ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಧೋಖಾ…ಮೂವರ ವಿರುದ್ದ FIR ದಾಖಲು…

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಧೋಖಾ…ಮೂವರ ವಿರುದ್ದ FIR ದಾಖಲು…

  • Crime
  • August 21, 2024
  • No Comment
  • 174

ಮೈಸೂರು,ಆ21,Tv10 ಕನ್ನಡ

ಮಂಡ್ಯ ಆರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರಿ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ಹಣ ವಂಚಿಸಿದ ಮೂವರ ವಿರುದ್ದ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ಯಾತಮಾರನಹಳ್ಳಿಯ ಕುಮಾರ್ ಹಾಗೂ ಪ್ರಮೋದ್ ಮತ್ತು ವಿನೋದ್ ಕುಮಾರ್ ಎಂಬುವರ ಮೇಲೆ ವಂಚನೆ ಪ್ರಕರಣ ದಾಖಲಾಗಿದೆ.ಧನುಷ್ ಕುಮಾರ್ ಎಂಬುವರು ವಂಚನೆಗೆ ಒಳಗಾಗಿ ಪ್ರಕರಣ ದಾಖಲಿಸಿದ್ದಾರೆ.

ಕುಮಾರ್ ಎಂಬಾತ ಧನುಷ್ ಕುಮಾರ್ ಗೆ ಪರಿಚಯವಾಗಿ ಮಂಡ್ಯಾ ದ ಆರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರಿ ಕೊಡಿಸುವುದಾಗಿ ನಂಬಿಸಿ ಪ್ರಮೋದ್ ನನ್ನು ಪರಿಚಯಿಸಿದ್ದಾನೆ.ಇಬ್ಬರೂ ಸೇರಿ ಧನುಷ್ ಕುಮಾರ್ ಬಳಿ ಹಂತಹಂತವಾಗಿ 3.80 ಲಕ್ಷ ಪಡೆದಿದ್ದಾರೆ.ಸುಮಾರು ಎರಡು ತಿಂಗಳು ಕಳೆದ ನಂತರ ಆರೋಗ್ಯ ಇಲಾಖೆಯ ವಿನೋದ್ ಕುಮಾರ್ ರವರು ನೀಡಿದ್ದಾರೆಂದು ಹೇಳಿ ಅಪಾಯಿಂಟ್ ಆದಂತೆ ನಿಯೋಜನೆ ಪತ್ರ,ಆದೇಶ ಪತ್ರ,ನಿಪೇಕ್ಷಣಾ ಪತ್ರ,ಪರಿಚಲನಾದೇಶ ಪತ್ರ,ಐಡಿ ಕಾರ್ಡ್ ಮತ್ತು ಇತರ ದಾಖಲೆಗಳನ್ನ ಕೊಟ್ಟಿದ್ದಾರೆ.ದಾಖಲೆಗಳನ್ನ ನೋಡಿ ಅನುಮಾನಗೊಂಡು ಮಂಡ್ಯ ಆರೋಗ್ಯ ಇಲಾಖೆ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದಾಗ ನಕಲಿ ಎಂದು ಖಚಿತವಾಗಿದೆ.ಇದೇ ರೀತಿ ವಿಜಯ್ ಕುಮಾರ್ ಎಂಬುವರಿಗೆ 3 ಲಕ್ಷ,ರಾಘವೇಂದ್ರ ಎಂಬುವರಿಗೆ 3.8 ಲಕ್ಷ,ಕೃಷ್ಣವೇಣಿ ಎಂಬುವರಿಂದ 3.9 ಲಕ್ಷ,ಮಹೇಶ್ ಎಂಬುವರಿಂದ 3.5 ಲಕ್ಷ ಹಣ ಪೀಕಿರುವುದು ಬೆಳಕಿಗೆ ಬಂದಿದೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ FIR ದಾಖಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *