ಸ್ವಾಮಿ ವಿವೇಕಾನಂದರ ಬಗ್ಗೆ ಸತತ 14 ಗಂಟೆ 2 ನಿಮಿಷಗಳ ಕಾಲ ಭಾಷಣ…12ನೇ ವಯಸ್ಸಿನಲ್ಲೇ ವಿಶ್ವ ದಾಖಲೆ ನಿರ್ಮಿಸಿದ ಮಹೇಶ್ ಕುಮಾರ್…

ಸ್ವಾಮಿ ವಿವೇಕಾನಂದರ ಬಗ್ಗೆ ಸತತ 14 ಗಂಟೆ 2 ನಿಮಿಷಗಳ ಕಾಲ ಭಾಷಣ…12ನೇ ವಯಸ್ಸಿನಲ್ಲೇ ವಿಶ್ವ ದಾಖಲೆ ನಿರ್ಮಿಸಿದ ಮಹೇಶ್ ಕುಮಾರ್…

ಸ್ವಾಮಿ ವಿವೇಕಾನಂದರ ಬಗ್ಗೆ ಸತತ 14 ಗಂಟೆ 2
ಮೈಸೂರು,ಆ21,Tv10 ಕನ್ನಡ

ಸ್ವಾಮಿ ವಿವೇಕಾನಂದರ ಕುರಿತಂತೆ ಸತತ 14 ಗಂಟೆ 2 ನಿಮಿಷಗಳ ಕಾಲ ಭಾಷಣ ಮಾಡಿದ ಬನ್ನೂರಿಮ ಹನುಮನಾಳು ಗ್ರಾಮದ 12 ವರ್ಷದ ಬಾಲಕ ಮಹೇಶ್ ಕುಮಾರ್ ವಿಶ್ವದಾಖಲೆ ನಿರ್ಮಿಸಿದ್ದಾರೆ. ವಿವೇಕಾನಂದರ ಹುಟ್ಟು, ಬೆಳವಣಿಗೆ, ಜೀವನಗಾಥೆ, ಸಾಧನೆ ಮತ್ತು ವಿಶ್ವಕ್ಕೆ ಅವರ ಕೊಡುಗೆಗಳ ಬಗ್ಗೆ ಮಾತನಾಡಿ, ವೈಯಕ್ತಿಕ ವಿಭಾಗದಲ್ಲಿ ಎಲೈಟ್ ವರ್ಲ್ಡ್ ರೆಕಾರ್ಡ್ ಅಕಾಡೆಮಿ, ಏಷ್ಯನ್ ಅಕಾಡೆಮಿ, ಇಂಡಿಯ ರೆಕಾರ್ಡ್ಸ್ ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ನಗರದ ಪೂರ್ಣ ಚೇತನ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿರುವ ಮಹೇಶ್ ಕುಮಾರ್ ಎಚ್ಎಸ್ ನನ್ನು ಮೈಸೂರು ರಾಮಕೃಷ್ಣ ಆಶ್ರಮದ ಅದ್ಯಕ್ಷರಾದ ಸ್ವಾಮಿ ಶ್ರೀ ಮುಕ್ತಿದಾನಂದ ಮಹಾರಾಜ್ ರವರು ಆಶೀರ್ವಾದಿಸಿ ಪೂರ್ವಕವಾಗಿ ಸನ್ಮಾನಿಸಿದರು.

ನಂತರ ಮಾತನಾಡಿದ ಸ್ವಾಮೀಜಿ ರವರು
ಸ್ವಾಮಿ ವಿವೇಕಾನಂದರ ಸಾಧನೆ- ಬೋಧನೆ- ಜೀವನಗಾಥೆಯ ಅಪ್ಪಟ ಅಭಿಮಾನಿಯಾಗಿರುವ ವಿದ್ಯಾರ್ಥಿ ಮಹೇಶ್ ಕುಮಾರ್ ಎಚ್ ಎಸ್
ಮೈಸೂರು ಜಿಲ್ಲೆಯ ಬನ್ನೂರು ಸಮೀಪದ ಹನುಮನಾಳು ಎಂಬ ಪುಟ್ಟ ಗ್ರಾಮದ ಸೋಮಶೇಖರ ಮತ್ತು ತಾಯಮ್ಮ ಎಂಬ ರೈತ ದಂಪತಿಯ ಪುತ್ರ. ಒಂದರಿಂದ ಐದನೇ ತರಗತಿಯವರೆಗೆ ಹನುಮನಾಳಿನಲ್ಲಿ ವ್ಯಾಸಂಗ ಮಾಡಿದ, ಆತನಿಗೆ ಆರನೇ ತರಗತಿಯಿಂದ ನಗರದ ಎಚ್ ಡಿ ಕೋಟೆ ರಸ್ತೆಯಲ್ಲಿರುವ ಪೂರ್ಣ ಚೇತನ ಪಬ್ಲಿಕ್ ಶಾಲೆಯಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡು, ಇತರರಿಗೂ ಸಾರುವ ಗುರಿಯನ್ನು ಹೊಂದಿರುವ ಮಹೇಶ ಈ ವಿಶ್ವದಾಖಲೆ ಸೃಷ್ಟಿಸಿ, ಮೈಸೂರು ನಗರಕ್ಕೆ ಕೀರ್ತಿ ತಂದಿದ್ದಾನೆ. ಶಿಕ್ಷಕಿ ಶ್ರೀಮತಿ ತನುಜ ಆತನಿಗೆ ಅಗತ್ಯವಾದ ತರಭೇತಿ, ಸಹಾಯ, ಪ್ರೇರಣೆ ನೀಡಿದ್ದರು. ಕುಗ್ರಾಮದ ಪ್ರತಿಭೆಯಾಗಿದ್ದರೂ, ಸುಮಾರು ಐಧಾರು ವರ್ಷಗಳ ಹಿಂದೆಯೇ ತಮ್ಮ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರ ಬಗ್ಗೆ ವಿಚಾರಧಾರೆಗಳನ್ನು ತಿಳಿದು, ಅವರ ವ್ಯಕ್ತಿತ್ವದಿಂದ ಪ್ರೇರಿತನಾಗಿ, ಮಹೇಶ, ತನ್ನ ಓದು, ಆಸಕ್ತಿ, ಶ್ರದ್ದೆ ಮತ್ತು ವಿಶೇಷ ಪ್ರಯತ್ನದಿಂದ ಇಂದು ಸತತವಾಗಿ 14 ಗಂಟೆ ಗಳ ಕಾಲ ಸ್ವಾಮಿ ವಿವೇಕಾನಂದರ ಬಗ್ಗೆ ಮಾತಾನಾಡಿದ್ದು ಒಂದು ವಿಶೇಷತೆಯೇ ಸರಿ. ಇಷ್ಟು ಚಿಕ್ಕ ವಯಸ್ಸಿನಲ್ಲಿ 14 ಗಂಟೆಗಳ ಕಾಲ ಭಾಷಣ ಮಾಡುವುದು ಅಷ್ಟು ಸುಲಭದ ವಿಚಾರವಲ್ಲ. ಇದು ಮಹಾ ವಿಶ್ವ ಚೈತನ್ಯ ಸ್ವಾಮಿ ವಿವೇಕಾನಂದರ ಅನುಗ್ರಹ ಈತನ ಮೇಲಿರುವುದಕ್ಕೆ ಸಾಕ್ಷಿ. ಇಡೀ ಜಗತ್ತಿಗೆ ಮಾರ್ಗದರ್ಶಕರಾದ ಸ್ವಾಮಿ ವಿವೇಕಾನಂದರ ಚಿತ್ರಣವನ್ನು ಆತ ಶಬ್ದಗಳ ಮೂಲಕ ಎಲ್ಲರ ಮುಂದಿಟ್ಟಿದ್ದಾನೆ. ಭಗವಂತನು ಮಹೇಶನ ಆಂತರ್ಯಕ್ಕೆ ಸಹಜವಾಗಿ ಮೇಧಾಶಕ್ತಿ, ಬುದ್ಧಿ ಶಕ್ತಿ ಮತ್ತು ಕ್ರಿಯಾಶಕ್ತಿಯನ್ನು ಅಭಿವ್ಯಕ್ತಗೊಳಿಸುವ ಶಕ್ತಿ, ಪ್ರತಿಭೆ ನೀಡಿದ್ದಾನೆ. ಮಹೇಶ ಆಸಕ್ತಿ , ಶ್ರದ್ದೆ, ಬೆಳೆಸಿಕೊಂಡು, ಭಾರತ ದೇಶದ ಬಗ್ಗೆ ಒಂದು ಅದ್ಭುತ ದೇಶ ಪ್ರೇಮವನ್ನು ತೋರಿಸಿ ಇತರರಿಗೆ ಸ್ಪೂರ್ತಿಯಾಗಿರುತ್ತಾನೆ,” ಎಂದು ಸ್ವಾಮೀಜಿ ಅಭಿಪ್ರಾಯ ಪಟ್ಟರು.
ಶ್ರೀ ರಾಮಕೃಷ್ಣ ವಿದ್ಯಾಶಾಲಾದ ಸಂಚಾಲಕರಾದ ಸ್ವಾಮಿ ಶ್ರೀ ಯುಕ್ತೇಶಾನಂದ ಮಹಾರಾಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿ ಸಾಧಕನನ್ನು ಆಶೀರ್ವದಿಸಿದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *