ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಧೋಖಾ…ಮೂವರ ವಿರುದ್ದ FIR ದಾಖಲು…

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಧೋಖಾ…ಮೂವರ ವಿರುದ್ದ FIR ದಾಖಲು…

  • Crime
  • August 21, 2024
  • No Comment
  • 227

ಮೈಸೂರು,ಆ21,Tv10 ಕನ್ನಡ

ಮಂಡ್ಯ ಆರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರಿ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ಹಣ ವಂಚಿಸಿದ ಮೂವರ ವಿರುದ್ದ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ಯಾತಮಾರನಹಳ್ಳಿಯ ಕುಮಾರ್ ಹಾಗೂ ಪ್ರಮೋದ್ ಮತ್ತು ವಿನೋದ್ ಕುಮಾರ್ ಎಂಬುವರ ಮೇಲೆ ವಂಚನೆ ಪ್ರಕರಣ ದಾಖಲಾಗಿದೆ.ಧನುಷ್ ಕುಮಾರ್ ಎಂಬುವರು ವಂಚನೆಗೆ ಒಳಗಾಗಿ ಪ್ರಕರಣ ದಾಖಲಿಸಿದ್ದಾರೆ.

ಕುಮಾರ್ ಎಂಬಾತ ಧನುಷ್ ಕುಮಾರ್ ಗೆ ಪರಿಚಯವಾಗಿ ಮಂಡ್ಯಾ ದ ಆರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರಿ ಕೊಡಿಸುವುದಾಗಿ ನಂಬಿಸಿ ಪ್ರಮೋದ್ ನನ್ನು ಪರಿಚಯಿಸಿದ್ದಾನೆ.ಇಬ್ಬರೂ ಸೇರಿ ಧನುಷ್ ಕುಮಾರ್ ಬಳಿ ಹಂತಹಂತವಾಗಿ 3.80 ಲಕ್ಷ ಪಡೆದಿದ್ದಾರೆ.ಸುಮಾರು ಎರಡು ತಿಂಗಳು ಕಳೆದ ನಂತರ ಆರೋಗ್ಯ ಇಲಾಖೆಯ ವಿನೋದ್ ಕುಮಾರ್ ರವರು ನೀಡಿದ್ದಾರೆಂದು ಹೇಳಿ ಅಪಾಯಿಂಟ್ ಆದಂತೆ ನಿಯೋಜನೆ ಪತ್ರ,ಆದೇಶ ಪತ್ರ,ನಿಪೇಕ್ಷಣಾ ಪತ್ರ,ಪರಿಚಲನಾದೇಶ ಪತ್ರ,ಐಡಿ ಕಾರ್ಡ್ ಮತ್ತು ಇತರ ದಾಖಲೆಗಳನ್ನ ಕೊಟ್ಟಿದ್ದಾರೆ.ದಾಖಲೆಗಳನ್ನ ನೋಡಿ ಅನುಮಾನಗೊಂಡು ಮಂಡ್ಯ ಆರೋಗ್ಯ ಇಲಾಖೆ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದಾಗ ನಕಲಿ ಎಂದು ಖಚಿತವಾಗಿದೆ.ಇದೇ ರೀತಿ ವಿಜಯ್ ಕುಮಾರ್ ಎಂಬುವರಿಗೆ 3 ಲಕ್ಷ,ರಾಘವೇಂದ್ರ ಎಂಬುವರಿಗೆ 3.8 ಲಕ್ಷ,ಕೃಷ್ಣವೇಣಿ ಎಂಬುವರಿಂದ 3.9 ಲಕ್ಷ,ಮಹೇಶ್ ಎಂಬುವರಿಂದ 3.5 ಲಕ್ಷ ಹಣ ಪೀಕಿರುವುದು ಬೆಳಕಿಗೆ ಬಂದಿದೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ FIR ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *