸ್ಕಾರ ಹಾಗೂ ಜೀವನ ಮೌಲ್ಯಗಳ ಕೊರತೆಯಿಂದಾಗಿ ಹಿರಿಯರ ಬಗ್ಗೆ ಗೌರವವಿಲ್ಲದೆ. ಇದರ ಪರಿಣಾಮ ಹಿರಿಯರನ್ನು ವೃದ್ಧಾಶಮಕ್ಕೆ ಸೇರಿಸುತ್ತಿರುವುದು ವಿಷಾದನೀಯ. ದೇವಸ್ಥಾನಗಳು ಕೇವಲ ಪೂಜೆ ಹಾಗೂ ಧಾರ್ಮಿಕ ಆಚರಣೆಗಳಿಗೆ ಸಿಮೀತವಾಗದೆ, ಸಾಮಾಜಿಕ ಕ್ಷೇತ್ರಗಳ ಅಭಿವೃದ್ಧಿಯ ಚಟುವಟಿಕೆಗಳೊಂದಿಗೆ ಸಮಾಜದ ಕುಂದು ಕೊರತೆಗಳಿಗೆ ಸ್ವಂದಿಸುವ ಕೇಂದ್ರಗಳಾಗಬೇಕು ಎಂದು ಹೇಳಿದರು.‘ಉಪ ಎಂದರೆ ಸಮೀಪ. ದೇವರ ಸಾಮಿಪ್ಯ ಹೊಂದಲು (ಮೋಕ್ಷ ಪ್ರಾಪ್ತಿ) ಪ್ರತಿಯೊಬ್ಬರು ದೇವರ ಮೇಲೆ ಶ್ರದ್ಧೆ ಇಟ್ಟು, ಉಪಾಸನೆ ಮಾಡಿ ಮೋಕ್ಷ ಪಡೆಯಲು ಪ್ರಯತ್ನಿಸಬೇಕು. ಆಚಾರ , ಒಳ್ಳೆಯ ಚಾರಿತ್ರ್ಯ, ಸನ್ಮಾರ್ಗಗಳನ್ನು ಅಳವಡಿಸಿಕೊಂಡು ದೇವರನ್ನು ಪೂಜಿಸಿದರೆ ನಮ್ಮ ಜನ್ಮ ಸಫಲವಾಗುತ್ತದೆ’ ಎಂದರು.ಯೋಗ ನರಸಿಂಹಸ್ವಾಮಿ ದೇವಸ್ಥಾನದ ವ್ಯವಸ್ಥೆಪಾಕರಾದ ಎನ್ ಶ್ರೀನಿವಾಸನ್, ಶೇಷಾದ್ರಿ, ಗಿರೀಶ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಚಕ್ರಪಾಣಿ, ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *